TOP STORIES:

ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್


ಇನ್ನು ಯಾವತ್ತೂ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ʼಲಾಕ್‌ಡೌನ್‌ ಕಳೆದುಹೋಗಿರುವ ನೀತಿ. ಆರಂಭದ ಹಂತದಲ್ಲಿ ಕೋವಿಡ್‌ ಸೋಂಕು, ವೈರಾಣುವಿನ ಗುಣ ಮತ್ತು ಸ್ವಭಾವ, ಚಿಕಿತ್ಸಾ ವಿಧಾನ ಯಾವುದೂ ಗೊತ್ತಿರಲಿಲ್ಲ. ಆಗ ಅನುಭವದ ಕೊರತೆಯಿಂದ ಲಾಕ್‌ಡೌನ್‌ ಜಾರಿಗೊಳಿಸಿದ್ದೆವು. ಇನ್ನು ಹಾಗಾಗುವುದಿಲ್ಲʼ ಎಂದರು.

ಎರಡು ವರ್ಷಗಳ ಅನುಭವದಿಂದ ಕೋವಿಡ್‌ ನಿಯಂತ್ರಣ ಮತ್ತು ಚಿಕಿತ್ಸೆಯ ಕುರಿತು ಅರಿವು ಇದೆ. ಈಗ ಕೋವಿಡ್‌ ಹರಡುವುದನ್ನು ಲಾಕ್‌ಡೌನ್‌ ಜಾರಿಗೊಳಿಸುವುದರಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಲಸಿಕೆ ಮತ್ತು ಮುನ್ನೆಚ್ಚರಿಕೆಯಿಂದ ಮಾತ್ರವೇ ಕೋವಿಡ್‌ ನಿಯಂತ್ರಣ ಸಾಧ್ಯ ಎಂದು ಹೇಳಿದರು.

ʼಓಮೈಕ್ರಾನ್‌ ತಳಿಯ ಕೊರೊನಾ ವೈರಾಣುವಿನ ಸೋಂಕು ಹರಡದಂತೆ ತಡೆಯುವುದು ಅಸಾಧ್ಯ. ಸಹಜವಾಗಿಯೇ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ. ಆದರೆ, ಯಾವುದೇ ತೊಂದರೆ ಆಗುವುದಿಲ್ಲ. ಜನರು ಹೆಚ್ಚು ಮುನ್ನೆಚ್ಚರಿಕೆಯಿಂದ ಇರಬೇಕುʼ ಎಂದು ಸುಧಾಕರ್‌ ತಿಳಿಸಿದರು.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಶೇ 3.95 ತಲುಪಿದೆ. ಈ ಪ್ರಮಾಣ ಇನ್ನಷ್ಟು ಏರಿಕೆಯಾಗಲಿದೆ. ಕೋವಿಡ್‌ ನಿಯಂತ್ರಣ ಕುರಿತು ರಾಜ್ಯಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು. ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಲಸಿಕೆ ಪಡೆಯುವುದರಿಂದ ಮಾತ್ರ ಕೋವಿಡ್‌ನಿಂದ ರಕ್ಷಣೆ ಸಾಧ್ಯ. ಲಸಿಕೆ ಪಡೆದವರಲ್ಲಿ ಸೋಂಕಿನ ತೀವ್ರತೆ ಕಡಿಮೆ ಇರಲಿದೆ ಮತ್ತು ಸಾವಿನಿಂದಲೂ ಪಾರಾಗಬಹುದು. ಎಲ್ಲರೂ ಲಸಿಕೆ ಪಡೆಯುವ ಮೂಲಕ ಕೋವಿಡ್‌ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಆರೋಗ್ಯ ಸಚಿವರು ಮನವಿ ಮಾಡಿದರು.

ಇಂದು ಸಭೆ: ಕೋವಿಡ್‌ ನಿಯಂತ್ರಣ ಮತ್ತು ಚಿಕಿತ್ಸಾ ವ್ಯವಸ್ಥೆ ಕುರಿತು ಚರ್ಚಿಸಲು ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಧ್ಯಾಹ್ನ ಉನ್ನತ ಮಟ್ಟದ ಸಭೆ ನಡೆಯಲಿದೆ. ರಾಜ್ಯಮಟ್ಟದ ಕೋವಿಡ್‌ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »