TOP STORIES:

ರಾಷ್ಟ್ರಮಟ್ಟದಲ್ಲಿ ಮಿಂಚಿದ ಬಿಲ್ಲವ ಸಮಾಜದ ಯುವ ಪ್ರತಿಭೆ ಮೇಘ ಕೋಟ್ಯಾನ್


ತನ್ನಲ್ಲಿರುವ ಪ್ರತಿಭೆಗೆ ದೊರೆತಿರುವ ಪ್ರೋತ್ಸಾಹ, ಅವಕಾಶಗಳನ್ನು ಬಳಸಿಕೊಂಡು ರಾಷ್ಟ್ರಮಟ್ಟದಲ್ಲಿ ಮಿಂಚಿದ ಬಿಲ್ಲವ ಸಮಾಜದಯುವ ಪ್ರತಿಭೆ ಮೇಘ ಕೋಟ್ಯಾನ್.

     (Copyrights owned by: billavaswarriors.com )

 ಇವರು ಎಡಪದವಿನ ಗಣೇಶ್ ಪೂಜಾರಿ ಹಾಗು ಸುನೀತ ದಂಪತಿಗಳ ಮಗಳು. ತನ್ನ ಪ್ರೌಢ ಶಿಕ್ಷಣದ ಅವಧಿಯಲ್ಲಿ ಕ್ರೀಡಾಕ್ಷೇತ್ರದಲ್ಲಿ ಹೆಚ್ಚು ಆಸಕ್ತಿಯನ್ನು ವಹಿಸಿದ ಇವರು ಮುಂದೆ ತನ್ನನ್ನು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಂಡರು. ಸ್ವಾಮಿವಿವೇಕಾನಂದ ಪದವಿ ಪೂರ್ವ ಕಾಲೇಜು ಎಡಪದವು ಇಲ್ಲಿ ಪಿಯುಸಿ ಶಿಕ್ಷಣ ಪೂರೈಸಿದರು. ತಮ್ಮ ಪಿಯುಸಿ

(Copyrights owned by: billavaswarriors.com )

ವಿದ್ಯಾಭ್ಯಾಸದಸಂದರ್ಭದಲ್ಲಿ ರಾಷ್ಟ್ರ ಮಟ್ಟದಲ್ಲಿ ಫ್ಲೋರ್ ಬಾಲ್  ಆಟ ಆಡಿದ ಹೆಮ್ಮೆ ಇವರದ್ದಾಗಿದ್ದು, 2019ರಲ್ಲಿ ಚತ್ತಿಷ್ಗಡ್  ನಲ್ಲಿ ನಡೆದ ಫ್ಲೋರ್ಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ. ಹಾಗು 2020 ರಲ್ಲಿ ದೆಹಲಿಯಲ್ಲಿ ನಡೆದ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಪಡೆದ ಸಾಧನೆಇವರದ್ದಾಗಿದೆ.

     ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕುಆಗ ಯಶಸ್ಸು ಖಚಿತ ಎಂಬಂತೆ ಇವರ ಸಾಧನೆಗೆ ಬೆಂಬಲಿಸಿದವರು ದೈಹಿಕಶಿಕ್ಷಣ ಶಿಕ್ಷಕರಾದ ಪ್ರೇಮನಾಥ ಶೆಟ್ಟಿಯವರು. ಅಮ್ಮ ಹಾಗು ಸಹೋದರನ ಪ್ರೀತಿ, ಸಹಕಾರ ಅವರು ನೀಡುವ ಪ್ರೋತ್ಸಾಹವೇ ನನಗೆಸದಾ ಪ್ರೇರಣೆ ಎನ್ನುತ್ತಾರೆ ಮೇಘ ಕೋಟ್ಯಾನ್.

   ಪ್ರಸ್ತುತ ದವಳ ಕಾಲೇಜಿನಲ್ಲಿ  ಪ್ರಥಮ ವರ್ಷದ ಬಿ.ಕಾಂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಯೋಗ ಹಾಗು ಫಿಲ್ಮ್ ಆ್ಯಕ್ಟಿಂಗ್ ನಲ್ಲೂಅಪಾರ ಆಸಕ್ತಿಯನ್ನು ಹೊಂದಿದ್ದಾರೆ. ಭವಿಷ್ಯದಲ್ಲಿ ಸಮಾಜದ ಆಧಾರ ಸ್ತಂಭವಾಗಿರುವ ನ್ಯಾಯ ರಕ್ಷಣೆಯ ವಕೀಲರಾಗುವಕನಸನ್ನು ಹೊಂದಿರುವ ಇವರ ಭವಿಷ್ಯ ಉಜ್ವಲವಾಗಿರಲಿ. ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂಬುದು ನಮ್ಮೆಲ್ಲರ ಆಶಯ

(Copyrights owned by: billavaswarriors.com )

www.billavaswarriors.com

✍ ಬರಹ: ನಳಿನಿ.ಎಸ್.ಸುವರ್ಣ. ಜಾರ್ಕಳ ಮುಂಡ್ಲಿ 


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »