TOP STORIES:

ಶ್ರೀ ಕ್ಷೇತ್ರ ಪೊಳಲಿಯ`ಮೃಣ್ಮಯ ಮೂರ್ತಿ’ ವೀಡಿಯೋ ಚಿತ್ರಣ ಬಿಡುಗಡೆ


ಪೊಳಲಿ : ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ನಡೆಯುವ ಒಂದು ತಿಂಗಳ ಜಾತ್ರೆ, ಜಾತ್ರೆಯ ಸೊಬಗು, ಔಚಿತ್ಯ, ಐತಿಹ್ಯ, ಸ್ಥಳನಾಮ ವಿಶೇಷತೆ, ನಂಬಿಕೆ, ಶ್ರೀ ದೇವಿಯ ಕಾರ್ಣಿಕದ ಜೊತೆಗೆ ಶ್ರೀ ಕ್ಷೇತ್ರದ ಸಂಪೂರ್ಣ ಚಿತ್ರಣ ಹಾಗೂ ಇತರ ಕೆಲವು ಮಹತ್ವದ ವಿಷಯಗಳನ್ನೊಳಗೊಂಡ ವಿಶಿಷ್ಟ ವೀಡಿಯೋ ಸಂಕಲನ `ಮೃಣ್ಮಯ ಮೂರ್ತಿ’ ಎ. ೧೦ ರಂದು ಶನಿವಾರ ಪೊಳಲಿ ದೇವರ ಸನ್ನಿಧಾನದಲ್ಲಿ ವಿದ್ಯುಕ್ತವಾಗಿ ಬಿಡುಗಡೆಗೊಂಡಿತು.

ಮೊದಲಿಗೆ ವೀಡಿಯೋ ಕ್ಲಿಪ್ಲಿಂಗ್‌ನ್ನು (ಪೋಸ್ಟರ್) ಶ್ರೀ ರಾಜರಾಜೇಶ್ವರಿ ಅಮ್ಮನವರ ಪದತಲದಲ್ಲಿಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ. ಮಾಧವ ಭಟ್ , ನಾರಾಯಣ ಭಟ್,ಕೆ.ರಾಮ್ ಭಟ್, ಮಾಧವ ಮಯ್ಯ,ನಡುಮನೆ. ಕಂಠೀರಾಯ ರಾಮಕೃಷ್ಣ ಭಟ್ ಅರ್ಚಕ, ಪರಮೇಶ್ವರ ಭಟ್ ಅವರ ಸಮಾಕ್ಷಮದಲ್ಲಿ ಚಂದ್ರಶೇಖರ ಭಟ್ ಮೃಣ್ಮಯ ಮೂರ್ತಿಯ ಯಶಸ್ವಿಗೆ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಮೊಕ್ತೇಸರ ರಾದ ಯು .ತಾರನಾಥ ಆಳ್ವ ,ಚೇರ ಸೂರ್ಯನಾರಾಯಣ ರಾವ್ ಹಾಗೂ ರಮೇಶ್ ರಾವ್ ಚೇರಾ, ಸುಭಾಷ್ ಆಳ್ವ ಉಳಿಪಾಡಿಗುತ್ತು, ಅರುಣ್ ಆಳ್ವ ಉಳಿಪಾಡಿಗುತ್ತು, ಕೃಷ್ಣ ಕುಮಾರ್ ಪೂಂಜ, ಚಂದ್ರಹಾಸ ಶೆಟ್ಟಿ ಪೆರ್ಮಂಕಿ, ಜೀವರಾಜ ಶೆಟ್ಟಿ ಅಮ್ಮುಂಜೆಗುತ್ತು, ಉದಯ ಆಳ್ವ, ವಿಷ್ಣುಮೂರ್ತಿ ನಟ್ಟೋಜ, ಸೋಮಶೇಖರ್ ಶೆಟ್ಟಿ, ಅ.ನ.ಭ ಪೊಳಲಿ, ರೂಪಾ ಡಿ ಶೆಟ್ಟಿ, ದುರ್ಗಾಪ್ರಸಾದ ಶೆಟ್ಟಿ, ಸಂತೋಷ್ ಕುಮಾರ್ ಆಯೆರೆಮಾರ್ .ದೇವಳದ ಕಾರ್ಯನಿರ್ವಣಾಧಿಕಾರಿ ಜಯಮ್ಮ, ವೀಡಿಯೋ ನಿರ್ಮಾಪಕ ವಾಮನ್ ಪೂಜಾರಿ ಸೂರ್ಲ, ವೀಡಿಯೋ ಸಂಕಲನ ಮಾಡಿರುವ ಹರ್ಷ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಪೊಳಲಿ ಅಮ್ಮನವರ ಆಶೀರ್ವಾದದೊಂದಿಗೆ `ಸುದ್ದಿ೯’ ಸುದ್ದಿ ಪ್ರಸಾರ ಸಂಸ್ಥೆಯ ಮಾಲಕ ವಾಮನ ಪೂಜಾರಿ ಸೂರ್ಲ ನಿರ್ಮಾಣದ ಈ ವೀಡಿಯೋ ಚಿತ್ರಣದಲ್ಲಿ ಹಲವರು ಕೈಜೋಡಿಸಿದ್ದಾರೆ. ಅ.ನ.ಭ ಪೊಳಲಿ ಚಿತ್ರಕತೆಗೆ ರೂಪಾ ಡಿ ಶೆಟ್ಟಿ ನಿರೂಪಣೆ ಇದೆ. ಟ್ಯಾಬ್ ಸ್ಟೂಡಿಯೋ ಬೆದ್ರ ಧ್ವನಿ ಮುದ್ರಣ ಮಾಡಿದ್ದರೆ, ವಿನಾಯಕ ಶೆಣೈ ಛಾಯಾಗ್ರಾಹಕರಾಗಿ ದುಡಿದಿದ್ದಾರೆ. ಹರ್ಷ ಕುಮಾರ್ ಕಳಸಗುರಿ ಸಂಕಲನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಪೊಳಲಿ ಶ್ರೀ ಕ್ಷೇತ್ರದ ಕಾಲಾವಧಿ ಜಾತ್ರೆ ಹಾಗೂ ಜಾತ್ರೆಯ ಮರುದಿನ ಶ್ರೀ ಕ್ಷೇತ್ರದಲ್ಲಿ ನಡೆಯುವ ದೈವಾರಾಧನೆಯ ಸೊಬಗನ್ನು ಈ ವೀಡಿಯೋ ಚಿತ್ರಣದ ಮೂಲಕ ಹತ್ತಿರದಿಂದ ಕಂಡು ಧನ್ಯರಾಗಲು ಅವಕಾಶವಿದೆ. ಅತ್ಯಂತ ಸುಂದರ ಹಾಗೂ ಅಷ್ಟೇ ನೈಜವಾಗಿ ಮೂಡಿ ಬಂದಿರುವ ವೀಡಿಯೋ ಆಸ್ತಿಕ ಬಂಧುಗಳ ದೇವ-ದೈವಾರಾಧನೆಯ ಆಸಕ್ತಿ ಇನ್ನಷ್ಟು ಹೆಚ್ಚಿಸುವಂತಿದೆ. ಇದರಲ್ಲಿ ಅನೇಕರ ಶ್ರಮವಿದೆ ಎಂದು ಹೇಳುವ ಪತ್ರಕರ್ತ ವಾಮನ ಪೂಜಾರಿ ಸೂರ್ಲ, ಈ ವೀಡಿಯೋ ನಿರ್ಮಾಣದ ಪೊಳಲಿ ಅಮ್ಮನವರ ಭಕ್ತರಿಗೆ ಇನ್ನಷ್ಟು ಹತ್ತಿರವಾಗಿದ್ದಾರೆ ಎಂದು ಹೇಳಲು ಅಭ್ಯಂತರವಿಲ್ಲ ಎಂದು ವೀಡಿಯೋ ವೀಕ್ಷಿಸಿದ ಭಕ್ತರು ಆಡಿಕೊಂಡಿದ್ದಾರೆ.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »