TOP STORIES:

FOLLOW US

ಶ್ರೀಮಂತ ರಾಜ ಗುಳಿಗ ಸೇವಾನಿಧಿಯಿಂದ ಬಡಕುಟುಂಬಕ್ಕೆ ನೆರವು


ಕೊರೋನ ಎಂತ ಪರಿಸ್ಥಿತಿಗೆ ಕೆಲವರನ್ನು ತಂದು ನಿಲ್ಲಿಸಿದೆ ಎಂದರೆ ಒಂದು ಹೊತ್ತಿನ ಅನ್ನಕ್ಕಾಗಿ ಪರದಾಡುವ ಪರಿಸ್ಥಿತಿ ಬಂದು ಒದಗಿದೆ ಎಂದರೆ ತಪ್ಪಾಗಲಾರದು.ಇಂತಹ ಸಮಯದಲ್ಲಿ ಪಚ್ಚನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಒಂದು ಕುಟುಂಬ ತುಂಬಾ ಕಷ್ಟದಲ್ಲಿ ಬದುಕುವ ಪರಿಸ್ಥಿತಿ ಬಂದು ಒದಗಿದೆ.ಕೊರೋನ ಸಂದಿಗ್ಧ ಪರಿಸ್ಥಿತಿಯಲ್ಲಿ ಆ ಕುಟುಂಬದ ಆಧಾರ ಸ್ತಂಭವಾಗಿದ್ದ ಯುವಕನಿಗೆ ಬೆನ್ನಿನಲ್ಲಿ ಒಂದು ಸಣ್ಣ ನೋವು ಕಾಣಿಸಿಕೊಂಡಿತು.ಅದನ್ನು ಕಂಡ ತಾಯಿ ಮಗನನ್ನು ಖಾಸಗಿ ಆಸ್ಪತ್ರೆಗೆ ಸೇರಿಸುತ್ತಾರೆ ಅಲ್ಲಿ ಅದು ಇದು ಅಂತ ಹೇಳಿ ಸುಮಾರು ದೈಹಿಕ ಪರೀಕ್ಷೆಗಳನ್ನು ಮಾಡಿಸಿ ಕೊನೆಗೆ ಕೊರೋನ ಟೆಸ್ಟ್ ಮಾಡಿಸುತ್ತಾರೆ.ಮಗನಿಗೆ ಕೊರೋನ ಪಾಸಿಟಿವ್ ಇದೆ ಅಂತ ಹೇಳಿ ಎರಡು ಹೆಸರಾಂತ ಆಸ್ಪತ್ರೆಗೆಗಳಲ್ಲಿ ಒಂದು ತಿಂಗಳಿಗೂ ಹೆಚ್ಚು ದಿನ ಚಿಕಿತ್ಸೆ ನೀಡುತ್ತಾರೆ.ಆದರೆ ಏನು ಮಾಡುವುದು ವಿಧಿ ಲಿಖಿತ ಎಂಬಂತೆ ಕೊನೆಗೂ ಮಗ ತಾಯಿಯನ್ನು ಬಿಟ್ಟು ದೇವರ ಪಾದ ಸೇರಿಯೆ ಬಿಡುತ್ತಾರೆ.ಆದರೆ ಏನು ಮಾಡೋದು ಮೊದಲೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಈ ಬಡಕುಟುಂಬ ಸಾಲ ಸೋಲ ಮಾಡಿ ಏಳು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದರೂ ಮಗ ಉಳಿಯಲಿಲ್ಲ ಎಂಬ ದು:ಖ ಒಂದೆಡೆಯಾದರೆ ಇನ್ನೊಂದೆಡೆ ಮಗನ ಅಂತ್ಯಕ್ರಿಯೆ ಮಾಡಲು ಹಣವಿಲ್ಲದ ಪರಿಸ್ಥಿತಿಗೆ ಬಂದು ಬಿಟ್ಟಿದೆ ಅಷ್ಟು ಬಡತನ ಆ ಕುಟುಂಬಕ್ಕೆ ಇತ್ತು.

ಈ ವಿಷಯ ತಿಳಿದ ಶ್ರೀಮಂತ ರಾಜ ಗುಳಿಗ ನೆಲೆಸಿರುವ ಶ್ರೀ ಕ್ಷೇತ್ರ ಪಚ್ಚನಾಡಿಯ ಧರ್ಮಾಧಿಕಾರಿ ಸತೀಶ್ ಪೂಜಾರಿ ಬಂದಲೆ ಪಚ್ಚನಾಡಿ ಇವರ ಮುಂದಾಳತ್ವದಲ್ಲಿರುವ ಶ್ರೀಮಂತ ರಾಜ ಗುಳಿಗ ಸೇವಾ ನಿಧಿಯಿಂದ ಈ ಕುಟುಂಬಕ್ಕೆ 25000ರೂಪಾಯಿ ಮತ್ತು ಕೆಲವು ದಿನ ನಿತ್ಯದ ಸಾಮಾಗ್ರಿಗಳನ್ನು ನೀಡುವ ಮೂಲಕ ಮಾನವೀಯತೆಯ ಮೆರದರು.ಇಂತಹ ಕಾರ್ಯಗಳು ಇನ್ನಷ್ಟು ಈ ಕ್ಷೇತ್ರದಿಂದಾಗಲಿ ಶ್ರೀಮಂತ ರಾಜ ಗುಳಿಗ ಎಲ್ಲರಿಗೂ ಒಳಿತು ಮಾಡಲಿ ಎಂದು ಹಾರೈಸುತ್ತೇವೆ..


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »