TOP STORIES:

ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕ್ರಮ: ಸಚಿವ ಡಾ. ಸುಧಾಕರ್


ಬೆಂಗಳೂರು: ಕೊರೊನಾ ಮೂರನೇ ಅಲೆ ಹಾಗೂ ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಡಾ. ಸುಧಾಕರ್, ಲಾಕ್ ಡೌನ್ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ, ಅನಗತ್ಯ ಗೊಂದಲ ಸೃಷ್ಟಿಸುವ ಸುದ್ದಿ ಹರಡಬೇಡಿ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸುಧಾಕರ್, ಈಗಾಗಲೇ ಸಾಕಷ್ಟು ಜನರು ಕೋವಿಡ್ ನಿಂದಾಗಿ ಸಂಕಷ್ಟ ಎದುರಿಸಿದ್ದಾರೆ. ಅನೇಕರು ಉದ್ಯೋಗ ಕಳೆದುಕೊಂಡು ಆರ್ಥಿಕ ಸಮಸ್ಯೆ ಎದುರಿಸಿದ್ದಾರೆ. ಈಗಷ್ಟೇ ಎಲ್ಲಾ ಕ್ಷೇತ್ರಗಳು ಮತ್ತೆ ಚೇತರಿಕೆಯತ್ತ ಸಾಗುತ್ತಿದೆ. ಇಂಥ ಸಂದರ್ಭದಲ್ಲಿ ’ಮತ್ತೆ ಲಾಕ್ ಡೌನ್’ ಮಾಡಲಾಗುತ್ತಿದೆ ಎಂಬ ಸುಳ್ಳು ಸುದ್ದಿ ಹರಡುವ ಕೆಲಸ ಮಾಡಬಾರದು. ಸರ್ಕಾರದ ಮುಂದೆ ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ, ಅಂತಹ ಯಾವ ಆಲೋಚನೆಯೂ ಇಲ್ಲ. ಅನಗತ್ಯವಾಗಿ ಸುಳ್ಳು ಸುದ್ದಿ ಹರಡಿ ಜನರಲ್ಲಿ ಆತಂಕ ಸೃಷ್ಟಿಸುವ ಕೆಲಸ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಾಮಾಜಿಕ ಜಾಲತಾಣದ ವೇದಿಕೆಯನ್ನು ಒಳ್ಳೆಯ, ಖಚಿತ ಮಾಹಿತಿಯನ್ನೊಳಗೊಂಡ ಸುದ್ದಿಗಳನ್ನು ವೇಗವಾಗಿ ಜನರಿಗೆ ತಲುಪಿಸಲು ಬಳಕೆ ಮಾಡಬೇಕೇ ಹೊರತು ಗೊಂದಲಮಯ ಸುದ್ದಿಗಳನ್ನು, ಸುಳ್ಳು ಸುದ್ದಿಗಳನ್ನು ಹಬ್ಬಿಸಲು ವೇದಿಕೆಯಾಗಿ ಬಳಸಿಕೊಳ್ಳಬಾರದು. ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ಹೊಸ ರೂಪಾಂತರಿ ಒಮಿಕ್ರಾನ್ ವೇಗವಾಗಿ ಹರಡುತ್ತೆ, ಆದರೆ ಪರಿಣಾಮ ಕಡಿಮೆ ಎಂದು ಹೇಳಲಾಗುತ್ತಿದೆ. ನಾಡಿಬಡಿತ ಹೆಚ್ಚಾಗುವುದು, ವಾಂತಿ, ಸುಸ್ತು ಇವು ಒಮಿಕ್ರಾನ್ ರೋಗ ಲಕ್ಷಣಗಳು ಎಂದು ಈಗಾಗಲೇ ಹೊಸ ವೈರಸ್ ಪತ್ತೆಯಾಗಿರುವ ದೇಶಗಳಲ್ಲಿ ಕೆಲಸ ಮಾಡುವ ನನ್ನ ಸ್ನೇಹಿತರು ಮಾಹಿತಿ ನೀಡಿದ್ದಾರೆ. ಒಮಿಕ್ರಾನ್ ಬಗ್ಗೆ ಇನ್ನೂ ನಿಖರ ಲಕ್ಷಣಗಳು ತಿಳಿದುಬಂದಿಲ್ಲ. ಹಾಗಾಗಿ ಆತಂಕ ಪಡುವ ಅಗತ್ಯ ಇಲ್ಲ ಆದರೆ ಎಲ್ಲರೂ ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಮೂಲಕ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »