TOP STORIES:

ಶಿರಸಿ ಮಾರಿಕಾಂಬ ಜಾತ್ರೆಯಲ್ಲಿ ಹಾರಿದ ಹಳದಿ ಬಾವುಟ, ಅಪ್ಪು ಸ್ಮರಣೆ


ಗುರುವಾರದಿಂದ ಪ್ರಪಂಚದಾದ್ಯಂತ ಜೇಮ್ಸ್‌ ಚಿತ್ರದ ಜಾತ್ರೆ ನಡೆಯಲಿದೆ.ನಟ ಪುನೀತ್‌ ರಾಜ್‌ ಕುಮಾರರ ಕೊನೆಯ ಚಿತ್ರ ಎನ್ನುವ ಕಾರಣಕ್ಕೆ ಈ ಚಿತ್ರದ ಬಿಡುಗಡೆ ದಿನ ಕನ್ನಡ ನಾಡಿಗೆ ಜಾತ್ರೆಯಾಗಿ ಪರಿಣಮಿಸಿದೆ. ಈ ಜಾತ್ರೆಗಿಂತ ಮೊದಲು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಜಾತ್ರೆಯಲ್ಲಿ ಪುನೀತ್‌ ರಾಜ್‌ ಕುಮಾರ ಸ್ತಬ್ಧಚಿತ್ರಗಳ ಜೊತೆಗೆ ಯುವಕರ ಮರವಣಿಗೆ ಸುದ್ದಿ ಮಾಡಿದೆ.

 

ಮಂಗಳವಾರ ರಾತ್ರಿಯಿಂದ ಪ್ರಾರಂಭವಾದ ದಕ್ಷಿಣ ಭಾರತದ ದೊಡ್ಡ ಜಾತ್ರೆ ಶಿರಸಿ ಮಾರಿ ಜಾತ್ರೆಯ ಮೆರವಣಿಗೆಯೇ ವಿಶೇಶ. ಈ ರಥೋತ್ಸವದ ಸಂದರ್ಭದಲ್ಲಿ ಧಾರ್ಮಿಕ, ಸಾಂಸ್ಕೃತಿಕ ವೈಶಿಷ್ಟ್ಯಗಳ ಮೆರವಣಿಗೆಯೇ ನಡೆಯುತ್ತದೆ. ಈ ವರ್ಷದ ಬುಧವಾರದ ಮುಂಜಾನೆಯ ಮಾರಿಕಾಂಬಾ ರಥಾಗಮನ ಸಂದರ್ಭದಲ್ಲಿ ಹಿಂದಿನಂತೆ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಆಕರ್ಷಣೆಗಳಿದ್ದವು. ಇವುಗಳೊಂದಿಗೆ ಈ ಬಾರಿ ಇಲ್ಲಿಯ ಯುವಕರು ರಥ ಮೆರವಣಿಗೆಯಲ್ಲಿ ಪುನೀತ್‌ ರಾಜ್‌ ಕುಮಾರ ವೈಶಿಷ್ಟ್ಯ ನೆನಪಿಸುವ ಮೆರವಣಿಗೆಯೊಂದಿಗೆ ಡೊಳ್ಳಿನ ಕುಣಿತ ಮಾಡಿ ಸಾರ್ವಜನಿಕರ ಗಮನ ಸೆಳೆದರು.

ಪುನೀತ್‌ ರಾಜ್‌ ಕುಮಾರ್‌ ಬ್ಯಾನರ್ಗಳು, ಪೋಸ್ಟರ್‌ ಗಳೊಂದಿಗೆ ಡೊಳ್ಳು ಹೊಡೆದು ಸಿಳ್ಳೆ ಹಾಕಿದರು. ಜಾತ್ರೆಯಲ್ಲಿ ನಟನೊಬ್ಬನ ಆರಾಧನೆ, ಪುನೀತ್‌ ಸ್ಮರಣೆಗಾಗಿ ಬಾವುಟ,ಸ್ತಬ್ಧಚಿತ್ರ ಪ್ರದರ್ಶನ ಮಾಡಿ ಅಪ್ಪು ನೆನಪು ಚಿರಸ್ಥಾಯಿಯಾಗುವಂತೆ ಮಾಡಿದ್ದು ವಿಶೇ ಶವೆನಿಸಿತು.

ಇದರೊಂದಿಗೆ ಈ ವರ್ಷ ಬ್ರಹ್ಮಶ್ರೀ ನಾರಾಯಣ ಗುರುಗಳ ನೆನಪಿಗೆ ಹಳದಿ ಬಾವುಟ ಹಾರಿಸಿದ್ದೂ ವಿಶೇಶವೆನಿಸಿತು.

ರಾಜ್ಯದಾದ್ಯಂತ ನಾರಾಯಣ ಗುರುಗಳ ನೆನಪು, ಸ್ಮರಣೆ ಚಿಂತನೆಗಳ ಪ್ರಸಾರದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳು ಹಳದಿ ಶಾಲಿನೊಂದಿಗೆ ಡೊಳ್ಳುಹೊಡೆದು ಹಳದಿ ಬಾವುಟ ಹಾರಿಸಿದ್ದು ಜನಾಕರ್ಷಣೆ ಎನಿಸಿತು. ಸಂಪ್ರದಾಯ, ಚಾರಿತ್ರಿಕ ಆಚರಣೆಗಳ ವೈಶಿಷ್ಟ್ಯದ ಜೊತೆಗೆ ಮಾರಿಜಾತ್ರೆಯ ತೇರಿನಲ್ಲಿ ಕಾಣಿಸಿಕೊಂಡ ಅಪ್ಪು ಅಭಿಮಾನಿಗಳು, ನಾರಾಯಣಗುರು ಅನುಯಾಯಿಗಳು ಈ ವರ್ಷದ ಜಾತ್ರಾ ಮೆರವಣಿಗೆ ಸೊಗಸು ಹೆಚ್ಚಿಸಿದರು. ಶಿರಸಿ ಪೇಟೆಯಿಡಿ ತುಂಬಿದ್ದ ಜನರ ಮಧ್ಯೆ ಮಾರಿಕಾಂಬಾ ರಥದ ಜೊತೆಗೆ ಡೊಳ್ಳಿನೊಂದಿಗೆ ಹೆಜ್ಜೆಹಾಕಿದ ಪುನೀತ್‌ ಅಭಿಮಾನಿಗಳು, ನಾರಾಯಣಗುರುಗಳ ಬಿ.ಎಸ್. ಎನ್.ಡಿ.ಪಿ.‌ಹಳದಿ ವಸ್ತ್ರ ಜನಾಕರ್ಷಣೆಯ ಕೇಂದ್ರವೆನಿಸಿದವು.ಜೊತೆಗೆ ರಾಜ್ಯದಾದ್ಯಂತ ನಾರಾಯಣ ಗುರುಗಳ[Narayana Guru] ನೆನಪು, ಸ್ಮರಣೆ ಚಿಂತನೆಗಳ ಪ್ರಸಾರದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳ ಪ್ರಮುಖರಾದ ಲೋಹಿತ್ ನಾಯಕ, ಜಗದೀಶ ನಾಯ್ಕ, ಪ್ರಭು ಸಾಲರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘು ಬೆಳಲೆ, ಹರೀಶ್ ನಾಯ್ಕ, ಪ್ರದೀಪ ನಾಯ್ಕ, ವಕೀಲರಾದ ಮಂಜುನಾಥ್, ಕನ್ನಡ ಪರ ಯುವ ಹೋರಾಟಗಾರರಾದ ಮಹೇಶ್, ನಾಗರಾಜ ಶೆಟ್ಟಿ, ನಾಮಧಾರಿ ಬಿಲ್ಲವ ಸಂಘದ ಮುಖಂಡರಾದ ಶೇಖರ್ ಪೂಜಾರಿ ಮುಂತಾದವರು ಭಾಗವಹಿಸಿದ್ದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »