TOP STORIES:

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ಶೋಧನ್ ಕುಮಾರ್ ಮೂಡುಬೆಟ್ಟು


ಕರಾಟೆಯ‌ ಸವ್ಯಸಾಚಿ ಶೋಧನ್ ಕುಮಾರ್

  ಮೂಡುಬೆಟ್ಟು ಶ್ರೀ ಶ್ರೀಧರ ಪೂಜಾರಿ ಹಾಗೂ ಶ್ರೀಮತಿ ಇಂದಿರಾ ದಂಪತಿಯ ಮಗನಾಗಿ ಜನಿಸಿದ ಶೋಧನ್ ಕುಮಾರ್ಬಾಲ್ಯದಿಂದಲೇ ಕರಾಟೆ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಪ್ರತಿಭೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ವಳಕಾಡು ಶಾಲೆ, ಶ್ಯಾಮಿಲಿ ಪದವಿಪೂರ್ವ ಕಾಲೇಜು ಮತ್ತು ಪೂರ್ಣ ಪ್ರಜ್ಞಾ ಕಾಲೇಜು ಪದವಿ ಶಿಕ್ಷಣ ಪೂರೈಸಿ ಶೈಕ್ಷಣಿಕವಾಗಿಯೂಕ್ರೀಯಾಶೀಲವಾಗಿದ್ದ ಶೋಧನ್, ಅಂತಾರಾಷ್ಟ್ರೀಯ ಕರಾಟೆ ಪಟು ಪರ್ಕಳ ಪ್ರವೀಣಾ ಸುವರ್ಣರವರ ಕರಾಟೆ ಗರಡಿಯಲ್ಲಿ ಪಳಗಿಸಾರ್ವಜನಿಕ ಶಿಕ್ಷಣ ಇಲಾಖೆ ಕರಾಟೆ ಸ್ಪರ್ಧೆಯಲ್ಲಿ ಅನೇಕ ಪ್ರಶಿಸ್ತಿಗಳಿಸಿದ್ದಾರೆ. ತಮಿಳುನಾಡು ಚೆನೈನಲ್ಲಿ ಅಖಿಲ ಭಾರತವಿಶ್ವವಿದ್ಯಾನಿಲಯದ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಅಮೋಘ ಸಾಧನೆಗೈದಿದ್ದಾರೆ.

ಇವರು ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಎಲೈಡ್ ಆರ್ಟ್ಸ್ ಸಂಸ್ಥೆಯಿಂದ ಅತ್ಯುತ್ತಮ ಶ್ರೇಣಿಯಲ್ಲಿ ಬ್ಲ್ಯಾಕ್ ಬೆಲ್ಟ್ ಪದವಿಪಡೆದಿದ್ದಾರೆ. ಇದುವರೆಗೆ ಉಡುಪಿ, ಮಂಗಳೂರು, ಮೈಸೂರು, ಬೆಳಗಾವಿ, ಗದಗ, ಶಿವಮೊಗ್ಗ, ಧಾರವಾಡ, ಬೆಂಗಳೂರು, ಕೇರಳ, ಹೈದರಾಬಾದ್, ತಮಿಳು ನಾಡು, ರಾಜ್ಯ, ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ನೂರಕ್ಕೂ ಮಿಕ್ಕಿ ಪದಕಗಳನ್ನು ಜಯಿಸಿರುತ್ತಾರೆ. ಅತೀ ಕಿರಿಯ ವಯಸ್ಸಿನಲ್ಲಿ  ಪುರುಷರ ವಿಭಾಗದ 9 ಗ್ರ್ಯಾಂಡ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ವಿಜೇತರಾಗಿದ್ದಾರೆ. 2 ಬಾರಿಒಂದೇ ಸ್ಪರ್ಧೆಯಲ್ಲಿ ಕಟಾ ಹಾಗೂ ಕುಮಿಟೆ ವಿಭಾಗದ ಎರಡೂ ಗ್ರ್ಯಾಂಡ್ ಚಾಂಪಿಯನ್ ಶಿಪ್ ಜಯಿಸಿ ಕರಾಟೆ ಐತಿಹಾಸಿಕ ದಾಖಲೆಮಾಡಿದ್ದಾರೆ. ಕರ್ನಾಟಕ ಕರಾಟೆ ಲೀಗ್ 2019 ಮೈಸೂರು ಟೈಗರ್ಸ್ ಪ್ರತಿನಿಧಿಯಾಗಿ ಸ್ಪರ್ಧೆಯಲ್ಲಿ ಕ್ರೀಡೆಯ ಅತ್ಯುತ್ತಮ ಆಟಗಾರಪ್ರಶಸ್ತಿ ಜಯಿಸಿರುತ್ತಾರೆ. ಕರಾಟೆ ಇಂಡಿಯಾ ಆರ್ಗನೈಜೇಷನ್ ರಾಜ್ಯ, ದಕ್ಷಿಣ ಭಾರತ ಪ್ರಾಂತ್ಯ ಪ್ರಶಸ್ತಿ ಜಯಿಸಿ ಇದೀಗ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರ ವಿಜಯಯಾತ್ರೆ ಹೀಗೆ ನಿರಂತರವಾಗಿ ಸಾಗಲಿ. ಶುಭವಾಗಲಿ..


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »