TOP STORIES:

ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್


ಇನ್ನು ಯಾವತ್ತೂ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ʼಲಾಕ್‌ಡೌನ್‌ ಕಳೆದುಹೋಗಿರುವ ನೀತಿ. ಆರಂಭದ ಹಂತದಲ್ಲಿ ಕೋವಿಡ್‌ ಸೋಂಕು, ವೈರಾಣುವಿನ ಗುಣ ಮತ್ತು ಸ್ವಭಾವ, ಚಿಕಿತ್ಸಾ ವಿಧಾನ ಯಾವುದೂ ಗೊತ್ತಿರಲಿಲ್ಲ. ಆಗ ಅನುಭವದ ಕೊರತೆಯಿಂದ ಲಾಕ್‌ಡೌನ್‌ ಜಾರಿಗೊಳಿಸಿದ್ದೆವು. ಇನ್ನು ಹಾಗಾಗುವುದಿಲ್ಲʼ ಎಂದರು.

ಎರಡು ವರ್ಷಗಳ ಅನುಭವದಿಂದ ಕೋವಿಡ್‌ ನಿಯಂತ್ರಣ ಮತ್ತು ಚಿಕಿತ್ಸೆಯ ಕುರಿತು ಅರಿವು ಇದೆ. ಈಗ ಕೋವಿಡ್‌ ಹರಡುವುದನ್ನು ಲಾಕ್‌ಡೌನ್‌ ಜಾರಿಗೊಳಿಸುವುದರಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಲಸಿಕೆ ಮತ್ತು ಮುನ್ನೆಚ್ಚರಿಕೆಯಿಂದ ಮಾತ್ರವೇ ಕೋವಿಡ್‌ ನಿಯಂತ್ರಣ ಸಾಧ್ಯ ಎಂದು ಹೇಳಿದರು.

ʼಓಮೈಕ್ರಾನ್‌ ತಳಿಯ ಕೊರೊನಾ ವೈರಾಣುವಿನ ಸೋಂಕು ಹರಡದಂತೆ ತಡೆಯುವುದು ಅಸಾಧ್ಯ. ಸಹಜವಾಗಿಯೇ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ. ಆದರೆ, ಯಾವುದೇ ತೊಂದರೆ ಆಗುವುದಿಲ್ಲ. ಜನರು ಹೆಚ್ಚು ಮುನ್ನೆಚ್ಚರಿಕೆಯಿಂದ ಇರಬೇಕುʼ ಎಂದು ಸುಧಾಕರ್‌ ತಿಳಿಸಿದರು.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಶೇ 3.95 ತಲುಪಿದೆ. ಈ ಪ್ರಮಾಣ ಇನ್ನಷ್ಟು ಏರಿಕೆಯಾಗಲಿದೆ. ಕೋವಿಡ್‌ ನಿಯಂತ್ರಣ ಕುರಿತು ರಾಜ್ಯಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು. ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಲಸಿಕೆ ಪಡೆಯುವುದರಿಂದ ಮಾತ್ರ ಕೋವಿಡ್‌ನಿಂದ ರಕ್ಷಣೆ ಸಾಧ್ಯ. ಲಸಿಕೆ ಪಡೆದವರಲ್ಲಿ ಸೋಂಕಿನ ತೀವ್ರತೆ ಕಡಿಮೆ ಇರಲಿದೆ ಮತ್ತು ಸಾವಿನಿಂದಲೂ ಪಾರಾಗಬಹುದು. ಎಲ್ಲರೂ ಲಸಿಕೆ ಪಡೆಯುವ ಮೂಲಕ ಕೋವಿಡ್‌ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಆರೋಗ್ಯ ಸಚಿವರು ಮನವಿ ಮಾಡಿದರು.

ಇಂದು ಸಭೆ: ಕೋವಿಡ್‌ ನಿಯಂತ್ರಣ ಮತ್ತು ಚಿಕಿತ್ಸಾ ವ್ಯವಸ್ಥೆ ಕುರಿತು ಚರ್ಚಿಸಲು ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಧ್ಯಾಹ್ನ ಉನ್ನತ ಮಟ್ಟದ ಸಭೆ ನಡೆಯಲಿದೆ. ರಾಜ್ಯಮಟ್ಟದ ಕೋವಿಡ್‌ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »