TOP STORIES:

ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು-2021


ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿವಿಶ್ವ ಮಹಿಳಾ ದಿನಾಚರಣೆ ಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು, ಮನೆ ಮಂದಿರಕ್ಕೆ ಮಂದಾರ ಪುಷ್ಪ ಎಂಬ ಕಾರ್ಯಕ್ರಮವನ್ನು 2021 ಮಾರ್ಚ್ 21ರ ಭಾನುವಾರ , ನಂದಿನಿ ಲೇಔಟ್ ನ ಸರ್ಕ್ಯುಲರ್ ಪಾರ್ಕ್ ಎಂಬಲ್ಲಿ ಬಹಳ ವಿಜ್ರಂಭಣೆಯಿಂದ ಆಚರಿಸಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಬೆಂಗಳೂರು ಘಟಕದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಪೂಜಾರಿ ಅವರು ಯುವವಾಹಿನಿ ನಡೆದು ಬಂದ ದಾರಿಯ ಬಗ್ಗೆ ಪ್ರಸ್ತಾವನೆ ಇಟ್ಟು ಸಭೆಗೆ ಅತಿಥಿಗಳೆಲ್ಲರನ್ನನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು.

ಬೆಂಗಳೂರಿನ ಬಿಲ್ಲವ ಅಸೋಸಿಯೇಷನ್ ನ ಅಧ್ಯಕ್ಷರಾದ ಶ್ರೀಯುತ ವೇದಕುಮಾರ್  ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶ್ರೀ ನಾರಾಯಣ ಗುರುಗಳು ತೋರಿಸಿದ ಮಾರ್ಗದ ಅಡಿಪಾಯದಲ್ಲಿ ಸಮಾಜದ ಒಗ್ಗಟ್ಟಿಗೆ ಕರೆಕೊಟ್ಟರು. ಎಲ್ಲರ ಒಗ್ಗಟ್ಟಿನೊಂದಿಗೆ ನಾರಾಯಣಗುರು ನಿಗಮದ ಸ್ಥಾಪನೆಗೆ ಸರ್ಕಾರವನ್ನು ಮತ್ತೊಮ್ಮೆ ನಾವೆಲ್ಲರೂ ಮನವೊಲಿಸಬೇಕೆಂದು ಕೇಳಿಕೊಂಡರು.

ಬಳಿಕ ಸಮಾಜದಲ್ಲಿ ಸಾಧನೆಗೈದ ಮಹಿಳೆಯರನ್ನು ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿದ ಡಾಕ್ಟರ್ ಉಷಾ ಮೋಹನ್ ಮಹಿಳೆಯರ ಸ್ವಾವಲಂಬಿಗಳಾಗಿ ಸಮಾಜಕ್ಕೆ ಇನ್ನಷ್ಟು ಕೊಡುಗೆಗಳನ್ನು ಕೊಡಬೇಕು ಎಂದು ಹೇಳಿದರು. ಮಕ್ಕಳ ರಕ್ಷಣೆ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ಚಿತ್ರಾ ಅಂಚನ್ ಅವರು ಸನ್ಮಾನವನ್ನು ಸ್ವೀಕರಿಸಿ 1098 ಚೈಲ್ಡ್ ಹೆಲ್ಪ್ ಲೈನ್ ಬಗ್ಗೆ ತಿಳಿಹೇಳಿದರು.

ಶ್ರೀಮತಿ ಮೀನಾ ಮತಿನ ಅವರು ತಮಗೆ ಯುವವಾಹಿನಿ ತಂಡದಿಂದ ಸಿಕ್ಕ ಗೌರವಕ್ಕೆ ಕೃತಜ್ಞತೆಯನ್ನು ಅರ್ಪಿಸಿ ಶ್ರೀ ನಾರಾಯಣ ಗುರುಗಳ ತತ್ವದಂತೆ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳೋಣ ಎಂದರು.

ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಮೂಡಿಬಂದ ಅಸಿಸ್ಟೆಂಟ್ ಕಮಿಷನರ್ ಆಫ್ ಪೋಲೀಸ್ (ACP) ಶ್ರೀಮತಿ ರೀನಾ ಸುವರ್ಣ ಇವರು ಸನ್ಮಾನವನ್ನು ಸ್ವೀಕರಿಸಿ, ಮಹಿಳೆಯರು ತಮ್ಮ ಕುಟುಂಬದ ಜವಾಬ್ದಾರಿ, ಕೆಲಸದ ಒತ್ತಡ ಹಾಗೂ ಸಮಾಜ ಸೇವಾಕಾರ್ಯಗಳ ನಡುವಿನ ಸಮತೋಲನವನ್ನು ಕಾಪಾಡುವುದು ಯಶಸ್ಸಿಗೆ ಪ್ರಮುಖ ಕಾರಣವಾಗುತ್ತದೆ ಎಂದರು.

ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ಶ್ರೀಮತಿ ರೇಷ್ಮಾ ಯತೀಶ್* ಇವರು ರಾಷ್ಟ್ರೀಯ ಮಟ್ಟದ ತಮ್ಮ ಸಾಧನೆಯ ಮೈಲುಗಲ್ಲನ್ನು ಸಭೆಯ ಮುಂದೆ ತೆರೆದಿಟ್ಟರು.

ಯುವವಾಹಿನಿ ಬೆಂಗಳೂರು ಘಟಕದ ಹಿರಿಯ ಮಹಿಳಾ ಸದಸ್ಯೆ ಮತ್ತು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅಂತಹ ಶ್ರೀಮತಿ ರುಕ್ಮಿಣಿ ರಾಮಕೃಷ್ಣ* ಇವರನ್ನು ಕೂಡ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಗೋವಿಂದ ಬಾಬು ಪೂಜಾರಿ* ಅವರು ಮತ್ತೊಮ್ಮೆ ಯುವವಾಹಿನಿಯ ಸಾಧನೆಗಳನ್ನು ಕೊಂಡಾಡಿ ಯುವಕರನ್ನು ಪ್ರೋತ್ಸಾಹಿಸಿ, ಸಂಘಟನೆಗಳಿಂದ ಇನ್ನಷ್ಟು ಯುವ ಸಮಾಜ ಬಲಯುತವಾಗಬೇಕು. ಮಹಿಳೆಯರು ಸಮಾಜ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಸ್ಥಳದಾನ ಮಾಡಿದಂತಹ ನಂದಿನಿ ಲೇಔಟ್ ವಾರ್ಡ್ ನ ಮಾಜಿ ಕಾರ್ಪೊರೇಟರ್ ಆದ ಶ್ರೀ ರಾಜೇಂದ್ರ ಕುಮಾರ್ ಕೆ ವಿ ಅವರು ಯುವ ಸಂಘಟನೆಗಳ ಮೂಲಕ ಮಹಿಳೆಯರ ಬಲವರ್ಧನೆ ಯಾಗಬೇಕು ಎಂದು ಹೇಳಿದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »