TOP STORIES:

‘ರಾಜ್ ಸೌಂಡ್ಸ್ & ಲೈಟ್ಸ್’ ತುಳು ಚಿತ್ರಕ್ಕೆ ಸೌದಿ ಅರೇಬಿಯಾ ದಲ್ಲಿ ಉತ್ತಮ ಪ್ರತಿಕ್ರಿಯೆ


 

ಕರಾವಳಿಯ ಸಿನಿ ಲೋಕದಲ್ಲಿ ಬೆಳಕು ಪಸರಿಸುವ ಮತ್ತು ಸದ್ದು ಮಾಡುತ್ತಿರುವ ತುಳು ಚಿತ್ರ ‘ರಾಜ್ ಸೌಂಡ್ಸ್ & ಲೈಟ್ಸ್’ ಎಲ್ಲಾ ಗಡಿಗಳನ್ನು ದಾಟಿ 19 ದೇಶಗಳಲ್ಲಿ ಖ್ಯಾತಿ ಗಳಿಸಿ.

ಸೌದಿ ಅರೇಬಿಯಾ ದಲ್ಲಿ ಪ್ರಥಮ ಭಾರಿಗೆ ತುಳು ಚಿತ್ರ ಮಂಗಳೂರು ಅಸೋಸಿಯೇಷನ್ ಆಫ್ ಸೌದಿ ಅರೇಬಿಯಾ ದ ಅಧ್ಯಕ್ಷರು ಸತೀಶ್ ಕುಮಾರ್ ಬಜಾಲ್ ಹಾಗು ತಂಡದ ಪರವಾಗಿ ಪ್ರದರ್ಶನಗೊಂಡಿತು.

ಸೌದಿ ಅರೇಬಿಯಾ ಮೊದಲ ತುಳು ಚಲನಚಿತ್ರ ಇದಾಗಿದ್ದು, ಮೊದಲ ಪ್ರೀಮಿಯರ್ ಶೋನ ಎಲ್ಲಾ ಟಿಕೆಟ್‌ಗಳು ಸಂಪೂರ್ಣವಾಗಿ ಬುಕ್ ಆಗಿದ್ದು, ಪ್ರೀಮಿಯರ್ ಶೋಗಳಿಗೆ ಯಾವುದೇ ಟಿಕೆಟ್‌ಗಳು ಲಭ್ಯವಿಲ್ಲದಿದ್ದರೂ ತುಳುವರು ಅಸಂಖ್ಯಾತ ಕರೆಗಳೊಂದಿಗೆ ಟಿಕೆಟ್‌ಗಳನ್ನು ಪಡೆದುಕೊಳ್ಳಲು ಹಂಬಲಿಸುತ್ತಿದ್ದಾರೆ. ಆದರೆ ಸಿನಿಮಾದ ಹೆಚ್ಚಿನ ಪ್ರದರ್ಶನಗಳನ್ನು ಏರ್ಪಡಿಸುವ ಮೂಲಕ ಸತೀಶ್ ಕುಮಾರ್ ಬಜಾಲ್ ” ಮುಂದಿನ ದಿನಗಳಲ್ಲಿ ಸೌದಿ ಅರೇಬಿಯಾ ದ ಎಲ್ಲಾ ಸಿನಿಮಾ ಮಂದಿರದಲ್ಲಿ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ, ತುಳು ಚಿತ್ರ ಪ್ರೇಮಿ ಗಳು ನಿರಾಶರಾಗಬಾರದು, ಎಂದು ಪ್ರೀಮಿಯರ್ ಶೋ ನ ಉದ್ಘಾಟನೆಯ ಸಂದರ್ಭದಲ್ಲಿ ತಿಳಿಸಿದ್ದಾರೆ”.

ತುಳು ಚಿತ್ರರಂಗದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ‘ರಾಜ್ ಸೌಂಡ್ಸ್ & ಲೈಟ್ಸ್’ ಸೌದಿ ಅರೇಬಿಯಾ ದಲ್ಲಿ ತೆರೆಕಂಡಿದೆ ಹೆಗ್ಗಳಿಕೆಯ ಪಾತ್ರ ಗಳಿಸಿದೆ.

‘ರಾಜ್ ಸೌಂಡ್ಸ್ & ಲೈಟ್ಸ್’, ಕನ್ನಡ ಚಲನಚಿತ್ರ ‘ಒಂದು ಮೊಟ್ಟೆಯ ಕಥೆ’ ನಿರ್ಮಾಪಕರದ್ದು, ರಾಹುಲ್ ಅಮೀನ್ ಅವರ ನಿರ್ದೇಶನದ ತುಳು ಚಿತ್ರ, ನಿರ್ದೇಶಕ ರಾಹುಲ್ ಅಮೀನ್ ಕಥೆಯನ್ನು ವಿಜೆ ವಿನೀತ್ ಜೊತೆಗೆ ಬರೆದಿದ್ದಾರೆ, ಚಿತ್ರವನ್ನು ವೈಭವ್ ಫ್ಲಿಕ್ಸ್ ಪ್ರಸ್ತುತಪಡಿಸುತ್ತಿದ್ದಾರೆ. ಮಂಗೊ ಪಿಕಲ್ ಎಂಟರ್ಟೈನ್ಮೆಂಟ್ ಸಹಯೋಗದೊಂದಿಗೆ. ಸತೀಶ್ ಕುಮಾರ್ ಬಜಾಲ್ ನೇತೃತ್ವದಲ್ಲಿ ಅರೇಬಿಯಾನ್ ಪಿಕ್ಚರ್ ಮೂಲಕ ಇದನ್ನು ಸೌದಿ ಅರೇಬಿಯಾದಲ್ಲಿ ವಿತರಿಸಲಾಗುತ್ತಿದೆ.

ಪ್ರಮುಖ ಕಲಾವಿದರಾದ ವಿನೀತ್ ಕುಮಾರ್ (ನಾಯಕ), ಯಶ ಶಿವಕುಮಾರ್ (ನಾಯಕಿ), ಅರವಿಂದ ಬೋಳಾರ್, ಕರಿಷ್ಮಾ ಅಮೀನ್, ಭೋಜರಾಜ್ ವಾಮಂಜೂರು, ಮತ್ತು ನವೀನ್ ಡಿ ಪಡೀಲ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ರೂಪ ವರ್ಕಾಡಿ, ಮರ್ವಿನ್ ಶಿರ್ವ, ನಮಿತ್ ಕುಳೂರು, ರವಿ ರಾಮುಜ ಜೊತೆಗೆ. ಇತರ ಪ್ರಸಿದ್ಧ ನಟರೊಂದಿಗೆ ಸೌದಿ ಅರೇಬಿಯಾದಲ್ಲಿ ಪ್ರದರ್ಶಗೊಂಡಿತು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »