TOP STORIES:

FOLLOW US

ಸಣ್ಣ ಮಗುವಿಗೆ ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!


ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!

ನೀವಿದನ್ನು ನಂಬಲೇಬೇಕು! HONEY TREE ಎಂದು ಇಂಗ್ಲೀಷ್ ನಲ್ಲಿ ಕರೆಯಲ್ಪಡುವ ಮಾದಕ ಅಂಶಗಳುಳ್ಳ, ಆದಿವಾಸಿಗಳು ಪೂಜಿಸುವ ಒಂದು ಪವಿತ್ರ ಮರ. BUTTER TREE ಎಂದೂ ಕರೆಯುತ್ತಾರೆ. ಕನ್ನಡದಲ್ಲಿ ಇಪ್ಪೆ ಮರ ಎಂದು, ತಮಿಳಿನಲ್ಲಿ ಇಲ್ಲಿಪ್ಪೆ, ತೆಲುಗಿನಲ್ಲಿ ಇಪ್ಪಿ ಎಂದು, ಹಿಂದಿಯಲ್ಲಿ ಮೊಹ್ವ, ಸಂಸ್ಕ್ರತದಲ್ಲಿ ಮಧೂಕ, ಮಂಗಳೂರು ಮತ್ತು ಉಡುಪಿ ಆಸುಪಾಸಿನಲ್ಲಿ ‘ನಾನಿಲ್ ಮರ’ ಎಂದೂ ಕರೆಯುತ್ತಾರೆ. ಮೋಹ, ಮಹಲ, ಇಲುಪ, ಪೂನಮ, ಮಹುವಾ ಎಂದೂ ನಾನಾ ಭಾಷೆಗಳಲ್ಲಿ ಕರೆಯುವುದುಂಟು. ಇದರ ವೈಜ್ಙಾನಿಕ ಹೆಸರು ‘ಬ್ಯಾಸ್ಸಿಯ ಲ್ಯಾಟಿಫೂಲಿಯಾ’. ಇದು ‘ಸಪೋಟೇಸಿ’ ಕುಟುಂಬ ವರ್ಗಕ್ಕೆ ಸೇರಿದೆ.

ಇದು ಎಲೆ ಉದುರುವ ಮರದ ಜಾತಿಗೆ ಸೇರಿದೆ. ಸುಮಾರು 12 ರಿಂದ 20 ಮೀ ಎತ್ತರ ಬೆಳೆಯುವ ಇಪ್ಪೆ ಮರ, ಒಣ ಹವೆ ಮತ್ತು ತೇವ ಹವೆಯ ಕಾಡುಗಳಲ್ಲಿ ಬಿಡಿ ಬಿಡಿಯಾಗಿ ಬೆಳೆಯುತ್ತದೆ. ಕರ್ನಾಟಕದಲ್ಲಿ ಪಶ್ಚಮ ಘಟ್ಟದ ಕಾಡು ಹೊಳೆಯ ಸಮೀಪದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ತೊಗಟೆ ತಿಳಿ ಕಪ್ಪು ಅಥವಾ ಬೂದು ಬಣ್ಣದಿಂದ ಕೂಡಿದ್ದು, ಗೆಲ್ಲುಗಳು ಚದುರಿ ಚದುರಿದಂತೆ ಇದ್ದು ನೋಡಲು ತುಂಬಾ ಆಕರ್ಷಕವಾಗಿರುತ್ತದೆ.

ಚಳಿಗಾಲ ಬಂತೆಂದರೆ ಈ ಮರ ವಿಶಿಷ್ಟವಾದ ಕಟು ಮಧುರ ಹೂವಿನ ಪರಿಮಳವನ್ನು ಸೂಸುತ್ತದೆ. ನೇರವಾದ ಕಾಂಡದ ಮೇಲೆ ಕೊಂಬೆಗಳು ಮತ್ತು ತುದಿ ಚೂಪಾಗಿರುವ ಎಲೆಗಳು – ಛತ್ರಿಗಳು ಬಿಡಿಸಿಟ್ಟಂತೆ ಹರಡಿಕೊಂಡಿರುತ್ತದೆ. ವರ್ಷಕ್ಕೊಮ್ಮೆ ಎಲೆ ಉದಿರುವ ಈ ಮರ, ಹೊಸ ಚಿಗುರು ಬಂದಾಗ ತಾಮ್ರಗೆಂಪು ಬಣ್ಣದಿಂದ ನಳನಳಿಸುತ್ತದೆ.  ಈ ಸಮಯದಲ್ಲಿ ಬಸ್ತಾರ್ ನ ಆದಿವಾಸಿಗಳು ಮತ್ತು ಮಧ್ಯಪ್ರದೇಶದ ಗೊಂಡ ಆದಿಮಾಸಿಗಳು ಆ ಮರವನ್ನು ಪೂಜಿಸುತ್ತಾರೆ.

ಹೊಸ ಚಿಗುರು ಮಾಗಿ ಎಲೆ ದಪ್ಪಗಾದ ಕೂಡಲೇ ಮರ ಹೂ ಬಿಡಲು ಆರಂಭಿಸುತ್ತದೆ. ಈ ಹೂಗಳು ಮಾಸಲು ಬಣ್ಣವನ್ನು ಹೊಂದಿದ್ದು, ಕೊಂಬೆಯ ತುದಿಯಲ್ಲಿ ಜೋತು ಬಿದ್ದಿರುತ್ತದೆ. ಈ ಹೂವಿನ ಪುಷ್ಪಪಾತ್ರೆಯ ಭಾಗ ಹಣ್ಣಾಗಿ ತಿನ್ನಲು ರುಚಿಯಾಗಿರುತ್ತದೆ. ಹಕ್ಕಿಗಳು ಮತ್ತು ಕಾಡು ಪ್ರಾಣಿಗಳಿಗೂ ಈ ಹಣ್ಣು ಬಹಳ ಪ್ರಿಯ. ಇಪ್ಪೆ ಹಣ್ಣಿನಿಂದ ಆದಿವಾಸಿಗಳು ಹೆಂಡವನ್ನು ತಯಾರಿಸುತ್ತಾರೆ. ಇದರ ಬೀಜದಿಂದ ಎಣ್ಣೆ ತೆಗೆದು ಅಡುಗೆಗೆ ಉಪಯೋಗಿಸುತ್ತಾರೆ.  ಕಾಡಿನಲ್ಲಿ ಆಹಾರಕ್ಷಾಮ ಉಂಟಾದಾಗ ಆದಿವಾಸಿಗಳಿಗೆ ಈ ಮರದ ಹೂವು ಹಣ್ಣುಗಳೇ ಆಹಾರ. ಗೊಂಡ ಆದಿವಾಸಿಗಳಲ್ಲಿ ಚಳಿಗಾಲದಲ್ಲಿ ಮಗು ಜನಿಸಿದರೆ, ತಾಯ ಹಾಲಿಗೂ ಮೊದಲು ಇಪ್ಪೆ ಹಣ್ಣಿನ ರಸವನ್ನು ನೆಕ್ಕಿಸುತ್ತಾರೆ. ಯಾಕೆಂದರೆ ಅದು ಆದಿವಾಸಿಗಳ ಪಾಲಿನ ಪವಿತ್ರ ಮತ್ತು ಆರಾಧನೀಯ ಮರ.

(ಸಂಗ್ರಹ)

PC: Dinesh bangera irvattur


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »