TOP STORIES:

ಸಣ್ಣ ಮಗುವಿಗೆ ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!


ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!

ನೀವಿದನ್ನು ನಂಬಲೇಬೇಕು! HONEY TREE ಎಂದು ಇಂಗ್ಲೀಷ್ ನಲ್ಲಿ ಕರೆಯಲ್ಪಡುವ ಮಾದಕ ಅಂಶಗಳುಳ್ಳ, ಆದಿವಾಸಿಗಳು ಪೂಜಿಸುವ ಒಂದು ಪವಿತ್ರ ಮರ. BUTTER TREE ಎಂದೂ ಕರೆಯುತ್ತಾರೆ. ಕನ್ನಡದಲ್ಲಿ ಇಪ್ಪೆ ಮರ ಎಂದು, ತಮಿಳಿನಲ್ಲಿ ಇಲ್ಲಿಪ್ಪೆ, ತೆಲುಗಿನಲ್ಲಿ ಇಪ್ಪಿ ಎಂದು, ಹಿಂದಿಯಲ್ಲಿ ಮೊಹ್ವ, ಸಂಸ್ಕ್ರತದಲ್ಲಿ ಮಧೂಕ, ಮಂಗಳೂರು ಮತ್ತು ಉಡುಪಿ ಆಸುಪಾಸಿನಲ್ಲಿ ‘ನಾನಿಲ್ ಮರ’ ಎಂದೂ ಕರೆಯುತ್ತಾರೆ. ಮೋಹ, ಮಹಲ, ಇಲುಪ, ಪೂನಮ, ಮಹುವಾ ಎಂದೂ ನಾನಾ ಭಾಷೆಗಳಲ್ಲಿ ಕರೆಯುವುದುಂಟು. ಇದರ ವೈಜ್ಙಾನಿಕ ಹೆಸರು ‘ಬ್ಯಾಸ್ಸಿಯ ಲ್ಯಾಟಿಫೂಲಿಯಾ’. ಇದು ‘ಸಪೋಟೇಸಿ’ ಕುಟುಂಬ ವರ್ಗಕ್ಕೆ ಸೇರಿದೆ.

ಇದು ಎಲೆ ಉದುರುವ ಮರದ ಜಾತಿಗೆ ಸೇರಿದೆ. ಸುಮಾರು 12 ರಿಂದ 20 ಮೀ ಎತ್ತರ ಬೆಳೆಯುವ ಇಪ್ಪೆ ಮರ, ಒಣ ಹವೆ ಮತ್ತು ತೇವ ಹವೆಯ ಕಾಡುಗಳಲ್ಲಿ ಬಿಡಿ ಬಿಡಿಯಾಗಿ ಬೆಳೆಯುತ್ತದೆ. ಕರ್ನಾಟಕದಲ್ಲಿ ಪಶ್ಚಮ ಘಟ್ಟದ ಕಾಡು ಹೊಳೆಯ ಸಮೀಪದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ತೊಗಟೆ ತಿಳಿ ಕಪ್ಪು ಅಥವಾ ಬೂದು ಬಣ್ಣದಿಂದ ಕೂಡಿದ್ದು, ಗೆಲ್ಲುಗಳು ಚದುರಿ ಚದುರಿದಂತೆ ಇದ್ದು ನೋಡಲು ತುಂಬಾ ಆಕರ್ಷಕವಾಗಿರುತ್ತದೆ.

ಚಳಿಗಾಲ ಬಂತೆಂದರೆ ಈ ಮರ ವಿಶಿಷ್ಟವಾದ ಕಟು ಮಧುರ ಹೂವಿನ ಪರಿಮಳವನ್ನು ಸೂಸುತ್ತದೆ. ನೇರವಾದ ಕಾಂಡದ ಮೇಲೆ ಕೊಂಬೆಗಳು ಮತ್ತು ತುದಿ ಚೂಪಾಗಿರುವ ಎಲೆಗಳು – ಛತ್ರಿಗಳು ಬಿಡಿಸಿಟ್ಟಂತೆ ಹರಡಿಕೊಂಡಿರುತ್ತದೆ. ವರ್ಷಕ್ಕೊಮ್ಮೆ ಎಲೆ ಉದಿರುವ ಈ ಮರ, ಹೊಸ ಚಿಗುರು ಬಂದಾಗ ತಾಮ್ರಗೆಂಪು ಬಣ್ಣದಿಂದ ನಳನಳಿಸುತ್ತದೆ.  ಈ ಸಮಯದಲ್ಲಿ ಬಸ್ತಾರ್ ನ ಆದಿವಾಸಿಗಳು ಮತ್ತು ಮಧ್ಯಪ್ರದೇಶದ ಗೊಂಡ ಆದಿಮಾಸಿಗಳು ಆ ಮರವನ್ನು ಪೂಜಿಸುತ್ತಾರೆ.

ಹೊಸ ಚಿಗುರು ಮಾಗಿ ಎಲೆ ದಪ್ಪಗಾದ ಕೂಡಲೇ ಮರ ಹೂ ಬಿಡಲು ಆರಂಭಿಸುತ್ತದೆ. ಈ ಹೂಗಳು ಮಾಸಲು ಬಣ್ಣವನ್ನು ಹೊಂದಿದ್ದು, ಕೊಂಬೆಯ ತುದಿಯಲ್ಲಿ ಜೋತು ಬಿದ್ದಿರುತ್ತದೆ. ಈ ಹೂವಿನ ಪುಷ್ಪಪಾತ್ರೆಯ ಭಾಗ ಹಣ್ಣಾಗಿ ತಿನ್ನಲು ರುಚಿಯಾಗಿರುತ್ತದೆ. ಹಕ್ಕಿಗಳು ಮತ್ತು ಕಾಡು ಪ್ರಾಣಿಗಳಿಗೂ ಈ ಹಣ್ಣು ಬಹಳ ಪ್ರಿಯ. ಇಪ್ಪೆ ಹಣ್ಣಿನಿಂದ ಆದಿವಾಸಿಗಳು ಹೆಂಡವನ್ನು ತಯಾರಿಸುತ್ತಾರೆ. ಇದರ ಬೀಜದಿಂದ ಎಣ್ಣೆ ತೆಗೆದು ಅಡುಗೆಗೆ ಉಪಯೋಗಿಸುತ್ತಾರೆ.  ಕಾಡಿನಲ್ಲಿ ಆಹಾರಕ್ಷಾಮ ಉಂಟಾದಾಗ ಆದಿವಾಸಿಗಳಿಗೆ ಈ ಮರದ ಹೂವು ಹಣ್ಣುಗಳೇ ಆಹಾರ. ಗೊಂಡ ಆದಿವಾಸಿಗಳಲ್ಲಿ ಚಳಿಗಾಲದಲ್ಲಿ ಮಗು ಜನಿಸಿದರೆ, ತಾಯ ಹಾಲಿಗೂ ಮೊದಲು ಇಪ್ಪೆ ಹಣ್ಣಿನ ರಸವನ್ನು ನೆಕ್ಕಿಸುತ್ತಾರೆ. ಯಾಕೆಂದರೆ ಅದು ಆದಿವಾಸಿಗಳ ಪಾಲಿನ ಪವಿತ್ರ ಮತ್ತು ಆರಾಧನೀಯ ಮರ.

(ಸಂಗ್ರಹ)

PC: Dinesh bangera irvattur


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »