TOP STORIES:

ಮಾರಕ ಕ್ಯಾನ್ಸರ್ಗೆ ಮಂಗಳೂರಿನ ಮದ್ದು…20 ವರ್ಷಗಳ ಅವಧಿಗೆ ಪೇಟೆಂಟ್


ಮಂಗಳೂರು: ನಮ್ಮಲ್ಲಿರುವ ಕೃಷಿ ತೋಟಗಳಲ್ಲಿ ದೊರಕುವ ಹಡೆ ಬಳ್ಳಿ ಮಾರಕ ಕ್ಯಾನ್ಸರ್ ರೋಗಕ್ಕೆ ಮದ್ದು ಎನ್ನುವುದನ್ನು ಮಂಗಳೂರಿನ ಸಸ್ಯ ವಿಜ್ಞಾನಿಗಳು ಸಂಶೋಧಿಸಿದ್ದಾರೆ.

ಮಂಗಳೂರಿನ ವಿಜ್ಞಾನಿಗಳು ಹಡೆ ಬಳ್ಳಿ ಮೇಲೆ ಸಂಶೋಧನೆ ನಡೆಸಿದ್ದು ಮಾತ್ರವಲ್ಲದೆ ಅದನ್ನು ಶುದ್ಧೀಕರಣ ಮಾಡಿ ಕ್ಯಾನ್ಸರ್ ಗೆ ರಾಮಬಾಣವಾಗುವ ಅಂಶವನ್ನು ಪತ್ತೆ ಹಚ್ಚಿದ್ದಾರೆ. ಇದಕ್ಕೆ ಭಾರತ ಸರಕಾರದಿಂದ ಪೇಟೆಂಟ್ ಸಹ ಪಡೆದಿದ್ದಾರೆ. ಹಡೆ ಬಳ್ಳಿ ಮೇಲೆ ನಡೆದ ದೇಶದ ಮೊದಲ ಸಂಶೋಧನೆ ಇದಾಗಿದ್ದು , ಭಾರತದ ಮೊದಲ ಪೇಟೆಂಟ್ ಸಹ ಇದಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಸಸ್ಯ ಶಾಸ್ತ್ರ ಸಂಶೋಧಕರಾದ ಪ್ರೊ. ಕೆ. ಆರ್.ಚಂದ್ರಶೇಖರ್ ಮತ್ತು ಪ್ರೊ. ಭಾಗ್ಯ ನಕ್ರೆ ಕಲಾಯ ಹಡೆ ಬಳ್ಳಿ ಯನ್ನೂ ಸಂಶೋಧನೆ ಮಾಡಿದ್ದು,ಸದ್ಯ ಈ ಇಬ್ಬರು ವಿಜ್ಞಾನಿಗಳು ಮಂಗಳೂರು ಖಾಸಗಿ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ವಿಜ್ಞಾನಿಗಳು 2017 ರಂದು ಸಂಶೋಧನೆ ನಡೆಸಿ ಪೇಟೆಂಟ್ ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಬಹಳ ಸಮಯದ ನಂತರ ಪೇಟೆಂಟ್ ಲಭ್ಯವಾಗಿದೆ.20 ವರ್ಷಗಳ ಅವಧಿಗೆ ಪೇಟೆಂಟ್ ಲಭ್ಯವಾಗಿದ್ದು,ಈ ಸಂಶೋಧನಾ ಅಂಶ ಬಳಸಿ ಔಷಧಿ ತಯಾರಿಸಬಹುದಾಗಿದೆ. ಅಂಗಾಂಗ ಕಸಿ ಮಾಡಿದ ನಂತರ ರಾಸಾಯನಿಕ ಅಂಶ ಪತ್ತೆ ಮಾಡುವ ಸಂದರ್ಭದಲ್ಲಿ ಕ್ಯಾನ್ಸರ್ ಗೆ ಮರಕವಾಗಬಲ್ಲ ಟೆಂಟ್ರಾಡೈನ್ ಅಂಶವು ಈ ಹಡೆಬಳ್ಳಿ ಯಲ್ಲಿ ಇರುವ ಅಂಶ ಪತ್ತೆಯಾಗಿದೆ. ಭಾರತದಲ್ಲಿ ಇಲ್ಲಿಯವರೆಗೆ ಯಾರೂ ಕೂಡ ಈ ವಿಷಯದಲ್ಲಿ ಸಂಶೋಧನ ಮಾಡಿರಲಿಲ್ಲ. ಅದರಿಂದಾಗಿ ಇದು ಭಾರತದ ಮೊದಲ ಸಂಶೋಧನೆ ಎಂಬ ಹಿರಿಮೆಗೆ ಪಾತ್ರವಾಗಿದೆ. ಇದಕ್ಕೂ ಹಿಂದೆ ಚೀನಾದಲ್ಲಿ ಈ ರೀತಿಯ ಸಂಶೋಧನೆ ಮಾಡಲಾಗಿತ್ತು.ಅಲ್ಲಿನ ಬಳ್ಳಿಯಲ್ಲಿ ಟೆಂಟ್ರಾಡೈನ್ ಅಂಶವನ್ನು ಪತ್ತೆಮಾಡಿದ್ದರು. ಸಾಮಾನ್ಯವಾಗಿ ಈ ಹಡೆ ಬಳ್ಳಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಭಾಗದಲ್ಲಿ ಹೇರಳವಾಗಿ ದೊರೆಯುತ್ತವೆ. ಹಳ್ಳಿ ಜನರು ಈ ಬಳ್ಳಿಯನ್ನು ಹರೆದು ಹಣೆಗೆ ಹಚ್ಚುತ್ತಿದ್ದರು. ನೆಗಡಿ ಜ್ವರ ಶೀತ , ಮಧುಮೇಹ ಸೇರಿದಂತೆ ಹಲವು ರೋಗಗಳಿಗೆ ಇದು ಔಷಧವಾಗಿದೆ


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »