TOP STORIES:

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ).ಬಾಳ್ತಿಲ. ಮತ್ತು ಸೇವಾಶ್ರಮ ದೇರಳಕಟ್ಟೆ. ಇದರ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಶಿಬಿರ


ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ).ಬಾಳ್ತಿಲ. ಮತ್ತು ಸೇವಾಶ್ರಮ ದೇರಳಕಟ್ಟೆ*. ಇದರ ಸಹಯೋಗದೊಂದಿಗೆ ದಿನಾಂಕ 03.01.2021 ರಂದು ಸೇವಾಶ್ರಮ ದೇರಳಕಟ್ಟೆ ಇಲ್ಲಿ ಉಚಿತ ರಕ್ತಪರೀಕ್ಷೆ , ಮಧುಮೇಹ ಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ ಶಿಬಿರ ಹಾಗೂ ವೃದ್ಧರೊಂದಿಗೆ ನಗು ನಲಿವು ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮೆಸ್ಕಾಂನ ಇಂಜಿನಿಯರ್ ಶ್ರೀ ನಿತೇಶ್ ಕುಮಾರ್ ನೆರವೇರಿಸಿ ಸಂಸ್ಥೆಯ ಸೇವೆ ಶ್ಲಾಘನೀಯ ಎಂದು ಹೇಳಿ ಸಂಸ್ಥೆಯ ಸೇವೆಗೆ ಶುಭ ಹಾರೈಸಿದರು. ಟ್ರಸ್ಟಿ ಹಾಗೂ ಖ್ಯಾತ ವೈದ್ಯರಾದ ಶ್ರೀ ಡಾ.ರಾಜೇಶ್ ಪೂಜಾರಿ ಆರೋಗ್ಯ ಮಾಹಿತಿ ನೀಡಿ ಹಾಗೂ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆ ನಡೆಸಿದರು. ಕಾರ್ಯಕ್ರಮದಲ್ಲಿ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ(ರಿ). ಬಾಳ್ತಿಲ. ಇದರ ಸಂಸ್ಥಾಪಕಿಯಾಗಿರುವ ವಕೀಲರಾದ ಶ್ರೀಮತಿ ಶ್ಯೆಲಜಾ ರಾಜೇಶ್ ರವರು ಮಾತಾನಾಡಿ ಅಮ್ಮಂದಿರು ನಮ್ಮನ್ನು ಹೊತ್ತು ಹೆತ್ತು ಸಾಕಿ ಸಲಹುತ್ತಾರೆ. ಆದರೆ ಅವರನ್ನು ಆಶ್ರಮಕ್ಕೆ ಬಿಟ್ಟು ಪ್ರೀತಿಯಿಂದ ವಂಚಿತಗೊಳಿಸುವುದು ಎಷ್ಟು ಸರಿ. ಎಂದು ಪ್ರಶ್ನಿಸಿದರು. ಅಲ್ಲದೇ ನಾವು ಮಗುವಾಗಿರುವಾಗ ಒಬ್ಬ ತಾಯಿ ನಮಗೋಸ್ಕರವಾಗಿಯೇ ಜೀವಿಸುತ್ತಾಳೆ. ಆಕೆಗೆ ವಯಸ್ಸಾದಾಗ ಅವಳನ್ನು ನಮ್ಮಮಗುವಂತೆ ಪ್ರೀತಿಸಿ ಎಂದು ಹಿತನುಡಿ ಹೇಳಿದರು. ಅಲ್ಲದೇ ವೃದ್ಧರೊಂದಿಗೆ ಆಟೋಟಗಳನ್ನು ನಡೆಸಿ ನಕ್ಕು ನಲಿದು ಒಂದು ದಿನ ಆಶ್ರಮ ದಲ್ಲಿ ಕಳೆದರು. ಆಶ್ರಮದ ಎಲ್ಲರಿಗೂ ಅವಶ್ಯಕ ದಿನ ಬಳಕೆ ಸಾಮಾಗ್ರಿಗಳ ಕಿಟ್ ನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟಿ ಶ್ರೀಮತಿ ಅನ್ನಪೂರ್ಣ ರಾಜೇಶ್ ಬಿ. ಸೇವಾಶ್ರಮದ ಮೇಲ್ವಿಚಾರಕ ಶ್ರೀ ಬಾಲಕೃಷ್ಣ ಉಪಸ್ಥಿತರಿದ್ದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »