TOP STORIES:

ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಗೊಂದಲ ಸೃಷ್ಟಿಬೇಡ: ಬಿರುವೆರ್ ಕುಡ್ಲ ಮನವಿ


ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂದು ಬೋಧಿಸಿದ ಶ್ರೀನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು, ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ವಿಷಾದನೀಯ ಎಂಬುದಾಗಿ ಬಿರುವೆರ್ ಕುಡ್ಲ ತಿಳಿಸಿದೆ.

ಶ್ರೀನಾರಾಯಣ ಗುರುಗಳು ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿನ ವಿರುದ್ಧ ಹೋರಾಟ ನಡೆಸಿದವರು. ಶ್ರೀ ಗುರುಗಳು ಸಮಾಜಕ ಸುಧಾರಕರಾಗಿ ಸಮಾಜದ ತಾರತಮ್ಯಗಳನ್ನು ನಿವಾರಿಸುವ ಜೊತೆಗೆ ಸಮಾಜದಲ್ಲಿ ಧರ್ಮ, ಅಧ್ಯಾತ್ಮ ಜಾಗೃತಿಯನ್ನೂ ಮೂಡಿಸಿದ ಮಹಾತ್ಮರು. ಗಣರಾಜ್ಯೋತ್ಸವಕ್ಕಾಗಿ ಕೇರಳ ಸರಕಾರ ಕಳುಹಿಸಿದ ಇವರ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ಕಡೆಗಣಿಸಿದೆ ಎಂಬ ಆರೋಪದ ಮೂಲಕ ವಿವಾದ ಸೃಷ್ಟಿಸಿ ಹೇಗಾದರೂ ಮಾಡಿ ಅಧಿಕಾರ ಪಡೆಯಬೇಕೆಂಬ ಉದ್ದೇಶದಿಂದ ಇರುವ ಪಕ್ಷಗಳು ಜನರ ಮನಸ್ಸಿನಲ್ಲಿ ಗೊಂದಲ ಉಂಟು ಮಾಡಲೆತ್ನಿಸುತ್ತಿರುವುದು ಖಂಡನೀಯ. ಸುಳ್ಳು ಪ್ರಚಾರದ ಮೂಲಕ ಜನರ ನಡುವೆ ಒಡಕುಂಟು ಮಾಡಲು ಮುಂದಾಗಿರುವುದು ಖೇದಕರ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದು, ಇಂತಹ ಹುನ್ನಾರಗಳ ವಿರುದ್ಧ ಜನತೆ ಎಚ್ಚರಿಕೆಯಿಂದ ಇರಬೇಕು.

ಗಣರಾಜ್ಯೋತ್ಸವ ದಿನದಂದು ದಿಲ್ಲಿಯ ರಾಜಪಥದಲ್ಲಿ ಸಾಗುವ ಟ್ಯಾಬ್ಲೆಗಳ ಆಯ್ಕೆಗಾಗಿ ಕೆಲವು ಮಾರ್ಗದರ್ಶಿ ಸೂತ್ರಗಳಿವೆ.ಕೇಂದ್ರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ನಿರ್ಲಕ್ಷ್ಯ ಮಾಡಿದೆ. ಕೇರಳ ಸರಕಾರದ ಧೋರಣೆಯಿಂದ ರದ್ದಾಗಿದೆ ವಿನ: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಎನ್ನುವ ಕಾರಣಕ್ಕೆ ಕೇಂದ್ರ ಸರಕಾರ ರದ್ದು ಮಾಡಿಲ್ಲ ಎಂಬುದು ವಾಸ್ತವ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಬ್ರಹಗಳ ಧೈಯ ವಾಕ್ಯವನ್ನು ಪರಿಪಾಲಿಸುವ ಅವರ ಮಾರ್ಗದರ್ಶನ ಅನುಸರಿಸುವ ನಾಯಕರಾಗಿದ್ದಾರೆ.

ಗಣರಾಜ್ಯೋತ್ಸವದಂದು ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರದ ಮೆರವಣಿಗೆಗೆ ನಮ್ಮೆಲ್ಲರ ಬೆಂಬಲವಿದೆ.ಈ ಮೂಲಕ ಶ್ರೀನಾರಾಯಣ ಗುರುಗಳ ಮೇಲೆ ಇಟ್ಟಿರುವ ಅಭಿಮಾನ, ಭಕ್ತಿ ಪ್ರಪಂಚಕ್ಕೆ ಮಾದರಿಯಾಗುವಂತೆ ಆಗಲಿ ಎಂಬುದಾಗಿ ನಮ್ಮ ಹಾರೈಕೆ.

ಸುದ್ದಿಗೋಷ್ಟಿಯಲ್ಲಿ ಬಿರುವೆರ್ ಕುಡ್ಲದ ಸಹನಾ ಕುಂದರ್, ವಿದ್ಯಾ ರಾಕೇಶ್, ರಾಕೇಶ್ ಸಾಲ್ಯಾನ್, ಲಕ್ಷ್ಮೀಶ್ ಸುವರ್ಣ, ಕಿಶೋರ್ ಬಾಬು, ಪ್ರಾಣೇಶ್ ಬಂಗೇರ, ಕಿರಣ್ , ರಕ್ಷಿತ್ ಸುವರ್ಣ ಉಪಸ್ಥಿತರಿದ್ದರು.


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »