TOP STORIES:

ರಾತ್ರಿ ಉತ್ತಮ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ವಾ: ಹಾಗಾದ್ರೆ ನಿಮ್ಮ ಜೀವನಶೈಲಿ ಬದಲಾಯಿಸಿಕೊಳ್ಳಿ! ಏಕೆಂದರೆ?


ಉತ್ತಮ ನಿದ್ರೆಗಾಗಿ ನಿರ್ದಿಷ್ಟ ಸಮಯ ಮೀಸಲಿಡಬೇಕು. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.

 

ರಾತ್ರಿ ಕಣ್ತುಂಬ ಉತ್ತಮ ನಿದ್ದೆ ಮಾಡುವ ಸುಖವನ್ನು ಯಾರು ಕೂಡ ಬೇಡ ಅನ್ನುವುದಿಲ್ಲ. ಆದರೆ, ಕೆಲಸದ ಒತ್ತಡ ಮತ್ತು ಇತರ ಸಮಸ್ಯೆಗಳು ನಿದ್ದೆಗೆ ತೊಡಕಾಗುವಂತೆ ಮಾಡುತ್ತದೆ.

ಈ ನಿದ್ದೆ ಸಮಸ್ಯೆ ಪುರುಷರಿಗೆ ಹೋಲಿಕೆ ಮಾಡಿದಾಗ ಸ್ತ್ರೀಯರಲ್ಲಿ ಹೆಚ್ಚು. ಆರೋಗ್ಯ ಸಮಸ್ಯೆ ಕಾರಣ ಹೊರತಾಗಿ ಕೆಲವು ಉತ್ತಮ ಜೀವನಶೈಲಿ ರೂಢಿಸಿಕೊಳ್ಳುವ ಮೂಲಕ ಈ ಸಮಸ್ಯೆ ನಿವಾರಣೆಯನ್ನು ಪಡೆಯಬಹುದು. ಉತ್ತಮ ನಿದ್ರೆಗಾಗಿ ನಿರ್ದಿಷ್ಟ ಸಮಯವನ್ನು ಮೀಸಲಿಡಬೇಕು. ನಿರ್ದಿಷ್ಟ ಸಮಯದಲ್ಲಿ ಉತ್ತಮ ನಿದ್ದೆ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.

ಉತ್ತಮ ಗಾಢವಾದ ನಿದ್ರೆಗೆ ಮೆಲೆಟೊನಿನ್​ ಹಾರ್ಮೋನ್​ ಅಗತ್ಯ. ಇದು ಮಲಗುವ ವಾತಾವರಣ ಅಥವಾ ಕೋಣೆ ಸಂಪೂರ್ಣ ಕತ್ತಲಾಗಿದ್ದಾರೆ ಇದು ಉತ್ತೇಜನಗೊಳ್ಳುತ್ತದೆ. ಎಂದರೆ, ಮಲಗುವಾಗ ಯಾವುದೇ ಟಿವಿ, ಕಂಪ್ಯೂಟರ್​ ಮತ್ತು ಫೋನ್​ ಸ್ಕ್ರೀನ್​ ಇಲ್ಲದೇ ಮಲಗುವುದರಿಂದ ಆರಾಮದಾಯಕ ಉತ್ತಮ ನಿದ್ರೆಯನ್ನು ನೀವು ಮಾಡಬಹುದು.

ಕೊಠಡಿಯ ತಾಪಮಾನ ಕೂಡ ಮುಖ್ಯ: ಅನೇಕರು ರಾತ್ರಿ ತಾಪಮಾನದ ಬಗ್ಗೆ ಅಷ್ಟೊಂದು ಮಹತ್ವ ನೀಡುವುದಿಲ್ಲ. ಆದರೆ, ನಿದ್ರೆ ವಿಚಾರದಲ್ಲಿ ಇದು ಅವಶ್ಯಕತೆ ಹೊಂದಿದೆ. ತೀರ ಚಳಿ ಅಥವಾ ತೀರ ಬಿಸಿಲಿನ ವಾತಾವರಣ ಕೂಡ ನಿಮ್ಮ ನಿದ್ದೆಗೆ ಭಂಗ ತರುತ್ತದೆ. ಜೊತೆಗೆ ಮಲಗುವ ಕೋಣೆಯಲ್ಲಿ ಯಾವುದೆ ಕಿರಿಕಿರಿ ಮಾಡುವ ವಾಸನೆ ಅಂಶ ಇಲ್ಲದೇ ಇರುವಂತೆ ನೋಡಿಕೊಳ್ಳುವುದು ಅವಶ್ಯ. ಕಾರ್ಪೂರ ಅಥವಾ ಸಾಂಬ್ರಾಣಿ, ಮಲ್ಲಿಗೆ ಸುಂಗಂಧಗಳು ಕೂಡ ನಿಮ್ಮ ನಿದ್ದೆಗೆ ಭಂಗ ತರುತ್ತದೆ.

ಶುಚಿತ್ವ: ಮಲಗುವ ವಾತಾವರಣ ಮತ್ತು ಹಾಸಿಗೆ ಶುಚಿಯಾಗಿರುವಂತೆ ನೋಡಿಕೊಳ್ಳಿ. ಎಂಬ್ರೋಯ್ಡರಿ ಧಿರಿಸಿ ಅಥವಾ ಬೆಡ್​​ಶೀಟ್​ಗಳು ನಿಮಗೆ ಕಿರಿಕಿರಿ ಮಾಡದಂತೆ ಇರಬೇಕು. ಜೊತೆಗೆ ಹೊದಿಕೆ ಮತ್ತು ದಿಂಬುಗಳು ಕೂಡ ಸಮಯದಕ್ಕೆ ಸರಿಯಾಗಿ ಸ್ವಚ್ಛ ಮಾಡುವತ್ತ ಗಮನಹರಿಸಿ. ರಾತ್ರಿ ಮಲಗುವಾಗ ಅದಷ್ಟು ಸಡಿಲವಾದ ಕಾಟನ್​ ಧಿರಿಸಿನಲ್ಲಿ ಮಲಗುವುದು ಉತ್ತಮ.

ಈ ಚಟದಿಂದ ದೂರ ಇರಿ: ಹಗಲಿನ ಹೊತ್ತಿನಲ್ಲಿ ಹೆಚ್ಚು ನಿದ್ದೆ, ಅಥವಾ ಮಲಗುವ ಮುನ್ನ ಹೆಚ್ಚಿನ ವ್ಯಾಯಾಮ ಅಥವಾ ನೀರು ಕಡಿಯುವುದು ಕೂಡ ನಿದ್ರಾಹೀನತೆಗೆ ಕಾರಣವಾಗಲಿದೆ. ಅನೇಕ ಜನರು ಮಲಗುವ ಮುನ್ನ ಕೆಲವು ಸಮಯ ನೀರು ಕುಡಿಯುವುದನ್ನು ನಿಲ್ಲಿಸುತ್ತಾರೆ. ಇದರಿಂದ ಪದೆ ಪದೇ ಎಚ್ಚರವಾಗುವುದು ತಪ್ಪುತ್ತದೆ ಎಂಬ ಲೆಕ್ಕಾಚಾರ ನಡೆಸುತ್ತಾರೆ. ಆದರೆ ಇದು ಕೂಡ ತಪ್ಪು ಅಭ್ಯಾಸ ಇದರಿಂದ ದೇಹ ನಿರ್ಜಲೀಕರಣಗೊಂಡು, ಎಚ್ಚರಗೊಳ್ಳುವಂತೆ ಮಾಡುತ್ತದೆ.

ಆರು ಗಂಟೆಗಿಂತ ಕಡಿಮೆ ನಿದ್ದೆ ಮಾಡುವ , 9ಗಂಟೆಗಿಂತಲೂ ಹೆಚ್ಚಿನ ಅವಧಿ ನಿದ್ದೆ ಮಾಡುವುದು ಅನೇಕ ಸಮಸ್ಯೆಗಳಿಗೆ ನಿಮ್ಮನ್ನು ತುತ್ತು ಮಾಡುವ ಸಾಧ್ಯತೆ ಇದೆ. ಆರು ಗಂಟೆಗಿಂತ ಕಡಿಮೆ ನಿದ್ದೆ ಅಥವಾ ನಿದ್ರಾಹೀನತೆ ಹೊಂದಿರುವವರು ಅನೇಕ ಗಂಭೀರ ಆರೋಗ್ಯಕರ ಸಮಸ್ಯೆ ಎದುರಿಸುವಂತೆ ಆಗುತ್ತದೆ. ಈ ಹಿನ್ನೆಲೆ ಸರಿಯಾದ ನಿದ್ರೆ ಸಮಯವನ್ನು ಪಾಲಿಸುವುದು ಅಗತ್ಯವಾಗಿದೆ. ಇದು ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಡೆಂಘೀ ರೋಗ ನಿಯಂತ್ರಣಕ್ಕೆ ಪಪ್ಪಾಯ ಎಲೆ ಸಹಾಯಕವಾಗುತ್ತದೆಯಾ?


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »