TOP STORIES:

ಯುವಕರ ಐಕಾನ್ ಪದ್ಮರಾಜ್ ಬಗ್ಗೆ ಕಾಂಗ್ರೆಸ್ ಒಲವು ವಿಧಾನ ಸಭಾ ಟಿಕೆಟ್ ಗ್ಯಾರಂಟಿ,


ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದೇ ಗೆಲ್ಲಬೇಕು ಎನ್ನುವ  ಚಾಣಕ್ಯ ರಾಜಕೀಯ ಹೆಜ್ಜೆ ಇಡುತ್ತಿರುವಕಾಂಗ್ರೆಸ್,  ಹೈಕಮಾಂಡ್  ಜಾತಿ ಧರ್ಮದ ಭೇದವಿಲ್ಲದೆ ಎಲ್ಲರನ್ನೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವಸರಳ ಸಜ್ಜನಿಕೆಯ ಗುಣ ಹೊಂದಿರುವ ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್ ಬಗ್ಗೆ ವಿಶೇಷ ಒಲವುವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ.

ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ನೆಲೆಯಲ್ಲಿ ಸಮಾಜ ಸೇವೆಯಲ್ಲಿ  ಮೈಗೂಡಿಸಿಕೊಂಡು, ಅಪಾರ ಶ್ರದ್ಧೆ, ಭಕ್ತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಬಹು ದೊಡ್ಡ ಜವಾಬ್ದಾರಿಯನ್ನು  ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡು25 ವರ್ಷಗಳಿಂದ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಇವರು ಕ್ಷೇತ್ರದ ಅಭಿವೃದ್ಧಿಯರುವಾರಿ ಜನಾರ್ದನ ಪೂಜಾರಿಯವರ ಅಪ್ಪಟ ಅನುಯಾಯಿಯಾಗಿ ದೇವಸ್ಥಾನಗಳು ಧಾರ್ಮಿಕತೆಯ ಜತೆ ಸಮಾಜಮುಖಿಚಟುವಟಿಕೆಗಳಲ್ಲಿ ಕೂಡ ಮುಂದೆ ಬರಬೇಕೆಂದು ತೋರಿಸಿಕೊಟ್ಟವರು.

1995 ರಿಂದ ಕಾನೂನು ವೃತ್ತಿಯ ಚೊಚ್ಚಲ ಅಭ್ಯಾಸವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿಯವರೊಂದಿಗೆಪ್ರಾರಂಭಿಸಿ 4 ವರ್ಷಗಳ ಬಳಿಕ ಸ್ವಂತ ಕಚೇರಿಯನ್ನು ಪ್ರಾರಂಭಿಸಿದರು. ಶುದ್ಧಹಸ್ತದ ರಾಜಕಾರಣಿ ಬಿ.ಜನಾರ್ದನ ಪೂಜಾರಿಯವರಎಲ್ಲ ಚುನಾವಣೆಗಳಲ್ಲಿ ಅವರೊಂದಿಗೆ ದುಡಿದಿರುವ ಇವರು ಜಾತ್ಯತೀತ ಮನೋಭಾವ, ಸರ್ವರಿಗೂ ಸಮಪಾಲು, ಸರ್ವರಿಗೂಸಮಬಾಳು ಎನ್ನುವ ತತ್ವ ಸಿದ್ಧಾಂತದ ಬಗ್ಗೆ ಒಲವು ಹೊಂದಿರುವವರು.

ಕರೊನಾ ಮಹಾಮಾರಿಯ ಸಂದರ್ಭ ಬಡವರ, ನಿರಾಶ್ರಿತರ, ಕೂಲಿಕಾರ್ಮಿಕರ ಸಹಾಯಕ್ಕೆಸ್ವತಃ ಮುಂದೆ ನಿಂತು ಕೆಲಸ ಮಾಡಿದ್ದು, ಗುರುಬೆಳದಿಂಗಳು ಸಂಸ್ಥೆಯ ಮೂಲಕ ಜನಾರ್ದನ ಪೂಜಾರಿಯವರ ಮಾರ್ಗದರ್ಶನ, ದಿ. ಜಯಸುವರ್ಣರ ಆಶೋತ್ತರಗಳಸ್ಫೂರ್ತಿಯ ನೆಲೆಯಲ್ಲಿ ಹಿರಿಯರ ಜತೆ ಕ್ರಿಯಾಶೀಲ ಯುವಕರ ತಂಡ ಕಟ್ಟಿಕೊಂಡು ಕೆಲಸ ಮಾಡುತ್ತಿರುವುದು ಪದ್ಮರಾಜ್ ವರ್ಚಸ್ಸನ್ನು ಇನ್ನಷ್ಟು ಹೆಚ್ಚಿಸಿತು.

ಗಣರಾಜ್ಯೋತ್ಸವದ ಪೆರೇಡ್‌ನಲ್ಲಿ ಶ್ರೀ ನಾರಾಯಣಗುರುಗಳ ಟ್ಯಾಬ್ಲೋ ನಿರಾಕರಣೆ ಸಂದರ್ಭ ಮುಂಚೂಣಿಯಲ್ಲಿ ನಿಂತುಹೋರಾಟ, 10ನೇ ತರಗತಿಯಲ್ಲಿ ಸಮಾಜ ವಿಜ್ಞಾನ ಪಠ್ಯ ಕೈಬಿಟ್ಟದರ ವಿರುದ್ಧ ಮೊದಲು ಖಂಡನೆ ವ್ಯಕ್ತಪಡಿಸಿ ಹೋರಾಟಸಂಘಟಿಸಿದ್ದು, ಸಮಾಜದ ಎಲ್ಲ ವರ್ಗದ ಜನರನ್ನು ಸಮಾನವಾಗಿ ಗೌರವಿಸುತ್ತ ಎಲ್ಲ ವರ್ಗದ ಜನರಿಂದ ಪ್ರೀತಿ ವಿಶ್ವಾಸ ಗಳಿಸಿದ್ದು. ಮೊದಲಾದ ಅಂಶಗಳ ಜತೆ ಪದ್ಮರಾಜ್‌ರವರಿಗೆ ವಿಧಾನಸಭಾ ಟಿಕೆಟ್ ನೀಡಿದರೆ ಅವರ ವರ್ಚಸ್ಸು ಎಲ್ಲಾ ವಿಭಾಗದಜನಸಮುದಾಯ ವನ್ನು ಆಕರ್ಷಿಸುವ ಜತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಸೀಟ್ ಗೆಲ್ಲಲುಸಹಾಯವಾಗುತ್ತದೆ ಎನ್ನುವ ಹಲವಾರು ಸಮೀಕ್ಷೆ ವರದಿಗಳು ಪದ್ಮರಾಜ್ ಆರ್‌ಗೆ ಸೀಟ್ ಗ್ಯಾರಂಟಿಯಾಗಲು ಪಕ್ಕಾ ಕಾರಣ ಎಂದುತಿಳಿದು ಬಂದಿದೆ. ಇವರಿಗೆ ಟಿಕೆಟ್ ನೀಡಿದರೆ ಕರಾವಳಿಯ ರಾಜಕೀಯದಲ್ಲಿ ಮಹತ್ವದ ತಿರುವು ಕಾಣಲಿದೆ ಎನ್ನುವ ಅಂಶವೂಬಹಿರಂಗವಾಗಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »