TOP STORIES:

ಶ್ರೀ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ – ಉಪ್ಪುಂದ ವತಿಯಿಂದ ನಿರ್ಮಿಸಿದ 5ನೇ ಮನೆ ಹಸ್ತಾಂತರ


ಕುಂದಾಪುರ :-8 ಅಕ್ಟೋಬರ್, ಕಾಳಾವರದಲ್ಲಿ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್( ರಿ ) ಉಪ್ಪುಂದ ಇದರ ವ್ಯವಸ್ಥಾಪಕ ನಿರ್ದೇಶಕರಾದ ಡಾಕ್ಟರ್, ಶ್ರೀ ಗೋವಿಂದ ಬಾಬು ಪೂಜಾರಿ ಅವರು ಪೂರ್ಣ ಜವಾಬ್ದಾರಿಯನ್ನು ಹೊತ್ತು ನಿರ್ಮಿಸಿಕೊಟ್ಟ 5ನೇ ಮನೆ ಗೃಹಪ್ರವೇಶ ಇಂದು ಸಂತಸದಿಂದ ನಡೆಯಿತು.

ರಿಕ್ಷಾ ಡ್ರೈವರ್ ಒಬ್ಬರ “ಕನಸು” ನನಸು ಮಾಡಿದ ಆಶ್ರಯದಾತ ಶ್ರೀ ಗೋವಿಂದ ಬಾಬು ಪೂಜಾರಿ, ಕಾಳಾವರರದ ನರಿಕೋಡ್ಲು ಮನೆ ಸತೀಶ್ ಪೂಜಾರಿ ಯವರು ನೂತನ ಮನೆ ನಿರ್ಮಾಣ ಮಾಡಬೇಕು ಎಂಬ ಕನಸು ಕಂಡು ಮನೆ ನಿರ್ಮಾಣಕ್ಕೆ ಕೈ ಹಾಕಿದ್ದರು.

ಆದರೆ ವಿಧಿ ಆಟವೇ ಬೇರೆಯಾಗಿತ್ತು ಮನೆ ಪೂರ್ಣವಾಗುವ ಮೊದಲೇ ಅಕಾಲಿಕ ಮರಣಕ್ಕೆ ತುತ್ತಾಗುತ್ತಾರೆ ಇದರಿಂದ ಮನೆಯವರು ಮನೆ ನಿರ್ಮಾಣ ಮಾಡಲು ಸಾಧ್ಯವಾಗದೇ ತೀವ್ರ ಕಷ್ಟದಲ್ಲಿ ಇರುವುದು ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಗೋವಿಂದ ಬಾಬು ಪೂಜಾರಿ ಅವರ ಗಮನಕ್ಕೆ ಬಂದು ಮನೆಯನ್ನು ಪೂರ್ಣಗೊಳಿಸಿ ಕೊಡುವ ಭರವಸೆ ನೀಡಿದರು.

ಇದೀಗ ಸುಸಜ್ಜಿತ ನಿರ್ಮಾಣಗೊಂಡಿದ್ದು ಈ ಮನೆ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಿ ಕೊಡುತ್ತಿರುವ 5ನೇ ಮನೆ ಇದಾಗಿರುತ್ತದೆ.

ಶುಭಗಳಿಗೆಯಲ್ಲಿ “ಶ್ರೀ ವರಲಕ್ಷ್ಮಿ ನಿಲಯದ “ಗ್ರಹಪ್ರವೇಶವು ಕಾಳಾವರ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಶಾಸಕರು ಕುಂದಾಪುರ, ಗೋವಿಂದ ಬಾಬು ಪೂಜಾರಿ, ಅಶೋಕ್ ಪೂಜಾರಿ ಬಿಲ್ಲಾಡಿ, ಬಿಲ್ಲವ ಸೇವಾ ಸಂಘದ ಅಧ್ಯಕ್ಷರು ಆಶಾಲತಾ ಶೆಟ್ಟಿ ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷರು. ಬಿಲ್ಲವ ಸಂಘದ ಹಿರಿಯ ಮುಖಂಡರು,ಪಂಚಾಯತ್ ಸದಸ್ಯರು ಮತ್ತು ಶ್ರೀ ಗೋವಿಂದ ಬಾಬು ಪೂಜಾರಿ ಅಭಿಮಾನಿ ಬಳಗ ಶ್ರೀಯುತರ ಮಾತಾಪಿತರು ಮತ್ತು ಸಂಸಾರದ ಸರ್ವಸದಸ್ಯರು ಊರ ಜನತೆಯ ಉಪಸ್ಥಿತಿಯೊಂದಿಗೆ ಬಹಳ ಮಹತ್ವಪೂರ್ಣವಾಗಿ ಕಾರ್ಯಕ್ರಮ ನಡೆಯಿತು.

✍️ಈಶ್ವರ್ ಸಿ ನಾವುಂದ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »