TOP STORIES:

FOLLOW US

ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಾನ್ನಿಧ್ಯ ನಿರ್ಮಾಣದ ಶಿಲಾನ್ಯಾಸ


ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಮಿತಿ ರಿಜಿಸ್ಟರ್ಡ್ ಇದರ ನವೀಕೃತ ಶ್ರೀ ನಾಗಸಾನ್ನಿಧ್ಯ ಗರಡಿಮನೆ, ಧರ್ಮಚಾವಡಿ, ಜಲದುರ್ಗೆ ,ಭದ್ರಕಾಳಿ ಗುಡಿ, ಪಂಚದೈವ ,ಭೈರವ ಶಕ್ತಿ ,ಕಲ್ಲುರ್ಟಿ ಪಂಜುರ್ಲಿ ಹಾಗೂ ಸಂಘ ಪರಿವಾರ ದೈವಗಳ ಸಾನ್ನಿಧ್ಯ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ರವಿವಾರ ಯಶಸ್ವಿಯಾಗಿ ಜರಗಿತು .

ಭಾರತ ಸರಕಾರದ ಮಾಜಿ ಸಚಿವ ಗೌರವಾನ್ವಿತ ಶ್ರೀ ಬಿ. ಜನಾರ್ದನ ಪೂಜಾರಿಯವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಬಂಟ್ವಾಳ ತಾಲ್ಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಕೆ ಸೇಸಪ್ಪ ಕೋಟ್ಯಾನ್ ರವರ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ಆರಾಧನಾ ಸಮಿತಿಯ ಅಧ್ಯಕ್ಷರಾದ ಮರಕಡಬೈಲು ಗುತ್ತು ಶ್ರೀ ರಾಘವ ಅಮೀನ್ ರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬದ ಬಂಧುಗಳು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿದರು .

ನಂತರ ಜನಾರ್ದನ ಪೂಜಾರಿ ಅವರು ಮಾತನಾಡಿ ನೂತನವಾಗಿ ವಾಗಿ ನಿರ್ಮಾಣ ಗೊಳ್ಳಲಿರುವ ಈ ಧರ್ಮ ಚಾವಡಿ ಅತಿ ಶೀಘ್ರವಾಗಿ ನಿರ್ಮಾಣವಾಗಲಿ ತನ್ನ ಪೂರ್ಣ ಸಹಕಾರವನ್ನು ಈ ಪುಣ್ಯಕಾರ್ಯಕ್ಕೆ ನೀಡುವುದಾಗಿ ತಿಳಿಸಿ ದರು.

ಕುಟುಂಬದ ಎಲ್ಲಾ ಬಂಧುಗಳು ಈ ಪುಣ್ಯಕಾರ್ಯದಲ್ಲಿ ಕೈಜೋಡಿಸಬೇಕೆಂದರು. ಜನಾರ್ದನ ಪೂಜಾರಿಯವರ ಜತೆಗೆ ಧರ್ಮಪತ್ನಿ ಶ್ರೀಮತಿ ಮಾಲತಿ ಜನಾರ್ದನ ಪೂಜಾರಿ ಮತ್ತು ಮಗ ಸಂತೋಷ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ನಂತರ ಕುಟುಂಬಿಕರ ಸಭೆಯು ಯಶಸ್ವಿಯಾಗಿ ನಡೆಯಿತು . ಕುಟುಂಬಿಕರ ಸಭೆಯ ಅಧ್ಯಕ್ಷತೆ ವಹಿಸಿದ್ದ ಮರಕಡಬೈಲು ಗುತ್ತು ರಾಘವ ಅಮೀನ್ ಕುಟುಂಬದ ಬಂಧುಗಳಿಗೆ ಈ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು . ವೈದಿಕ ಕಾರ್ಯ ಗಳನ್ನು ನಡೆಸಿರುವ ಲೋಕೇಶ್ ಶಾಂತಿ ಅವರು ಆಶೀರ್ವಚನ ನೀಡಿದರು . ಸಮಿತಿಯ ಕಾರ್ಯದರ್ಶಿ ಶ್ರೀಧರ್ ಅಮೀನ್ ವರದಿ ವಾಚಿಸಿದರು . ಕೋಶಾಧಿಕಾರಿ ಸುರೇಂದ್ರ ಅಮೀನ್ ಲೆಕ್ಕಪತ್ರ ಮಂಡಿಸಿದರು . ಉಪಾಧ್ಯಕ್ಷರಾದ ದಿನೇಶ್ ಅಮೀನ್ ನೂತನ ಧರ್ಮ ಚಾವಡಿ ಯ ಬಗ್ಗೆ ವಿವರಗಳನ್ನು ನೀಡಿದರು . ಜತೆ ಕಾರ್ಯದರ್ಶಿ ಸಂದೀಪ್ ಸ್ವಾಗತಿಸಿ ಲೆಕ್ಕ ಪರಿಶೋಧಕರಾದ ಶ್ರೀಮತಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು . ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲು ಕಾರಣ ಕರ್ತರಾದ ಕುಟುಂಬದ ಎಲ್ಲ ಬಂಧುಗಳಿಗೆ ಸಮಿತಿಯ ವತಿಯಿಂದ ವಂದನೆಗಳನ್ನು ಸಲ್ಲಿಸುತ್ತಿದ್ದೇವೆ ಮುಂದೆಯೂ ಸಹಕಾರವನ್ನು ಪ್ರತಿ ಸಂದರ್ಭದಲ್ಲಿ ಯಾಚಿಸುತ್ತಿದ್ದೇವೆ ತಾವೆಲ್ಲರೂ ಈ ಪುಣ್ಯ ಕಾರ್ಯದಲ್ಲಿ ಕೈಜೋಡಿಸಿ ನಮ್ಮ ಕಾರ್ಯಕ್ರಮ ಯಶಸ್ವಿಯಾಗಲು ತಮ್ಮೆಲ್ಲರ ಸಹಕಾರವನ್ನು ಬಯಸುತ್ತೇವೆ.

 


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »