TOP STORIES:

FOLLOW US

ಶ್ರೀ ಕ್ಷೇತ್ರ ಪೊಳಲಿಯ`ಮೃಣ್ಮಯ ಮೂರ್ತಿ’ ವೀಡಿಯೋ ಚಿತ್ರಣ ಬಿಡುಗಡೆ


ಪೊಳಲಿ : ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ನಡೆಯುವ ಒಂದು ತಿಂಗಳ ಜಾತ್ರೆ, ಜಾತ್ರೆಯ ಸೊಬಗು, ಔಚಿತ್ಯ, ಐತಿಹ್ಯ, ಸ್ಥಳನಾಮ ವಿಶೇಷತೆ, ನಂಬಿಕೆ, ಶ್ರೀ ದೇವಿಯ ಕಾರ್ಣಿಕದ ಜೊತೆಗೆ ಶ್ರೀ ಕ್ಷೇತ್ರದ ಸಂಪೂರ್ಣ ಚಿತ್ರಣ ಹಾಗೂ ಇತರ ಕೆಲವು ಮಹತ್ವದ ವಿಷಯಗಳನ್ನೊಳಗೊಂಡ ವಿಶಿಷ್ಟ ವೀಡಿಯೋ ಸಂಕಲನ `ಮೃಣ್ಮಯ ಮೂರ್ತಿ’ ಎ. ೧೦ ರಂದು ಶನಿವಾರ ಪೊಳಲಿ ದೇವರ ಸನ್ನಿಧಾನದಲ್ಲಿ ವಿದ್ಯುಕ್ತವಾಗಿ ಬಿಡುಗಡೆಗೊಂಡಿತು.

ಮೊದಲಿಗೆ ವೀಡಿಯೋ ಕ್ಲಿಪ್ಲಿಂಗ್‌ನ್ನು (ಪೋಸ್ಟರ್) ಶ್ರೀ ರಾಜರಾಜೇಶ್ವರಿ ಅಮ್ಮನವರ ಪದತಲದಲ್ಲಿಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ. ಮಾಧವ ಭಟ್ , ನಾರಾಯಣ ಭಟ್,ಕೆ.ರಾಮ್ ಭಟ್, ಮಾಧವ ಮಯ್ಯ,ನಡುಮನೆ. ಕಂಠೀರಾಯ ರಾಮಕೃಷ್ಣ ಭಟ್ ಅರ್ಚಕ, ಪರಮೇಶ್ವರ ಭಟ್ ಅವರ ಸಮಾಕ್ಷಮದಲ್ಲಿ ಚಂದ್ರಶೇಖರ ಭಟ್ ಮೃಣ್ಮಯ ಮೂರ್ತಿಯ ಯಶಸ್ವಿಗೆ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಮೊಕ್ತೇಸರ ರಾದ ಯು .ತಾರನಾಥ ಆಳ್ವ ,ಚೇರ ಸೂರ್ಯನಾರಾಯಣ ರಾವ್ ಹಾಗೂ ರಮೇಶ್ ರಾವ್ ಚೇರಾ, ಸುಭಾಷ್ ಆಳ್ವ ಉಳಿಪಾಡಿಗುತ್ತು, ಅರುಣ್ ಆಳ್ವ ಉಳಿಪಾಡಿಗುತ್ತು, ಕೃಷ್ಣ ಕುಮಾರ್ ಪೂಂಜ, ಚಂದ್ರಹಾಸ ಶೆಟ್ಟಿ ಪೆರ್ಮಂಕಿ, ಜೀವರಾಜ ಶೆಟ್ಟಿ ಅಮ್ಮುಂಜೆಗುತ್ತು, ಉದಯ ಆಳ್ವ, ವಿಷ್ಣುಮೂರ್ತಿ ನಟ್ಟೋಜ, ಸೋಮಶೇಖರ್ ಶೆಟ್ಟಿ, ಅ.ನ.ಭ ಪೊಳಲಿ, ರೂಪಾ ಡಿ ಶೆಟ್ಟಿ, ದುರ್ಗಾಪ್ರಸಾದ ಶೆಟ್ಟಿ, ಸಂತೋಷ್ ಕುಮಾರ್ ಆಯೆರೆಮಾರ್ .ದೇವಳದ ಕಾರ್ಯನಿರ್ವಣಾಧಿಕಾರಿ ಜಯಮ್ಮ, ವೀಡಿಯೋ ನಿರ್ಮಾಪಕ ವಾಮನ್ ಪೂಜಾರಿ ಸೂರ್ಲ, ವೀಡಿಯೋ ಸಂಕಲನ ಮಾಡಿರುವ ಹರ್ಷ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಪೊಳಲಿ ಅಮ್ಮನವರ ಆಶೀರ್ವಾದದೊಂದಿಗೆ `ಸುದ್ದಿ೯’ ಸುದ್ದಿ ಪ್ರಸಾರ ಸಂಸ್ಥೆಯ ಮಾಲಕ ವಾಮನ ಪೂಜಾರಿ ಸೂರ್ಲ ನಿರ್ಮಾಣದ ಈ ವೀಡಿಯೋ ಚಿತ್ರಣದಲ್ಲಿ ಹಲವರು ಕೈಜೋಡಿಸಿದ್ದಾರೆ. ಅ.ನ.ಭ ಪೊಳಲಿ ಚಿತ್ರಕತೆಗೆ ರೂಪಾ ಡಿ ಶೆಟ್ಟಿ ನಿರೂಪಣೆ ಇದೆ. ಟ್ಯಾಬ್ ಸ್ಟೂಡಿಯೋ ಬೆದ್ರ ಧ್ವನಿ ಮುದ್ರಣ ಮಾಡಿದ್ದರೆ, ವಿನಾಯಕ ಶೆಣೈ ಛಾಯಾಗ್ರಾಹಕರಾಗಿ ದುಡಿದಿದ್ದಾರೆ. ಹರ್ಷ ಕುಮಾರ್ ಕಳಸಗುರಿ ಸಂಕಲನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಪೊಳಲಿ ಶ್ರೀ ಕ್ಷೇತ್ರದ ಕಾಲಾವಧಿ ಜಾತ್ರೆ ಹಾಗೂ ಜಾತ್ರೆಯ ಮರುದಿನ ಶ್ರೀ ಕ್ಷೇತ್ರದಲ್ಲಿ ನಡೆಯುವ ದೈವಾರಾಧನೆಯ ಸೊಬಗನ್ನು ಈ ವೀಡಿಯೋ ಚಿತ್ರಣದ ಮೂಲಕ ಹತ್ತಿರದಿಂದ ಕಂಡು ಧನ್ಯರಾಗಲು ಅವಕಾಶವಿದೆ. ಅತ್ಯಂತ ಸುಂದರ ಹಾಗೂ ಅಷ್ಟೇ ನೈಜವಾಗಿ ಮೂಡಿ ಬಂದಿರುವ ವೀಡಿಯೋ ಆಸ್ತಿಕ ಬಂಧುಗಳ ದೇವ-ದೈವಾರಾಧನೆಯ ಆಸಕ್ತಿ ಇನ್ನಷ್ಟು ಹೆಚ್ಚಿಸುವಂತಿದೆ. ಇದರಲ್ಲಿ ಅನೇಕರ ಶ್ರಮವಿದೆ ಎಂದು ಹೇಳುವ ಪತ್ರಕರ್ತ ವಾಮನ ಪೂಜಾರಿ ಸೂರ್ಲ, ಈ ವೀಡಿಯೋ ನಿರ್ಮಾಣದ ಪೊಳಲಿ ಅಮ್ಮನವರ ಭಕ್ತರಿಗೆ ಇನ್ನಷ್ಟು ಹತ್ತಿರವಾಗಿದ್ದಾರೆ ಎಂದು ಹೇಳಲು ಅಭ್ಯಂತರವಿಲ್ಲ ಎಂದು ವೀಡಿಯೋ ವೀಕ್ಷಿಸಿದ ಭಕ್ತರು ಆಡಿಕೊಂಡಿದ್ದಾರೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »