TOP STORIES:

ಮುಕ್ತಾಯ ಹಂತ ತಲುಪಿದ ಪೃಥ್ವಿ ಅಂಬಾರ್- ಅಂಕಿತಾ ಅಮರ್ ನಟನೆಯ ‘ಅಬ ಜಬ ದಬ’


ಕಳೆದವರ್ಷ “ಕನ್ನಡ್ ಗೊತ್ತಿಲ್ಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ “ಅಬ ಜಬ ದಬ” ಚಿತ್ರರ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ.

ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ.

“ಕನ್ನಡ್ ಗೊತ್ತಿಲ್ಲ” ಚಿತ್ರದ ನಂತರ ನಾನು ರಚಿತಾ ರಾಮ್ ಅವರಿಗೊಂದು ಸಿನಿಮಾ ಮಾಡಬೇಕಿತ್ತು. ಅದು ದೊಡ್ಡ ಬಜೆಟ್ ನ ಚಿತ್ರವಾಗಿರುವುದರಿಂದ ಸ್ವಲ್ಪ ತಡವಾಯಿತು. ಅಷ್ಟರಲ್ಲಿ ಈ ಔಟ್ ಎಂಡ್ ಔಟ್ ಕಾಮಿಡಿಯಿರುವ ಈ ಚಿತ್ರದ ಕಥೆ ಸಿದ್ದಾವಾಯಿತು. ಕಥೆಗೆ ಒಳ್ಳೆಯ ಟೈಟಲ್ ಬೇಕಿತ್ತು. ಮನೆಯಲ್ಲಿ ನನ್ನ ಅಣ್ಣ, ಅವಳ ಮಗಳಿಗೆ ಅದೇನು ಹೇಳುತ್ತಾಳೊ.. ಗೊತ್ತೆ ಆಗಲ್ಲ “ಅಬ ಜಬ ದಬ” ಅಂತಾಳೆ ಎಂದ. ನಾನು ತಕ್ಷಣ ಈ ಶೀರ್ಷಿಕೆ ಚೆನ್ನಾಗಿದೆ ಅಂತ ಅದೇ ಇಟ್ಟಿದ್ದೀನಿ. ಆನಂತರ ಸ್ನೇಹಿತ ಅನಂತ ಕೃಷ್ಣ ನಿರ್ಮಾಣಕ್ಕೆ ಮುಂದಾದರು. ಪೃಥ್ವಿ ಅಂಬರ್ – ಅಂಕಿತ ಅಮರ್ ನಾಯಕ – ನಾಯಕಿ ಅಂತ ನಿಗದಿಯಾದರು.

ಅಚ್ಯುತಕುಮಾರ್ ಕುಮಾರ್, ಸುಧಾರಾಣಿ, ಹಿರಿಯ ನಟಿ ಊರ್ವಶಿ, ಬಾಬು ಹಿರಣ್ಣಯ್ಯ, ಸಂಗೀತಾ ಭಟ್ ನಮ್ಮ ಚಿತ್ರದಲ್ಲಿ ‌ಅಭಿನಯಿಸಲು ಒಪ್ಪಿದ್ದರು.‌ ಗಿರಿಧರ್ ದಿವಾನ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಸಮೀರ ಸಿಂಹ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.‌ ಎಲ್ಲರ ಸಹಕಾರದಿಂದ “ಅಬ ಜಬ ದಬ” ಒಳ್ಳೆಯ ಚಿತ್ರವಾಗಿ ಹೊರಹೊಮ್ಮಲಿದೆ. ನಿಮ್ಮೆಲ್ಲರ ಸಹಕಾರವಿರಲಿ ಎಂದರು ನಿರ್ದೇಶಕ ಮಯೂರ ರಾಘವೇಂದ್ರ.

ನನಗೆ ಮಯೂರ ರಾಘವೇಂದ್ರ ಕಥೆ ಇಷ್ಟವಾಯಿತು. ಇದು ಬರೀ ಕಾಮಿಡಿ ಸಿನಿಮಾ ಅಲ್ಲ. ಫ್ಯಾಂಟಸಿ ಕಾಮಿಡಿ ಸಿನಿಮಾ. ಚಿತ್ರದ ಹಾಡುಗಳು ಚೆನ್ನಾಗಿದೆ. ಊರ್ವಶಿ ಅವರಂತಹ ಹಿರಿಯ ನಟರೊಂದಿಗೆ ನಟಿಸಿದ್ದು ಸಂತೋಷವಾಗಿದೆ. ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ನನ್ನ ಪಾತ್ರ ಕೂಡ ಸುಂದರವಾಗಿದೆ ಎಂದರು ನಾಯಕ ಪೃಥ್ವಿ ಅಂಬರ್.

ಇದು ನಾನು ಬಣ್ಣ ಹಚ್ಚಿದ ಮೊದಲ ಚಿತ್ರ. ಪ್ರಿಯ ನನ್ನ ಪಾತ್ರದ ಹೆಸರು. ನಾನು ಈ ಚಿತ್ರದಲ್ಲಿ ಗಾಯಕಿ. ಎಸ್.ಪಿ.ಬಿ ಅವರ ಅಭಿಮಾನಿ ಎಂದು ತಮ್ಮ ಪಾತ್ರದ ಬಗ್ಗೆ ನಾಯಕಿ ಅಂಕಿತ ಅಮರ್ ಮಾಹಿತಿ ನೀಡಿದರು.

ಮೂರು ವರ್ಷಗಳ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಸುನಂದಾ ಕಾಂಬ್ರೇಕರ್ ನನ್ನ ಪಾತ್ರದ ಹೆಸರು. ವಿಶೇಷ ಪಾತ್ರ ಅಂತ ಹೇಳಬಹುದು ಎಂದರು ನಟಿ ಸಂಗೀತಾ ಭಟ್. ನಿರ್ಮಾಪಕ ಅನಂತ ಕೃಷ್ಣ, ಛಾಯಾಗ್ರಾಹಕ ಗಿರಿಧರ್ ದಿವಾನ್ ಹಾಗೂ ನಟ ಬಾಬು ಹಿರಣ್ಣಯ್ಯ ಚಿತ್ರದ ಕುರಿತು ಮಾತನಾಡಿದರು. ಸತೀಶ್ ರಘುನಾಥನ್ ಈ ಚಿತ್ರದ ಸಂಗೀತ ನಿರ್ದೇಶಕರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »