TOP STORIES:

FOLLOW US

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ ಅಮರ್ ರಹೇ


ಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿ೦ಜ.

ನಮ್ಮನ್ನು ಅಗಲಿದ ಸಂತೋಷ್ ಗೆ

ಇದು ಅಕ್ಷರದ ನಮನ  ಅಷ್ಟೇ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೌಂದರ್ಯವನ್ನು ನೋಡಿದಾಗ ಯಾರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಅಂತಹ ಸುಂದರ ದೇವಸ್ಥಾನದನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ. ಕೆಲಸವನ್ನು ನಿಷ್ಠೆಯಿಂದ, ಭಕ್ತಿಯಿಂದ ಹಾಗೂಪ್ರಾಮಾಣಿಕತೆಯಿಂದ ಮಾಡಿದ ವ್ಯಕ್ತಿ ಸಂತೋಷ್.

ಅವರು ಕೋಟಿಚೆನ್ನಯ್ಯ , ದೇಯಿ ಬೈದೆತಿ ಬಗ್ಗೆ ಅಧ್ಯಯನ ಮಾಡಿದ್ದರು. ತಜ್ಞರೊಂದಿಗೆ ಸಮಾಲೋಚನೆ ಮಾಡಿದ್ದರು. ಕಾರಣದಿಂದಲೇ ಸರ್ವರೂ ಮೆಚ್ಚುವ ದೇವಸ್ಥಾನದ ನಿರ್ಮಾಣದ ಆರ್ಕಿಟೆಕ್ಚರ್ ಆಗಿ ಅವರು ಯಶಸ್ವಿಯಾಗಿದ್ದರು.

ಅದು ಅಲ್ಲದೆ ಗೆಜ್ಜೆ ಗಿರಿಯ ಮೂಲಕ ಸಮಾಜಕ್ಕೆ ಕೊಡುಗೆ ಕೊಡಬೇಕು ಎಂಬ ಪ್ರಾಮಾಣಿಕ ಆಸೆ ಅವರಲ್ಲಿ ಇತ್ತು. ಮರಣಹೊಂದುವ ಎರಡು ದಿವಸದ ಮುಂದೆ ಅವರೊಂದಿಗೆ ಮಾತನಾಡಲು ಬಂದ ಕ್ಷೇತ್ರದ ಪದಾಧಿಕಾರಿ ಹಾಗೂ ಸಲಹೆಗಾರ ರಲ್ಲಿ ವಿಷಯವನ್ನು ಪ್ರಸ್ತಾಪಿಸಿದ್ದರು. ಅಂದರೆ ಗೆಜ್ಜೆಗಿರಿ ಬಗ್ಗೆ ಅವರಿಗಿದ್ದ ಕನಸು, ಆಶಯ ಅದನ್ನು ಶಬ್ದಗಳಲ್ಲಿ ವರ್ಣಿಸಲುಅಸಾಧ್ಯ.

ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳ, ಉದ್ಯೋಗ ದೊರಕಿಸುವ ಕಾರ್ಯಕ್ರಮಗಳ

ಮೂಲಕ ಗೆಜ್ಜೆಗಿರಿಯ ಸ್ಥಾಪನೆಯ ನಿಜವಾದ ಉದ್ದೇಶವನ್ನು ಹಾಗೂ ಕೋಟಿಚೆನ್ನಯರ ಆಶಯಗಳನ್ನು ಅನುಷ್ಠಾನಿಸಲು , ಮೂಲಕ

ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಸ್ಪಷ್ಟ ಕಲ್ಪನೆ ಹೊಂದಿದ್ದ ಸಂತೋಷ್ ನಮ್ಮ ಜೊತೆ ಇಲ್ಲ.

ಅವರೊಬ್ಬ ಕ್ಷೇತ್ರದ ಆರ್ಕಿಟೆಕ್ಚರ್ ಮಾತ್ರ ಆಗಿರಲಿಲ್ಲ, ಅವರು ಕ್ಷೇತ್ರದ ಹಿನ್ನೆಲೆಯ  ಬೌದ್ಧಿಕ ಶಕ್ತಿ ಕೂಡ ಆಗಿದ್ದರು.

ಇಂತಹ ಸಂತೋಷ್ ಕುಮಾರ್ ಕೊಟ್ಟಿಂಜ ನಮ್ಮೊಂದಿಗಿಲ್ಲ. ಆದರೆ ಅವರು ಹಂಚಿಕೊಂಡ ಕನಸು ನಮ್ಮೊಂದಿಗಿದೆ. ಅದನ್ನು ನನಸುಮಾಡುವ ಜವಾಬ್ದಾರಿ ನಮ್ಮ ಮೇಲೆ  ಇದೆ. ಗೆಜ್ಜೆಗಿರಿ ಭಕ್ತರು ಹಾಗೂ ಸರ್ವ ಸಮಾಜ ಎಂದಿಗೂ ಸಂತೋಷ್ ಕುಮಾರ್ಕೊಟ್ಟಿಂಜ ಅವರನ್ನು ನೆನಪಿಸುತ್ತದೆ. ಅವರ ಕನಸನ್ನು ನನಸು ಮಾಡಿದಾಗಲೇ ಅದು ಅವರಿಗೆ ಸಲ್ಲುವ ಬಹುದೊಡ್ಡ ಗೌರವ.

ಮತ್ತೊಮ್ಮೆಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿಂಜ.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »