TOP STORIES:

ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.


ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಸವೇಶ್ವರನಗರದ ಪಿವಿಪಿಸ್ಕೂಲ್ ನಲ್ಲಿ ತಾ.13 ನವೆಂಬರ್ 2021 ಶನಿವಾರದಂದು ಬೆಳಿಗ್ಗೆ 9.00 ರಿಂದ 1.00 ಗಂಟೆಯವರೆಗೆ ಬಹಳ ಅದ್ದೂರಿಯಾಗಿಆಚರಿಸಲಾಯಿತು.

ಮಕ್ಕಳೆಲ್ಲರೂ ಸೇರಿ ನಾಡಗೀತೆಯನ್ನು ಹಾಡಿ, ಶ್ರೀ ನಾರಾಯಣ ಗುರುಗಳ ಹಾಗೂ ನೆಹರೂ ಭಾವಚಿತ್ರಕ್ಕೆ ಪೂಜೆಯನ್ನುಸಲ್ಲಿಸುವುದರ ಮೂಲಕ ಆರಂಭವಾದ ಕಾರ್ಯಕ್ರಮವನ್ನು ಘಟಕದ ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾದ ಶ್ರೀಮತಿ ಅನಿತಾಕಮಲಾಕ್ಷ  ಜೊತೆ ಕಾರ್ಯದರ್ಶಿ ಶ್ರೀಮತಿ ಅಕ್ಷತಾ ಸುಧೀರ್ ಇವರು ಮುನ್ನಡೆಸಿ ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳನ್ನುನಡೆಸಿಕೊಟ್ಟರು.

ಬಳಿಕ ಪ್ರೇರಕ ವಾಗ್ಮಿ ಶ್ರೀ ರಾಜೇಶ್ ಗೋಪೆ ಇವರು ಮಕ್ಕಳಿಗಾಗಿ ವಿವಿಧ ಪ್ರೇರೇಪಣಾ ಚಟುವಟಿಕೆಗಳನ್ನು ನಡೆಸಿ ಮಕ್ಕಳೊಂದಿಗೆಹಾಡಿ ಕುಣಿದರಲ್ಲದೆ ಮಕ್ಕಳೆಲ್ಲರನ್ನೂ ಧ್ಯಾನಾಸಕ್ತರನ್ನಾಗಿಸಿದರು.

11.30 ಸುಮಾರಿಗೆ ಸಭಾ ಕಾರ್ಯಕ್ರಮವು ಆರಂಭಗೊಂಡಿತು. ಪಿವಿಪಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕಾಲೈವೇಣಿ ಅವರು ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು.

ಕಾರ್ಯಕ್ರಮದ ಉದ್ಘಾಟಕರಾದ ಯುವವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ. ಅವರು ದೀಪಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರ್ಕಾರಿ ಶಾಲೆಯಲ್ಲಿ ಕಳೆದ ತಮ್ಮ ಬಾಲ್ಯದ ದಿನಗಳನ್ನುನೆನಪಿಸಿಕೊಂಡು ಶಾಲಾಮಕ್ಕಳಿಗೆ ಉತ್ತಮ ನಡವಳಿಕೆಯ ಕಿವಿಮಾತುಗಳನ್ನಾಡಿದರು.

ಪಿವಿಪಿ ಶಾಲೆಯ ವಿದ್ಯಾಧಿಕಾರಿಗಳಾದ ಶ್ರೀ ಸೋಮಶೇಖರ್ ಅವರು ಮಾತನಾಡಿ ಯುವವಾಹಿನಿಯ ಸಮಾಜ ಸೇವಾಕಾರ್ಯಗಳನ್ನು ಶ್ಲಾಘಿಸಿದರು.

ಬಳಿಕ ಡಾ. ಉಷಾ ಮೋಹನ್ ಮತ್ತು ಬಿರುವೆರ್ ಕುಡ್ಲ ಮಂಗಳೂರು ಇವರ ಸಹಯೋಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಶೂವಿತರಣೆಯನ್ನು ಮಾಡಲಾಯಿತು.

ಮಕ್ಕಳಿಂದ ಹಾಗೂ  ಘಟಕದ ಸದಸ್ಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಕೂಡ ನಡೆಸಲಾಯಿತು.

ಅತಿಥಿಗಳಾಗಿ ಆಗಮಿಸಿದ ಬಿಗ್ ಬಾಸ್ ಸ್ಪರ್ಧಿಗಳಾದ ಶ್ರೀ ಧನರಾಜ್ ಮತ್ತು ಶ್ರೀ ಶಮಂತ್ ( ಬ್ರೋ ಗೌಡ) ಇವರು ಮಾತನಾಡಿಮಕ್ಕಳನ್ನು ಮನರಂಜಿಸಿದರು.

ಪತ್ರಕರ್ತರಾದ ಶ್ರೀ ನವೀನ್ ಸೂರಿಂಜೆ ಯವರು ಕೂಡ ಇಡೀ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಹಿತವಚನ ಗಳನ್ನಾಡಿದರು.

ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ನೆ ನರೇಂದ್ರಬಾಬು ಅವರು ಮುಖ್ಯ ಅತಿಥಿಯ ಭೂಮಿಕೆಯಲ್ಲಿ ಮಾತನಾಡಿ ಪಿವಿಪಿ ಶಾಲೆಯಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಸ್ಮರಿಸಿಕೊಂಡು, ಯುವವಾಹಿನಿ ಯಂತಹ ಸಂಘಟನೆಗಳುಇನ್ನೂ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ  ಬರಬೇಕೆಂದು ಪ್ರೇರೇಪಿಸಿದರು.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷರು ನೆಲೆಯಲ್ಲಿ ಮಾತನಾಡಿದ ಶ್ರೀ ರಾಘವೇಂದ್ರ ಪೂಜಾರಿ ಅವರು ಮಕ್ಕಳ ದಿನಾಚರಣೆ ಕಾರ್ಯಕ್ರಮದಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಮರ್ಪಿಸಿದರು.

ಕಾರ್ಯಕ್ರಮದ ಗಣ್ಯ ಅತಿಥಿಗಳ ಸಾಲಿನಲ್ಲಿ ಶ್ರೀ ಪಿವಿಪಿ ಪಿಯು ಕಾಲೇಜಿನ ಪ್ರಾಂಶುಪಾಲರಾದ  ಶ್ರೀ ಪ್ರಕಾಶ್ ಎಸ್, ಯುವವಾಹಿನಿಕೇಂದ್ರ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಅಶೋಕ್ ಕುಮಾರ್ ಪಡ್ಪು, ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಸುಧೀರ್ಪೂಜಾರಿ, ಹಾಗೂ ಯುವವಾಹಿನಿ ಬೆಂಗಳೂರು ಘಟಕದ ಸಲಹೆಗಾರರಾದ ಶ್ರೀ ರಘು ಮಟ್ಟು ಇನ್ನಿತರರು ಭಾಗವಹಿಸಿದ್ದರು.

ಎಲ್ಲಾ ಗಣ್ಯ ಅತಿಥಿಗಳಿಗೆ ಪುಸ್ತಕ ನೀಡುವ ಮೂಲಕ ಗೌರವಿಸಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯದರ್ಶಿಗಳಾದ ಶ್ರೀ ಶಶಿಧರ ಕೋಟ್ಯಾನ್ ಇವರು ಮಕ್ಕಳಿಗೆ 1098 ಮಕ್ಕಳ ಸಹಾಯವಾಣಿಯಮಾಹಿತಿಯನ್ನು ಒದಗಿಸಿಕೊಟ್ಟು ನೆರೆದ ಅತಿಥಿಗಳಿಗೆ ಹಾಗೂ ಶಾಲೆಯ ಆಡಳಿತ ವರ್ಗ, ಶಿಕ್ಷಕ ವರ್ಗಕ್ಕೆ ಮತ್ತು ಮಕ್ಕಳಿಗೆ ಹೃತ್ಪೂರ್ವಕಧನ್ಯವಾದಗಳನ್ನು ಸಮರ್ಪಿಸಿದರು.

ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು,

ಯುವವಾಹಿನಿ (ರಿ)  ಬೆಂಗಳೂರು ಘಟಕ


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »