TOP STORIES:

ಮಾದರಿಯಾದ ಕಾರ್ಕಳ ಉತ್ಸವ – ಪದ್ಮರಾಜ್ ಆರ್.


– ಪದ್ಮರಾಜ್ ಆರ್.

ವಕೀಲರು, ಕೋಶಾಧಿಕಾರಿ ಶ್ರೀ ಗೋಕರ್ಣನಾಥ ದೇವಸ್ಥಾನ ಕುದ್ರೋಳಿ

ಮಾದರಿಯಾದ ಕಾರ್ಕಳ ಉತ್ಸವ

ಸಚಿವ ಸುನೀಲ್ ಕುಮಾರ್ ನೇತೃತದಲ್ಲಿ ನಡೆಯುತ್ತಿರುವ ಕಾರ್ಕಳ ಉತ್ಸವ ಮಾದರಿ ಉತ್ಸವವಾಗುತ್ತಿದೆ. ಜಾತಿ ಮತ, ಪಕ್ಷ ಭೇದವಿಲ್ಲದೆ ಕಾರ್ಕಳದ ಸುತ್ತಮುತ್ತದ ಜನತೆಗೆ ಹಬ್ಬದ ವಾತಾವರಣ ಸೃಷ್ಟಿಸಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಕಾರ್ಕಳದ ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವುದಲ್ಲದೆ ರಾಜ್ಯದ ಹಾಗೂ ರಾಷ್ಟ್ರದ ವಿವಿಧ ಜನಪದ ಕಲೆ ಸಂಸ್ಕೃತಿಯನ್ನು ನಾಡಿಗೆ ಪರಿಚಯಿಸುವ ಮೂಲಕ ಹೊಸತನಕ್ಕೆ ನಾಂದಿ ಹಾಡಿರುವುದು ಶ್ಲಾಘನೀಯ. ಇಡೀ ಉತ್ಸವಕ್ಕೆ ಮೆರುಗು ಎಂಬಂತೆ ಹೆಲಿಕಾಪ್ಟರ್ ವಿಹಾರವನ್ನು ಸಚಿವರು ಪೌರ ಕಾರ್ಮಿಕರ ಜತೆ ಪಯಣಿಸುವ ಮೂಲಕ ಚಾಲನೆ ನೀಡಿ ಸಾಮಾನ್ಯರ ನಡುವಿನ ಸಚಿವ ಎನ್ನುವುದಕ್ಕೆ ಸಾಕ್ಷಿಯಾದರು. ಮಾತ್ರವಲ್ಲದೆ ಮರೆಯಾದ ಕಾರ್ಕಳದ ಸಾಧಕರನ್ನು ಸ್ಮರಿಸುವ ಕಾರ್ಯವೂ ಇಲ್ಲಿ ನಡೆದಿದೆ.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಾತ್ಮರ ಹೆಸರನ್ನು ವೇದಿಕೆ, ಮಳಿಗೆ ಸಭಾಂಗಣಗಳಿಗೆ ಹೆಸರಿಸುವ ಮೂಲಕ ಗೌರವ ನಮನ ಸಲ್ಲಿಸಿರುವುದು ಮಾದರಿ. ಜಸ್ಟೀಸ್ ಕೆ.ಎಸ್.ಹೆಗ್ಡೆ ವೇದಿಕೆ, ಕಾರ್ಕಳದ ಶಾಸಕರಾಗಿದ್ದ ಸರಳ ರಾಜಕಾರಣಿ ದಿ.ಗೋಪಾಲ ಭಂಡಾರಿ, ಶಿಲ್ಪಕಲೆಯಲ್ಲಿ ಅಗಾಧ ಪಾಂಡಿತ್ಯ ಹೊಂದಿದ್ದ ಧರ್ಮಸ್ಥಳದ ಗೊಮ್ಮಟೇಶ್ವರನ ಮೂರ್ತಿ ಕೆತ್ತಿದ ಮಹಾನ್ ಶಿಲ್ಪಿ ದಿ.ರೆಂಜಾಳ ಗೋಪಾಲಕೃಷ್ಣ, ಮೊದಲ ಶಿಲ್ಪಕಲಾ ಅಧ್ಯಕ್ಷರಾಗಿದ್ದ ಶಿಲ್ಪಿ ಶ್ಯಾಮರಾಯ ಆಚಾರ್ಯ, ಕನ್ನಡ ಸಾಹಿತ್ಯ ಲೋಕದ ಮಹಾಕವಿ ನಂದಳಿಕೆಯ ಮುದ್ದಣ್ಣ, ಕರ್ನಾಟಕದ ಏಕೀಕರಣಕ್ಕಾಗಿ ಅವಿರತ ಹೋರಾಡಿದ ಕಾಂತಾವರ ಬಾರಾಡಿ ಬೀಡಿನ ಜಿನರಾಜ ಹೆಗ್ಡೆ, ಅಡುಗೆ ಭೋಜಣ್ಣ ಎಂದೇ ಖ್ಯಾತರಾಗಿದ್ದ ಮುಡಾರು ಗ್ರಾಮದ ಭೋಜರಾಜ ಜೈನ್ ಬನ್ನಾಡಿ ಹೆಸರಲ್ಲಿ ವೇದಿಕೆ ಮಾಡುವ ಮೂಲಕ ಅಗಲಿದವರನ್ನು ನೆನಪಿಸುವ ಕಾರ್ಯ ಮಾಡಿರುವುದು ಉತ್ತಮ ಹೆಜ್ಜೆ. ಅಲ್ಲದೆ ತಾಲೂಕಿನಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸುವ ಕಾರ್ಯವೂ ನಡೆಯುತ್ತಿರುವುದು ಶ್ಲಾಘನೀಯ. ಈ ರೀತಿ ಎಲ್ಲ ರಾಜಕಾರಣಿಗಳು ಜಾತಿ ಮತ, ಪಕ್ಷ ಭೇದ ಮರೆತು ಮಾದರಿ ಕಾರ್ಯಕ್ರಮ ಆಯೋಜಿಸುವ ಪ್ರಯತ್ನ ಮಾಡಲಿ….

 

 


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »