TOP STORIES:

FOLLOW US

ಮಾದರಿಯಾದ ಕಾರ್ಕಳ ಉತ್ಸವ – ಪದ್ಮರಾಜ್ ಆರ್.


– ಪದ್ಮರಾಜ್ ಆರ್.

ವಕೀಲರು, ಕೋಶಾಧಿಕಾರಿ ಶ್ರೀ ಗೋಕರ್ಣನಾಥ ದೇವಸ್ಥಾನ ಕುದ್ರೋಳಿ

ಮಾದರಿಯಾದ ಕಾರ್ಕಳ ಉತ್ಸವ

ಸಚಿವ ಸುನೀಲ್ ಕುಮಾರ್ ನೇತೃತದಲ್ಲಿ ನಡೆಯುತ್ತಿರುವ ಕಾರ್ಕಳ ಉತ್ಸವ ಮಾದರಿ ಉತ್ಸವವಾಗುತ್ತಿದೆ. ಜಾತಿ ಮತ, ಪಕ್ಷ ಭೇದವಿಲ್ಲದೆ ಕಾರ್ಕಳದ ಸುತ್ತಮುತ್ತದ ಜನತೆಗೆ ಹಬ್ಬದ ವಾತಾವರಣ ಸೃಷ್ಟಿಸಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಕಾರ್ಕಳದ ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವುದಲ್ಲದೆ ರಾಜ್ಯದ ಹಾಗೂ ರಾಷ್ಟ್ರದ ವಿವಿಧ ಜನಪದ ಕಲೆ ಸಂಸ್ಕೃತಿಯನ್ನು ನಾಡಿಗೆ ಪರಿಚಯಿಸುವ ಮೂಲಕ ಹೊಸತನಕ್ಕೆ ನಾಂದಿ ಹಾಡಿರುವುದು ಶ್ಲಾಘನೀಯ. ಇಡೀ ಉತ್ಸವಕ್ಕೆ ಮೆರುಗು ಎಂಬಂತೆ ಹೆಲಿಕಾಪ್ಟರ್ ವಿಹಾರವನ್ನು ಸಚಿವರು ಪೌರ ಕಾರ್ಮಿಕರ ಜತೆ ಪಯಣಿಸುವ ಮೂಲಕ ಚಾಲನೆ ನೀಡಿ ಸಾಮಾನ್ಯರ ನಡುವಿನ ಸಚಿವ ಎನ್ನುವುದಕ್ಕೆ ಸಾಕ್ಷಿಯಾದರು. ಮಾತ್ರವಲ್ಲದೆ ಮರೆಯಾದ ಕಾರ್ಕಳದ ಸಾಧಕರನ್ನು ಸ್ಮರಿಸುವ ಕಾರ್ಯವೂ ಇಲ್ಲಿ ನಡೆದಿದೆ.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಾತ್ಮರ ಹೆಸರನ್ನು ವೇದಿಕೆ, ಮಳಿಗೆ ಸಭಾಂಗಣಗಳಿಗೆ ಹೆಸರಿಸುವ ಮೂಲಕ ಗೌರವ ನಮನ ಸಲ್ಲಿಸಿರುವುದು ಮಾದರಿ. ಜಸ್ಟೀಸ್ ಕೆ.ಎಸ್.ಹೆಗ್ಡೆ ವೇದಿಕೆ, ಕಾರ್ಕಳದ ಶಾಸಕರಾಗಿದ್ದ ಸರಳ ರಾಜಕಾರಣಿ ದಿ.ಗೋಪಾಲ ಭಂಡಾರಿ, ಶಿಲ್ಪಕಲೆಯಲ್ಲಿ ಅಗಾಧ ಪಾಂಡಿತ್ಯ ಹೊಂದಿದ್ದ ಧರ್ಮಸ್ಥಳದ ಗೊಮ್ಮಟೇಶ್ವರನ ಮೂರ್ತಿ ಕೆತ್ತಿದ ಮಹಾನ್ ಶಿಲ್ಪಿ ದಿ.ರೆಂಜಾಳ ಗೋಪಾಲಕೃಷ್ಣ, ಮೊದಲ ಶಿಲ್ಪಕಲಾ ಅಧ್ಯಕ್ಷರಾಗಿದ್ದ ಶಿಲ್ಪಿ ಶ್ಯಾಮರಾಯ ಆಚಾರ್ಯ, ಕನ್ನಡ ಸಾಹಿತ್ಯ ಲೋಕದ ಮಹಾಕವಿ ನಂದಳಿಕೆಯ ಮುದ್ದಣ್ಣ, ಕರ್ನಾಟಕದ ಏಕೀಕರಣಕ್ಕಾಗಿ ಅವಿರತ ಹೋರಾಡಿದ ಕಾಂತಾವರ ಬಾರಾಡಿ ಬೀಡಿನ ಜಿನರಾಜ ಹೆಗ್ಡೆ, ಅಡುಗೆ ಭೋಜಣ್ಣ ಎಂದೇ ಖ್ಯಾತರಾಗಿದ್ದ ಮುಡಾರು ಗ್ರಾಮದ ಭೋಜರಾಜ ಜೈನ್ ಬನ್ನಾಡಿ ಹೆಸರಲ್ಲಿ ವೇದಿಕೆ ಮಾಡುವ ಮೂಲಕ ಅಗಲಿದವರನ್ನು ನೆನಪಿಸುವ ಕಾರ್ಯ ಮಾಡಿರುವುದು ಉತ್ತಮ ಹೆಜ್ಜೆ. ಅಲ್ಲದೆ ತಾಲೂಕಿನಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸುವ ಕಾರ್ಯವೂ ನಡೆಯುತ್ತಿರುವುದು ಶ್ಲಾಘನೀಯ. ಈ ರೀತಿ ಎಲ್ಲ ರಾಜಕಾರಣಿಗಳು ಜಾತಿ ಮತ, ಪಕ್ಷ ಭೇದ ಮರೆತು ಮಾದರಿ ಕಾರ್ಯಕ್ರಮ ಆಯೋಜಿಸುವ ಪ್ರಯತ್ನ ಮಾಡಲಿ….

 

 


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »