TOP STORIES:

FOLLOW US

ಸಂಭ್ರಮ ಪುರಸ್ಕಾರ” (ಪತ್ರಿಕೋದ್ಯಮ)ಕ್ಕೆ ಪತ್ರಕರ್ತ ವಿಷ್ಣುಗುಪ್ತ ಪುಣಚ (ರಮೇಶ್.ಕೆ ಪುಣಚ) ಆಯ್ಕೆ


ಬಂಟ್ವಾಳ: ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಇನ್ನಿತರ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜಸೇವೆಗೈಯುತ್ತಿರುವ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್  ತನ್ನ  38ನೇ ಸಂಭ್ರಮಾಚರಣೆಯ ಸಂದರ್ಭದಲ್ಲಿ ನೀಡುವ ಸಂಭ್ರಮಪುರಸ್ಕಾರ (ಪತ್ರಿಕೋದ್ಯಮ)ಕ್ಕೆ ಪತ್ರಕರ್ತ ವಿಷ್ಣುಗುಪ್ತ ಪುಣಚ (ರಮೇಶ್.ಕೆ ಪುಣಚ) ಆಯ್ಕೆಯಾಗಿದ್ದಾರೆ.

ವರ್ಷಂಪ್ರತಿ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ

ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ನೀಡುತ್ತಿದೆ.

ಸಾಹಿತ್ಯ, ಬರವಣಿಗೆ ಕ್ಷೇತ್ರದಲ್ಲಿವಿಷ್ಣುಗುಪ್ತ ಪುಣಚಎಂಬ ಕಾವ್ಯನಾಮದಿಂದ ನಾಡಿನಾದ್ಯಂತ ಚಿರಪರಿಚಿತರಾಗಿರುವ ರಮೇಶ್ಕೋಡಂದೂರು ಅವರು ಬಂಟ್ವಾಳ ತಾಲೂಕಿನ ಪುಣಚ ಗ್ರಾಮದವರು.

ಪತ್ರಿಕಾ ಕ್ಷೇತ್ರದಲ್ಲಿ ಪತ್ರಕರ್ತರಾಗಿ ಸುಮಾರು ಇಪ್ಪತ್ತು ವರ್ಷಗಳಿಂದ ದುಡಿಯುತ್ತಿದ್ದಾರೆ. ಸುದ್ದಿ ಬಿಡುಗಡೆ, ಮೈಸೂರು ಆಂದೋಲನ, ಉಷಾ ಕಿರಣ, ಪ್ರಜಾವಾಣಿ, ವಿಜಯಕರ್ನಾಟಕ, ನಮ್ಮ ಬಂಟ್ವಾಳ ಇತ್ಯಾದಿ ಪತ್ರಿಕೆಗಳಲ್ಲಿ ದುಡಿದಿದ್ದಾರೆ. ಇದಲ್ಲದೇ ರಂಗಭೂಮಿ, ಬೀದಿನಾಟಕ, ಹಲವಾರು ತುಳು ಸಾಮಾಜಿಕ ನಾಟಕಗಳಲ್ಲಿ ನಟಿಸಿದ್ದಾರೆ. ಕನ್ನಡ, ತುಳು ಭಾಷೆಗಳ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದಸಾಹಿತ್ಯ ಸಮ್ಮೇಳನಗಳ ಕವಿಗೋಷ್ಠಿ, ವಿಚಾರಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ. ರಾಜ್ಯ ಮಟ್ಟದ ಲೇಖನ, ಕಥೆ, ಕವನ, ಚುಟುಕುಇನ್ನಿತರ ಸಾಹಿತ್ಯ  ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ, ಬಹುಮಾನಗಳನ್ನು ಪಡೆದಿದ್ದಾರೆ.

ಪುಣಚ ಮಂಗಳ ಕಲಾ ಸಾಹಿತ್ಯ ವೇದಿಕೆಯ ಮೂಲಕ ಹತ್ತಾರು ರಾಜ್ಯ ಮಟ್ಟದ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನುಸಂಘಟಿಸಿದ್ದಾರೆ.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ಬಂಟ್ವಾಳ ಪ್ರೆಸ್ ಕ್ಲಬ್ ಉಪಾಧ್ಯಕ್ಷರಾಗಿ ಸಂಘವನ್ನುಮುನ್ನಡೆಸಿದ್ದಾರೆ.

ಬಂಗ್ಲೆ ಮೈದಾನದಲ್ಲಿ .24ರಂದು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್  ತನ್ನ  38ನೇ ವಾರ್ಷಿಕ ಸಂಭ್ರಮ ಆಚರಣೆಯಲ್ಲಿ ಪುರಸ್ಕಾರ ಪ್ರದಾನನಡೆಯಲಿದೆ. ಇದೇ ಸಂದರ್ಭದಲ್ಲಿ 14ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವೂ ನಡೆಯಲಿದೆ.


Share:

More Posts

Category

Send Us A Message

Related Posts

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share       ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »