TOP STORIES:

ರಾತ್ರಿ ಉತ್ತಮ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ವಾ: ಹಾಗಾದ್ರೆ ನಿಮ್ಮ ಜೀವನಶೈಲಿ ಬದಲಾಯಿಸಿಕೊಳ್ಳಿ! ಏಕೆಂದರೆ?


ಉತ್ತಮ ನಿದ್ರೆಗಾಗಿ ನಿರ್ದಿಷ್ಟ ಸಮಯ ಮೀಸಲಿಡಬೇಕು. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.

 

ರಾತ್ರಿ ಕಣ್ತುಂಬ ಉತ್ತಮ ನಿದ್ದೆ ಮಾಡುವ ಸುಖವನ್ನು ಯಾರು ಕೂಡ ಬೇಡ ಅನ್ನುವುದಿಲ್ಲ. ಆದರೆ, ಕೆಲಸದ ಒತ್ತಡ ಮತ್ತು ಇತರ ಸಮಸ್ಯೆಗಳು ನಿದ್ದೆಗೆ ತೊಡಕಾಗುವಂತೆ ಮಾಡುತ್ತದೆ.

ಈ ನಿದ್ದೆ ಸಮಸ್ಯೆ ಪುರುಷರಿಗೆ ಹೋಲಿಕೆ ಮಾಡಿದಾಗ ಸ್ತ್ರೀಯರಲ್ಲಿ ಹೆಚ್ಚು. ಆರೋಗ್ಯ ಸಮಸ್ಯೆ ಕಾರಣ ಹೊರತಾಗಿ ಕೆಲವು ಉತ್ತಮ ಜೀವನಶೈಲಿ ರೂಢಿಸಿಕೊಳ್ಳುವ ಮೂಲಕ ಈ ಸಮಸ್ಯೆ ನಿವಾರಣೆಯನ್ನು ಪಡೆಯಬಹುದು. ಉತ್ತಮ ನಿದ್ರೆಗಾಗಿ ನಿರ್ದಿಷ್ಟ ಸಮಯವನ್ನು ಮೀಸಲಿಡಬೇಕು. ನಿರ್ದಿಷ್ಟ ಸಮಯದಲ್ಲಿ ಉತ್ತಮ ನಿದ್ದೆ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.

ಉತ್ತಮ ಗಾಢವಾದ ನಿದ್ರೆಗೆ ಮೆಲೆಟೊನಿನ್​ ಹಾರ್ಮೋನ್​ ಅಗತ್ಯ. ಇದು ಮಲಗುವ ವಾತಾವರಣ ಅಥವಾ ಕೋಣೆ ಸಂಪೂರ್ಣ ಕತ್ತಲಾಗಿದ್ದಾರೆ ಇದು ಉತ್ತೇಜನಗೊಳ್ಳುತ್ತದೆ. ಎಂದರೆ, ಮಲಗುವಾಗ ಯಾವುದೇ ಟಿವಿ, ಕಂಪ್ಯೂಟರ್​ ಮತ್ತು ಫೋನ್​ ಸ್ಕ್ರೀನ್​ ಇಲ್ಲದೇ ಮಲಗುವುದರಿಂದ ಆರಾಮದಾಯಕ ಉತ್ತಮ ನಿದ್ರೆಯನ್ನು ನೀವು ಮಾಡಬಹುದು.

ಕೊಠಡಿಯ ತಾಪಮಾನ ಕೂಡ ಮುಖ್ಯ: ಅನೇಕರು ರಾತ್ರಿ ತಾಪಮಾನದ ಬಗ್ಗೆ ಅಷ್ಟೊಂದು ಮಹತ್ವ ನೀಡುವುದಿಲ್ಲ. ಆದರೆ, ನಿದ್ರೆ ವಿಚಾರದಲ್ಲಿ ಇದು ಅವಶ್ಯಕತೆ ಹೊಂದಿದೆ. ತೀರ ಚಳಿ ಅಥವಾ ತೀರ ಬಿಸಿಲಿನ ವಾತಾವರಣ ಕೂಡ ನಿಮ್ಮ ನಿದ್ದೆಗೆ ಭಂಗ ತರುತ್ತದೆ. ಜೊತೆಗೆ ಮಲಗುವ ಕೋಣೆಯಲ್ಲಿ ಯಾವುದೆ ಕಿರಿಕಿರಿ ಮಾಡುವ ವಾಸನೆ ಅಂಶ ಇಲ್ಲದೇ ಇರುವಂತೆ ನೋಡಿಕೊಳ್ಳುವುದು ಅವಶ್ಯ. ಕಾರ್ಪೂರ ಅಥವಾ ಸಾಂಬ್ರಾಣಿ, ಮಲ್ಲಿಗೆ ಸುಂಗಂಧಗಳು ಕೂಡ ನಿಮ್ಮ ನಿದ್ದೆಗೆ ಭಂಗ ತರುತ್ತದೆ.

ಶುಚಿತ್ವ: ಮಲಗುವ ವಾತಾವರಣ ಮತ್ತು ಹಾಸಿಗೆ ಶುಚಿಯಾಗಿರುವಂತೆ ನೋಡಿಕೊಳ್ಳಿ. ಎಂಬ್ರೋಯ್ಡರಿ ಧಿರಿಸಿ ಅಥವಾ ಬೆಡ್​​ಶೀಟ್​ಗಳು ನಿಮಗೆ ಕಿರಿಕಿರಿ ಮಾಡದಂತೆ ಇರಬೇಕು. ಜೊತೆಗೆ ಹೊದಿಕೆ ಮತ್ತು ದಿಂಬುಗಳು ಕೂಡ ಸಮಯದಕ್ಕೆ ಸರಿಯಾಗಿ ಸ್ವಚ್ಛ ಮಾಡುವತ್ತ ಗಮನಹರಿಸಿ. ರಾತ್ರಿ ಮಲಗುವಾಗ ಅದಷ್ಟು ಸಡಿಲವಾದ ಕಾಟನ್​ ಧಿರಿಸಿನಲ್ಲಿ ಮಲಗುವುದು ಉತ್ತಮ.

ಈ ಚಟದಿಂದ ದೂರ ಇರಿ: ಹಗಲಿನ ಹೊತ್ತಿನಲ್ಲಿ ಹೆಚ್ಚು ನಿದ್ದೆ, ಅಥವಾ ಮಲಗುವ ಮುನ್ನ ಹೆಚ್ಚಿನ ವ್ಯಾಯಾಮ ಅಥವಾ ನೀರು ಕಡಿಯುವುದು ಕೂಡ ನಿದ್ರಾಹೀನತೆಗೆ ಕಾರಣವಾಗಲಿದೆ. ಅನೇಕ ಜನರು ಮಲಗುವ ಮುನ್ನ ಕೆಲವು ಸಮಯ ನೀರು ಕುಡಿಯುವುದನ್ನು ನಿಲ್ಲಿಸುತ್ತಾರೆ. ಇದರಿಂದ ಪದೆ ಪದೇ ಎಚ್ಚರವಾಗುವುದು ತಪ್ಪುತ್ತದೆ ಎಂಬ ಲೆಕ್ಕಾಚಾರ ನಡೆಸುತ್ತಾರೆ. ಆದರೆ ಇದು ಕೂಡ ತಪ್ಪು ಅಭ್ಯಾಸ ಇದರಿಂದ ದೇಹ ನಿರ್ಜಲೀಕರಣಗೊಂಡು, ಎಚ್ಚರಗೊಳ್ಳುವಂತೆ ಮಾಡುತ್ತದೆ.

ಆರು ಗಂಟೆಗಿಂತ ಕಡಿಮೆ ನಿದ್ದೆ ಮಾಡುವ , 9ಗಂಟೆಗಿಂತಲೂ ಹೆಚ್ಚಿನ ಅವಧಿ ನಿದ್ದೆ ಮಾಡುವುದು ಅನೇಕ ಸಮಸ್ಯೆಗಳಿಗೆ ನಿಮ್ಮನ್ನು ತುತ್ತು ಮಾಡುವ ಸಾಧ್ಯತೆ ಇದೆ. ಆರು ಗಂಟೆಗಿಂತ ಕಡಿಮೆ ನಿದ್ದೆ ಅಥವಾ ನಿದ್ರಾಹೀನತೆ ಹೊಂದಿರುವವರು ಅನೇಕ ಗಂಭೀರ ಆರೋಗ್ಯಕರ ಸಮಸ್ಯೆ ಎದುರಿಸುವಂತೆ ಆಗುತ್ತದೆ. ಈ ಹಿನ್ನೆಲೆ ಸರಿಯಾದ ನಿದ್ರೆ ಸಮಯವನ್ನು ಪಾಲಿಸುವುದು ಅಗತ್ಯವಾಗಿದೆ. ಇದು ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಡೆಂಘೀ ರೋಗ ನಿಯಂತ್ರಣಕ್ಕೆ ಪಪ್ಪಾಯ ಎಲೆ ಸಹಾಯಕವಾಗುತ್ತದೆಯಾ?


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »