TOP STORIES:

ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು-2021


ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿವಿಶ್ವ ಮಹಿಳಾ ದಿನಾಚರಣೆ ಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು, ಮನೆ ಮಂದಿರಕ್ಕೆ ಮಂದಾರ ಪುಷ್ಪ ಎಂಬ ಕಾರ್ಯಕ್ರಮವನ್ನು 2021 ಮಾರ್ಚ್ 21ರ ಭಾನುವಾರ , ನಂದಿನಿ ಲೇಔಟ್ ನ ಸರ್ಕ್ಯುಲರ್ ಪಾರ್ಕ್ ಎಂಬಲ್ಲಿ ಬಹಳ ವಿಜ್ರಂಭಣೆಯಿಂದ ಆಚರಿಸಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಬೆಂಗಳೂರು ಘಟಕದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಪೂಜಾರಿ ಅವರು ಯುವವಾಹಿನಿ ನಡೆದು ಬಂದ ದಾರಿಯ ಬಗ್ಗೆ ಪ್ರಸ್ತಾವನೆ ಇಟ್ಟು ಸಭೆಗೆ ಅತಿಥಿಗಳೆಲ್ಲರನ್ನನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು.

ಬೆಂಗಳೂರಿನ ಬಿಲ್ಲವ ಅಸೋಸಿಯೇಷನ್ ನ ಅಧ್ಯಕ್ಷರಾದ ಶ್ರೀಯುತ ವೇದಕುಮಾರ್  ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶ್ರೀ ನಾರಾಯಣ ಗುರುಗಳು ತೋರಿಸಿದ ಮಾರ್ಗದ ಅಡಿಪಾಯದಲ್ಲಿ ಸಮಾಜದ ಒಗ್ಗಟ್ಟಿಗೆ ಕರೆಕೊಟ್ಟರು. ಎಲ್ಲರ ಒಗ್ಗಟ್ಟಿನೊಂದಿಗೆ ನಾರಾಯಣಗುರು ನಿಗಮದ ಸ್ಥಾಪನೆಗೆ ಸರ್ಕಾರವನ್ನು ಮತ್ತೊಮ್ಮೆ ನಾವೆಲ್ಲರೂ ಮನವೊಲಿಸಬೇಕೆಂದು ಕೇಳಿಕೊಂಡರು.

ಬಳಿಕ ಸಮಾಜದಲ್ಲಿ ಸಾಧನೆಗೈದ ಮಹಿಳೆಯರನ್ನು ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿದ ಡಾಕ್ಟರ್ ಉಷಾ ಮೋಹನ್ ಮಹಿಳೆಯರ ಸ್ವಾವಲಂಬಿಗಳಾಗಿ ಸಮಾಜಕ್ಕೆ ಇನ್ನಷ್ಟು ಕೊಡುಗೆಗಳನ್ನು ಕೊಡಬೇಕು ಎಂದು ಹೇಳಿದರು. ಮಕ್ಕಳ ರಕ್ಷಣೆ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ಚಿತ್ರಾ ಅಂಚನ್ ಅವರು ಸನ್ಮಾನವನ್ನು ಸ್ವೀಕರಿಸಿ 1098 ಚೈಲ್ಡ್ ಹೆಲ್ಪ್ ಲೈನ್ ಬಗ್ಗೆ ತಿಳಿಹೇಳಿದರು.

ಶ್ರೀಮತಿ ಮೀನಾ ಮತಿನ ಅವರು ತಮಗೆ ಯುವವಾಹಿನಿ ತಂಡದಿಂದ ಸಿಕ್ಕ ಗೌರವಕ್ಕೆ ಕೃತಜ್ಞತೆಯನ್ನು ಅರ್ಪಿಸಿ ಶ್ರೀ ನಾರಾಯಣ ಗುರುಗಳ ತತ್ವದಂತೆ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳೋಣ ಎಂದರು.

ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಮೂಡಿಬಂದ ಅಸಿಸ್ಟೆಂಟ್ ಕಮಿಷನರ್ ಆಫ್ ಪೋಲೀಸ್ (ACP) ಶ್ರೀಮತಿ ರೀನಾ ಸುವರ್ಣ ಇವರು ಸನ್ಮಾನವನ್ನು ಸ್ವೀಕರಿಸಿ, ಮಹಿಳೆಯರು ತಮ್ಮ ಕುಟುಂಬದ ಜವಾಬ್ದಾರಿ, ಕೆಲಸದ ಒತ್ತಡ ಹಾಗೂ ಸಮಾಜ ಸೇವಾಕಾರ್ಯಗಳ ನಡುವಿನ ಸಮತೋಲನವನ್ನು ಕಾಪಾಡುವುದು ಯಶಸ್ಸಿಗೆ ಪ್ರಮುಖ ಕಾರಣವಾಗುತ್ತದೆ ಎಂದರು.

ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ಶ್ರೀಮತಿ ರೇಷ್ಮಾ ಯತೀಶ್* ಇವರು ರಾಷ್ಟ್ರೀಯ ಮಟ್ಟದ ತಮ್ಮ ಸಾಧನೆಯ ಮೈಲುಗಲ್ಲನ್ನು ಸಭೆಯ ಮುಂದೆ ತೆರೆದಿಟ್ಟರು.

ಯುವವಾಹಿನಿ ಬೆಂಗಳೂರು ಘಟಕದ ಹಿರಿಯ ಮಹಿಳಾ ಸದಸ್ಯೆ ಮತ್ತು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅಂತಹ ಶ್ರೀಮತಿ ರುಕ್ಮಿಣಿ ರಾಮಕೃಷ್ಣ* ಇವರನ್ನು ಕೂಡ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಗೋವಿಂದ ಬಾಬು ಪೂಜಾರಿ* ಅವರು ಮತ್ತೊಮ್ಮೆ ಯುವವಾಹಿನಿಯ ಸಾಧನೆಗಳನ್ನು ಕೊಂಡಾಡಿ ಯುವಕರನ್ನು ಪ್ರೋತ್ಸಾಹಿಸಿ, ಸಂಘಟನೆಗಳಿಂದ ಇನ್ನಷ್ಟು ಯುವ ಸಮಾಜ ಬಲಯುತವಾಗಬೇಕು. ಮಹಿಳೆಯರು ಸಮಾಜ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಸ್ಥಳದಾನ ಮಾಡಿದಂತಹ ನಂದಿನಿ ಲೇಔಟ್ ವಾರ್ಡ್ ನ ಮಾಜಿ ಕಾರ್ಪೊರೇಟರ್ ಆದ ಶ್ರೀ ರಾಜೇಂದ್ರ ಕುಮಾರ್ ಕೆ ವಿ ಅವರು ಯುವ ಸಂಘಟನೆಗಳ ಮೂಲಕ ಮಹಿಳೆಯರ ಬಲವರ್ಧನೆ ಯಾಗಬೇಕು ಎಂದು ಹೇಳಿದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »