TOP STORIES:

FOLLOW US

ಶಿರಸಿ ಮಾರಿಕಾಂಬ ಜಾತ್ರೆಯಲ್ಲಿ ಹಾರಿದ ಹಳದಿ ಬಾವುಟ, ಅಪ್ಪು ಸ್ಮರಣೆ


ಗುರುವಾರದಿಂದ ಪ್ರಪಂಚದಾದ್ಯಂತ ಜೇಮ್ಸ್‌ ಚಿತ್ರದ ಜಾತ್ರೆ ನಡೆಯಲಿದೆ.ನಟ ಪುನೀತ್‌ ರಾಜ್‌ ಕುಮಾರರ ಕೊನೆಯ ಚಿತ್ರ ಎನ್ನುವ ಕಾರಣಕ್ಕೆ ಈ ಚಿತ್ರದ ಬಿಡುಗಡೆ ದಿನ ಕನ್ನಡ ನಾಡಿಗೆ ಜಾತ್ರೆಯಾಗಿ ಪರಿಣಮಿಸಿದೆ. ಈ ಜಾತ್ರೆಗಿಂತ ಮೊದಲು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಜಾತ್ರೆಯಲ್ಲಿ ಪುನೀತ್‌ ರಾಜ್‌ ಕುಮಾರ ಸ್ತಬ್ಧಚಿತ್ರಗಳ ಜೊತೆಗೆ ಯುವಕರ ಮರವಣಿಗೆ ಸುದ್ದಿ ಮಾಡಿದೆ.

 

ಮಂಗಳವಾರ ರಾತ್ರಿಯಿಂದ ಪ್ರಾರಂಭವಾದ ದಕ್ಷಿಣ ಭಾರತದ ದೊಡ್ಡ ಜಾತ್ರೆ ಶಿರಸಿ ಮಾರಿ ಜಾತ್ರೆಯ ಮೆರವಣಿಗೆಯೇ ವಿಶೇಶ. ಈ ರಥೋತ್ಸವದ ಸಂದರ್ಭದಲ್ಲಿ ಧಾರ್ಮಿಕ, ಸಾಂಸ್ಕೃತಿಕ ವೈಶಿಷ್ಟ್ಯಗಳ ಮೆರವಣಿಗೆಯೇ ನಡೆಯುತ್ತದೆ. ಈ ವರ್ಷದ ಬುಧವಾರದ ಮುಂಜಾನೆಯ ಮಾರಿಕಾಂಬಾ ರಥಾಗಮನ ಸಂದರ್ಭದಲ್ಲಿ ಹಿಂದಿನಂತೆ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಆಕರ್ಷಣೆಗಳಿದ್ದವು. ಇವುಗಳೊಂದಿಗೆ ಈ ಬಾರಿ ಇಲ್ಲಿಯ ಯುವಕರು ರಥ ಮೆರವಣಿಗೆಯಲ್ಲಿ ಪುನೀತ್‌ ರಾಜ್‌ ಕುಮಾರ ವೈಶಿಷ್ಟ್ಯ ನೆನಪಿಸುವ ಮೆರವಣಿಗೆಯೊಂದಿಗೆ ಡೊಳ್ಳಿನ ಕುಣಿತ ಮಾಡಿ ಸಾರ್ವಜನಿಕರ ಗಮನ ಸೆಳೆದರು.

ಪುನೀತ್‌ ರಾಜ್‌ ಕುಮಾರ್‌ ಬ್ಯಾನರ್ಗಳು, ಪೋಸ್ಟರ್‌ ಗಳೊಂದಿಗೆ ಡೊಳ್ಳು ಹೊಡೆದು ಸಿಳ್ಳೆ ಹಾಕಿದರು. ಜಾತ್ರೆಯಲ್ಲಿ ನಟನೊಬ್ಬನ ಆರಾಧನೆ, ಪುನೀತ್‌ ಸ್ಮರಣೆಗಾಗಿ ಬಾವುಟ,ಸ್ತಬ್ಧಚಿತ್ರ ಪ್ರದರ್ಶನ ಮಾಡಿ ಅಪ್ಪು ನೆನಪು ಚಿರಸ್ಥಾಯಿಯಾಗುವಂತೆ ಮಾಡಿದ್ದು ವಿಶೇ ಶವೆನಿಸಿತು.

ಇದರೊಂದಿಗೆ ಈ ವರ್ಷ ಬ್ರಹ್ಮಶ್ರೀ ನಾರಾಯಣ ಗುರುಗಳ ನೆನಪಿಗೆ ಹಳದಿ ಬಾವುಟ ಹಾರಿಸಿದ್ದೂ ವಿಶೇಶವೆನಿಸಿತು.

ರಾಜ್ಯದಾದ್ಯಂತ ನಾರಾಯಣ ಗುರುಗಳ ನೆನಪು, ಸ್ಮರಣೆ ಚಿಂತನೆಗಳ ಪ್ರಸಾರದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳು ಹಳದಿ ಶಾಲಿನೊಂದಿಗೆ ಡೊಳ್ಳುಹೊಡೆದು ಹಳದಿ ಬಾವುಟ ಹಾರಿಸಿದ್ದು ಜನಾಕರ್ಷಣೆ ಎನಿಸಿತು. ಸಂಪ್ರದಾಯ, ಚಾರಿತ್ರಿಕ ಆಚರಣೆಗಳ ವೈಶಿಷ್ಟ್ಯದ ಜೊತೆಗೆ ಮಾರಿಜಾತ್ರೆಯ ತೇರಿನಲ್ಲಿ ಕಾಣಿಸಿಕೊಂಡ ಅಪ್ಪು ಅಭಿಮಾನಿಗಳು, ನಾರಾಯಣಗುರು ಅನುಯಾಯಿಗಳು ಈ ವರ್ಷದ ಜಾತ್ರಾ ಮೆರವಣಿಗೆ ಸೊಗಸು ಹೆಚ್ಚಿಸಿದರು. ಶಿರಸಿ ಪೇಟೆಯಿಡಿ ತುಂಬಿದ್ದ ಜನರ ಮಧ್ಯೆ ಮಾರಿಕಾಂಬಾ ರಥದ ಜೊತೆಗೆ ಡೊಳ್ಳಿನೊಂದಿಗೆ ಹೆಜ್ಜೆಹಾಕಿದ ಪುನೀತ್‌ ಅಭಿಮಾನಿಗಳು, ನಾರಾಯಣಗುರುಗಳ ಬಿ.ಎಸ್. ಎನ್.ಡಿ.ಪಿ.‌ಹಳದಿ ವಸ್ತ್ರ ಜನಾಕರ್ಷಣೆಯ ಕೇಂದ್ರವೆನಿಸಿದವು.ಜೊತೆಗೆ ರಾಜ್ಯದಾದ್ಯಂತ ನಾರಾಯಣ ಗುರುಗಳ[Narayana Guru] ನೆನಪು, ಸ್ಮರಣೆ ಚಿಂತನೆಗಳ ಪ್ರಸಾರದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳ ಪ್ರಮುಖರಾದ ಲೋಹಿತ್ ನಾಯಕ, ಜಗದೀಶ ನಾಯ್ಕ, ಪ್ರಭು ಸಾಲರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘು ಬೆಳಲೆ, ಹರೀಶ್ ನಾಯ್ಕ, ಪ್ರದೀಪ ನಾಯ್ಕ, ವಕೀಲರಾದ ಮಂಜುನಾಥ್, ಕನ್ನಡ ಪರ ಯುವ ಹೋರಾಟಗಾರರಾದ ಮಹೇಶ್, ನಾಗರಾಜ ಶೆಟ್ಟಿ, ನಾಮಧಾರಿ ಬಿಲ್ಲವ ಸಂಘದ ಮುಖಂಡರಾದ ಶೇಖರ್ ಪೂಜಾರಿ ಮುಂತಾದವರು ಭಾಗವಹಿಸಿದ್ದರು.


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »