TOP STORIES:

ಶಿರಸಿ ಮಾರಿಕಾಂಬ ಜಾತ್ರೆಯಲ್ಲಿ ಹಾರಿದ ಹಳದಿ ಬಾವುಟ, ಅಪ್ಪು ಸ್ಮರಣೆ


ಗುರುವಾರದಿಂದ ಪ್ರಪಂಚದಾದ್ಯಂತ ಜೇಮ್ಸ್‌ ಚಿತ್ರದ ಜಾತ್ರೆ ನಡೆಯಲಿದೆ.ನಟ ಪುನೀತ್‌ ರಾಜ್‌ ಕುಮಾರರ ಕೊನೆಯ ಚಿತ್ರ ಎನ್ನುವ ಕಾರಣಕ್ಕೆ ಈ ಚಿತ್ರದ ಬಿಡುಗಡೆ ದಿನ ಕನ್ನಡ ನಾಡಿಗೆ ಜಾತ್ರೆಯಾಗಿ ಪರಿಣಮಿಸಿದೆ. ಈ ಜಾತ್ರೆಗಿಂತ ಮೊದಲು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಜಾತ್ರೆಯಲ್ಲಿ ಪುನೀತ್‌ ರಾಜ್‌ ಕುಮಾರ ಸ್ತಬ್ಧಚಿತ್ರಗಳ ಜೊತೆಗೆ ಯುವಕರ ಮರವಣಿಗೆ ಸುದ್ದಿ ಮಾಡಿದೆ.

 

ಮಂಗಳವಾರ ರಾತ್ರಿಯಿಂದ ಪ್ರಾರಂಭವಾದ ದಕ್ಷಿಣ ಭಾರತದ ದೊಡ್ಡ ಜಾತ್ರೆ ಶಿರಸಿ ಮಾರಿ ಜಾತ್ರೆಯ ಮೆರವಣಿಗೆಯೇ ವಿಶೇಶ. ಈ ರಥೋತ್ಸವದ ಸಂದರ್ಭದಲ್ಲಿ ಧಾರ್ಮಿಕ, ಸಾಂಸ್ಕೃತಿಕ ವೈಶಿಷ್ಟ್ಯಗಳ ಮೆರವಣಿಗೆಯೇ ನಡೆಯುತ್ತದೆ. ಈ ವರ್ಷದ ಬುಧವಾರದ ಮುಂಜಾನೆಯ ಮಾರಿಕಾಂಬಾ ರಥಾಗಮನ ಸಂದರ್ಭದಲ್ಲಿ ಹಿಂದಿನಂತೆ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಆಕರ್ಷಣೆಗಳಿದ್ದವು. ಇವುಗಳೊಂದಿಗೆ ಈ ಬಾರಿ ಇಲ್ಲಿಯ ಯುವಕರು ರಥ ಮೆರವಣಿಗೆಯಲ್ಲಿ ಪುನೀತ್‌ ರಾಜ್‌ ಕುಮಾರ ವೈಶಿಷ್ಟ್ಯ ನೆನಪಿಸುವ ಮೆರವಣಿಗೆಯೊಂದಿಗೆ ಡೊಳ್ಳಿನ ಕುಣಿತ ಮಾಡಿ ಸಾರ್ವಜನಿಕರ ಗಮನ ಸೆಳೆದರು.

ಪುನೀತ್‌ ರಾಜ್‌ ಕುಮಾರ್‌ ಬ್ಯಾನರ್ಗಳು, ಪೋಸ್ಟರ್‌ ಗಳೊಂದಿಗೆ ಡೊಳ್ಳು ಹೊಡೆದು ಸಿಳ್ಳೆ ಹಾಕಿದರು. ಜಾತ್ರೆಯಲ್ಲಿ ನಟನೊಬ್ಬನ ಆರಾಧನೆ, ಪುನೀತ್‌ ಸ್ಮರಣೆಗಾಗಿ ಬಾವುಟ,ಸ್ತಬ್ಧಚಿತ್ರ ಪ್ರದರ್ಶನ ಮಾಡಿ ಅಪ್ಪು ನೆನಪು ಚಿರಸ್ಥಾಯಿಯಾಗುವಂತೆ ಮಾಡಿದ್ದು ವಿಶೇ ಶವೆನಿಸಿತು.

ಇದರೊಂದಿಗೆ ಈ ವರ್ಷ ಬ್ರಹ್ಮಶ್ರೀ ನಾರಾಯಣ ಗುರುಗಳ ನೆನಪಿಗೆ ಹಳದಿ ಬಾವುಟ ಹಾರಿಸಿದ್ದೂ ವಿಶೇಶವೆನಿಸಿತು.

ರಾಜ್ಯದಾದ್ಯಂತ ನಾರಾಯಣ ಗುರುಗಳ ನೆನಪು, ಸ್ಮರಣೆ ಚಿಂತನೆಗಳ ಪ್ರಸಾರದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳು ಹಳದಿ ಶಾಲಿನೊಂದಿಗೆ ಡೊಳ್ಳುಹೊಡೆದು ಹಳದಿ ಬಾವುಟ ಹಾರಿಸಿದ್ದು ಜನಾಕರ್ಷಣೆ ಎನಿಸಿತು. ಸಂಪ್ರದಾಯ, ಚಾರಿತ್ರಿಕ ಆಚರಣೆಗಳ ವೈಶಿಷ್ಟ್ಯದ ಜೊತೆಗೆ ಮಾರಿಜಾತ್ರೆಯ ತೇರಿನಲ್ಲಿ ಕಾಣಿಸಿಕೊಂಡ ಅಪ್ಪು ಅಭಿಮಾನಿಗಳು, ನಾರಾಯಣಗುರು ಅನುಯಾಯಿಗಳು ಈ ವರ್ಷದ ಜಾತ್ರಾ ಮೆರವಣಿಗೆ ಸೊಗಸು ಹೆಚ್ಚಿಸಿದರು. ಶಿರಸಿ ಪೇಟೆಯಿಡಿ ತುಂಬಿದ್ದ ಜನರ ಮಧ್ಯೆ ಮಾರಿಕಾಂಬಾ ರಥದ ಜೊತೆಗೆ ಡೊಳ್ಳಿನೊಂದಿಗೆ ಹೆಜ್ಜೆಹಾಕಿದ ಪುನೀತ್‌ ಅಭಿಮಾನಿಗಳು, ನಾರಾಯಣಗುರುಗಳ ಬಿ.ಎಸ್. ಎನ್.ಡಿ.ಪಿ.‌ಹಳದಿ ವಸ್ತ್ರ ಜನಾಕರ್ಷಣೆಯ ಕೇಂದ್ರವೆನಿಸಿದವು.ಜೊತೆಗೆ ರಾಜ್ಯದಾದ್ಯಂತ ನಾರಾಯಣ ಗುರುಗಳ[Narayana Guru] ನೆನಪು, ಸ್ಮರಣೆ ಚಿಂತನೆಗಳ ಪ್ರಸಾರದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳ ಪ್ರಮುಖರಾದ ಲೋಹಿತ್ ನಾಯಕ, ಜಗದೀಶ ನಾಯ್ಕ, ಪ್ರಭು ಸಾಲರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘು ಬೆಳಲೆ, ಹರೀಶ್ ನಾಯ್ಕ, ಪ್ರದೀಪ ನಾಯ್ಕ, ವಕೀಲರಾದ ಮಂಜುನಾಥ್, ಕನ್ನಡ ಪರ ಯುವ ಹೋರಾಟಗಾರರಾದ ಮಹೇಶ್, ನಾಗರಾಜ ಶೆಟ್ಟಿ, ನಾಮಧಾರಿ ಬಿಲ್ಲವ ಸಂಘದ ಮುಖಂಡರಾದ ಶೇಖರ್ ಪೂಜಾರಿ ಮುಂತಾದವರು ಭಾಗವಹಿಸಿದ್ದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »