TOP STORIES:

ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಾನ್ನಿಧ್ಯ ನಿರ್ಮಾಣದ ಶಿಲಾನ್ಯಾಸ


ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಮಿತಿ ರಿಜಿಸ್ಟರ್ಡ್ ಇದರ ನವೀಕೃತ ಶ್ರೀ ನಾಗಸಾನ್ನಿಧ್ಯ ಗರಡಿಮನೆ, ಧರ್ಮಚಾವಡಿ, ಜಲದುರ್ಗೆ ,ಭದ್ರಕಾಳಿ ಗುಡಿ, ಪಂಚದೈವ ,ಭೈರವ ಶಕ್ತಿ ,ಕಲ್ಲುರ್ಟಿ ಪಂಜುರ್ಲಿ ಹಾಗೂ ಸಂಘ ಪರಿವಾರ ದೈವಗಳ ಸಾನ್ನಿಧ್ಯ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ರವಿವಾರ ಯಶಸ್ವಿಯಾಗಿ ಜರಗಿತು .

ಭಾರತ ಸರಕಾರದ ಮಾಜಿ ಸಚಿವ ಗೌರವಾನ್ವಿತ ಶ್ರೀ ಬಿ. ಜನಾರ್ದನ ಪೂಜಾರಿಯವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಬಂಟ್ವಾಳ ತಾಲ್ಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಕೆ ಸೇಸಪ್ಪ ಕೋಟ್ಯಾನ್ ರವರ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ಆರಾಧನಾ ಸಮಿತಿಯ ಅಧ್ಯಕ್ಷರಾದ ಮರಕಡಬೈಲು ಗುತ್ತು ಶ್ರೀ ರಾಘವ ಅಮೀನ್ ರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬದ ಬಂಧುಗಳು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿದರು .

ನಂತರ ಜನಾರ್ದನ ಪೂಜಾರಿ ಅವರು ಮಾತನಾಡಿ ನೂತನವಾಗಿ ವಾಗಿ ನಿರ್ಮಾಣ ಗೊಳ್ಳಲಿರುವ ಈ ಧರ್ಮ ಚಾವಡಿ ಅತಿ ಶೀಘ್ರವಾಗಿ ನಿರ್ಮಾಣವಾಗಲಿ ತನ್ನ ಪೂರ್ಣ ಸಹಕಾರವನ್ನು ಈ ಪುಣ್ಯಕಾರ್ಯಕ್ಕೆ ನೀಡುವುದಾಗಿ ತಿಳಿಸಿ ದರು.

ಕುಟುಂಬದ ಎಲ್ಲಾ ಬಂಧುಗಳು ಈ ಪುಣ್ಯಕಾರ್ಯದಲ್ಲಿ ಕೈಜೋಡಿಸಬೇಕೆಂದರು. ಜನಾರ್ದನ ಪೂಜಾರಿಯವರ ಜತೆಗೆ ಧರ್ಮಪತ್ನಿ ಶ್ರೀಮತಿ ಮಾಲತಿ ಜನಾರ್ದನ ಪೂಜಾರಿ ಮತ್ತು ಮಗ ಸಂತೋಷ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ನಂತರ ಕುಟುಂಬಿಕರ ಸಭೆಯು ಯಶಸ್ವಿಯಾಗಿ ನಡೆಯಿತು . ಕುಟುಂಬಿಕರ ಸಭೆಯ ಅಧ್ಯಕ್ಷತೆ ವಹಿಸಿದ್ದ ಮರಕಡಬೈಲು ಗುತ್ತು ರಾಘವ ಅಮೀನ್ ಕುಟುಂಬದ ಬಂಧುಗಳಿಗೆ ಈ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು . ವೈದಿಕ ಕಾರ್ಯ ಗಳನ್ನು ನಡೆಸಿರುವ ಲೋಕೇಶ್ ಶಾಂತಿ ಅವರು ಆಶೀರ್ವಚನ ನೀಡಿದರು . ಸಮಿತಿಯ ಕಾರ್ಯದರ್ಶಿ ಶ್ರೀಧರ್ ಅಮೀನ್ ವರದಿ ವಾಚಿಸಿದರು . ಕೋಶಾಧಿಕಾರಿ ಸುರೇಂದ್ರ ಅಮೀನ್ ಲೆಕ್ಕಪತ್ರ ಮಂಡಿಸಿದರು . ಉಪಾಧ್ಯಕ್ಷರಾದ ದಿನೇಶ್ ಅಮೀನ್ ನೂತನ ಧರ್ಮ ಚಾವಡಿ ಯ ಬಗ್ಗೆ ವಿವರಗಳನ್ನು ನೀಡಿದರು . ಜತೆ ಕಾರ್ಯದರ್ಶಿ ಸಂದೀಪ್ ಸ್ವಾಗತಿಸಿ ಲೆಕ್ಕ ಪರಿಶೋಧಕರಾದ ಶ್ರೀಮತಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು . ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲು ಕಾರಣ ಕರ್ತರಾದ ಕುಟುಂಬದ ಎಲ್ಲ ಬಂಧುಗಳಿಗೆ ಸಮಿತಿಯ ವತಿಯಿಂದ ವಂದನೆಗಳನ್ನು ಸಲ್ಲಿಸುತ್ತಿದ್ದೇವೆ ಮುಂದೆಯೂ ಸಹಕಾರವನ್ನು ಪ್ರತಿ ಸಂದರ್ಭದಲ್ಲಿ ಯಾಚಿಸುತ್ತಿದ್ದೇವೆ ತಾವೆಲ್ಲರೂ ಈ ಪುಣ್ಯ ಕಾರ್ಯದಲ್ಲಿ ಕೈಜೋಡಿಸಿ ನಮ್ಮ ಕಾರ್ಯಕ್ರಮ ಯಶಸ್ವಿಯಾಗಲು ತಮ್ಮೆಲ್ಲರ ಸಹಕಾರವನ್ನು ಬಯಸುತ್ತೇವೆ.

 


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »