TOP STORIES:

ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ


ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ

ಕರ್ನಾಟಕ ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಬಿಲ್ಲವರು ಮತ್ತು ಈಡಿಗರು ಸಂಬಂಧಿತ ಉಪಪಂಗಡಗಳು ಈ ಹಿಂದಿನಿಂದಲೂ ಮೀಸಲಾತಿ ಪ್ರವರ್ಗ2A ನಿಂದ ಪ್ರವರ್ಗ1 ರಲ್ಲಿ ಅವಕಾಶ ಒದಗಿಸುವಂತೆ ಬೇಡಿಕೆ ಸಲ್ಲಿಸುತ್ತಾ ಬಂದಿದೆ. ಬ್ರಹ್ಮಾವರದಲ್ಲಿ ಜರಗಿದ ಬೃಹತ್ ಬಿಲ್ಲವ ಸಮಾವೇಶದಲ್ಲೂ ಈ ಬೇಡಿಕೆಯನ್ನೂ ಮಂಡಿಸಲಾಗಿತ್ತು.

ಆದರೆ ಯಾವುದೇ ಸೂಕ್ತ ಕ್ರಮಕೈಗೊಳ್ಳದ ರಾಜ್ಯ ಸರ್ಕಾರ ಬಿಲ್ಲವ, ಈಡಿಗ ಸಮುದಾಯವನ್ನು ವಂಚಿಸುತ್ತಿದೆ. ಮೀಸಲಾತಿಯ ಅನುಕೂಲವನ್ನು ಬೇರೆ ಬೇರೆ ಸಮುದಾಯಕ್ಕೆ ಮಾಡ ಹೊರಟಿರುವ ಕುರಿತು ನಮ್ಮ ವಿರೋಧವಲ್ಲ. ಆದರೆ ನಿನ್ನೆಯ ಉದಯವಾಣಿ ಹಾಗೂ ಇತರ ದಿನಪತ್ರಿಕೆ ಮುಖಪುಟ ಸುದ್ದಿ ಗಮನಿಸಿದಾಗ ಸರ್ಕಾರಕ್ಕೆ ಬಿಲ್ಲವ, ಈಡಿಗ ಸಮುದಾಯದ ಕುರಿತಾಗಿರುವ ನಿರ್ಲಕ್ಷ್ಯದ ಕುರಿತು ಸ್ಪಷ್ಟವಾಗುತ್ತದೆ. ಯಾಕೆ ಈ ರೀತಿಯ ತಾತ್ಸಾರ.

ಇತ್ತೀಚಿನ ದಿನಗಳಲ್ಲಿ ಬಿಲ್ಲವರಿಗೆ, ನಮ್ಮ ಆರಾಧ್ಯ ದೈವ ಕೋಟಿ ಚೆನ್ನಯರು, ಹಿರಿಯ ಬಿಲ್ಲವ ಮುಖಂಡ ಜನಾರ್ಧನ ಪೂಜಾರಿಯವರ ಕುರಿತು ಜಗದೀಶ್ ಅಧಿಕಾರಿ ಅವಹೇಳನ ಮಾಡಿದಾಗಲೂ ಆಡಳಿತ ಪಕ್ಷ ಜಗದೀಶ್ ಅಧಿಕಾರಿರವರ ವಿರುದ್ಧ ಕ್ರಮತೆಗೆದುಕೊಳ್ಳದೆ ಇರುವುದು ನೋಡಿದಾಗ ನಾವು ಕೇವಲ ವೋಟ್ ಬ್ಯಾಂಕ್ ಗೆ ಸೀಮಿತ ಅನ್ನುವ ಹಾಗೆ ಅನಿಸುತ್ತಿದೆ ಮತ್ತು ನಮ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದು ಇನ್ನೊಮ್ಮೆ ಸಾಭೀತಾಗಿದೆ.

ಸರ್ಕಾರ ಬಿಲ್ಲವ, ಈಡಿಗ ಸಮುದಾಯದ ಮೀಸಲಾತಿ ಸಂಪೂರ್ಣ ನಿರ್ಲಕ್ಷಿಸುತ್ತಿದ್ದು, ಇದರ ಬಗ್ಗೆ ನಮ್ಮ ಸಮುದಾಯದ ಜನಪ್ರತಿನಿಧಿಗಳಾಗಲಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಾಗಲಿ ಈ ಕುರಿತು ತುಟಿ ಬಿಚ್ಚದಿರದ್ದು ವಿಷಾದನೀಯ. ಇತರ ಸಮುದಾಯವು ಸರ್ಕಾರಕ್ಕೆ ಹೇಗೆ ಪ್ರಾಮುಖ್ಯವೊ ನಮ್ಮನ್ನೂ ಆದ್ಯತೆಯಲ್ಲಿ ಪರಿಗಣಿಸಬೇಕು. ಮೀಸಲಾತಿ ಸಂಬಂಧಿಸಿ ಎಲ್ಲಾ ಸವಲತ್ತುಗಳು ನಮಗೂ ದೊರಕುವಲ್ಲಿ ಸರ್ಕಾರ ಪ್ರಯತ್ನಿಸಬೇಕೆಂದು ಒತ್ತಾಯಿಸುತ್ತೇವೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ)


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »