TOP STORIES:

ಶ್ರೀಮಂತ ರಾಜ ಗುಳಿಗ ಸೇವಾನಿಧಿಯಿಂದ ಬಡಕುಟುಂಬಕ್ಕೆ ನೆರವು


ಕೊರೋನ ಎಂತ ಪರಿಸ್ಥಿತಿಗೆ ಕೆಲವರನ್ನು ತಂದು ನಿಲ್ಲಿಸಿದೆ ಎಂದರೆ ಒಂದು ಹೊತ್ತಿನ ಅನ್ನಕ್ಕಾಗಿ ಪರದಾಡುವ ಪರಿಸ್ಥಿತಿ ಬಂದು ಒದಗಿದೆ ಎಂದರೆ ತಪ್ಪಾಗಲಾರದು.ಇಂತಹ ಸಮಯದಲ್ಲಿ ಪಚ್ಚನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಒಂದು ಕುಟುಂಬ ತುಂಬಾ ಕಷ್ಟದಲ್ಲಿ ಬದುಕುವ ಪರಿಸ್ಥಿತಿ ಬಂದು ಒದಗಿದೆ.ಕೊರೋನ ಸಂದಿಗ್ಧ ಪರಿಸ್ಥಿತಿಯಲ್ಲಿ ಆ ಕುಟುಂಬದ ಆಧಾರ ಸ್ತಂಭವಾಗಿದ್ದ ಯುವಕನಿಗೆ ಬೆನ್ನಿನಲ್ಲಿ ಒಂದು ಸಣ್ಣ ನೋವು ಕಾಣಿಸಿಕೊಂಡಿತು.ಅದನ್ನು ಕಂಡ ತಾಯಿ ಮಗನನ್ನು ಖಾಸಗಿ ಆಸ್ಪತ್ರೆಗೆ ಸೇರಿಸುತ್ತಾರೆ ಅಲ್ಲಿ ಅದು ಇದು ಅಂತ ಹೇಳಿ ಸುಮಾರು ದೈಹಿಕ ಪರೀಕ್ಷೆಗಳನ್ನು ಮಾಡಿಸಿ ಕೊನೆಗೆ ಕೊರೋನ ಟೆಸ್ಟ್ ಮಾಡಿಸುತ್ತಾರೆ.ಮಗನಿಗೆ ಕೊರೋನ ಪಾಸಿಟಿವ್ ಇದೆ ಅಂತ ಹೇಳಿ ಎರಡು ಹೆಸರಾಂತ ಆಸ್ಪತ್ರೆಗೆಗಳಲ್ಲಿ ಒಂದು ತಿಂಗಳಿಗೂ ಹೆಚ್ಚು ದಿನ ಚಿಕಿತ್ಸೆ ನೀಡುತ್ತಾರೆ.ಆದರೆ ಏನು ಮಾಡುವುದು ವಿಧಿ ಲಿಖಿತ ಎಂಬಂತೆ ಕೊನೆಗೂ ಮಗ ತಾಯಿಯನ್ನು ಬಿಟ್ಟು ದೇವರ ಪಾದ ಸೇರಿಯೆ ಬಿಡುತ್ತಾರೆ.ಆದರೆ ಏನು ಮಾಡೋದು ಮೊದಲೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಈ ಬಡಕುಟುಂಬ ಸಾಲ ಸೋಲ ಮಾಡಿ ಏಳು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದರೂ ಮಗ ಉಳಿಯಲಿಲ್ಲ ಎಂಬ ದು:ಖ ಒಂದೆಡೆಯಾದರೆ ಇನ್ನೊಂದೆಡೆ ಮಗನ ಅಂತ್ಯಕ್ರಿಯೆ ಮಾಡಲು ಹಣವಿಲ್ಲದ ಪರಿಸ್ಥಿತಿಗೆ ಬಂದು ಬಿಟ್ಟಿದೆ ಅಷ್ಟು ಬಡತನ ಆ ಕುಟುಂಬಕ್ಕೆ ಇತ್ತು.

ಈ ವಿಷಯ ತಿಳಿದ ಶ್ರೀಮಂತ ರಾಜ ಗುಳಿಗ ನೆಲೆಸಿರುವ ಶ್ರೀ ಕ್ಷೇತ್ರ ಪಚ್ಚನಾಡಿಯ ಧರ್ಮಾಧಿಕಾರಿ ಸತೀಶ್ ಪೂಜಾರಿ ಬಂದಲೆ ಪಚ್ಚನಾಡಿ ಇವರ ಮುಂದಾಳತ್ವದಲ್ಲಿರುವ ಶ್ರೀಮಂತ ರಾಜ ಗುಳಿಗ ಸೇವಾ ನಿಧಿಯಿಂದ ಈ ಕುಟುಂಬಕ್ಕೆ 25000ರೂಪಾಯಿ ಮತ್ತು ಕೆಲವು ದಿನ ನಿತ್ಯದ ಸಾಮಾಗ್ರಿಗಳನ್ನು ನೀಡುವ ಮೂಲಕ ಮಾನವೀಯತೆಯ ಮೆರದರು.ಇಂತಹ ಕಾರ್ಯಗಳು ಇನ್ನಷ್ಟು ಈ ಕ್ಷೇತ್ರದಿಂದಾಗಲಿ ಶ್ರೀಮಂತ ರಾಜ ಗುಳಿಗ ಎಲ್ಲರಿಗೂ ಒಳಿತು ಮಾಡಲಿ ಎಂದು ಹಾರೈಸುತ್ತೇವೆ..


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »