TOP STORIES:

ಸಣ್ಣ ಮಗುವಿಗೆ ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!


ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!

ನೀವಿದನ್ನು ನಂಬಲೇಬೇಕು! HONEY TREE ಎಂದು ಇಂಗ್ಲೀಷ್ ನಲ್ಲಿ ಕರೆಯಲ್ಪಡುವ ಮಾದಕ ಅಂಶಗಳುಳ್ಳ, ಆದಿವಾಸಿಗಳು ಪೂಜಿಸುವ ಒಂದು ಪವಿತ್ರ ಮರ. BUTTER TREE ಎಂದೂ ಕರೆಯುತ್ತಾರೆ. ಕನ್ನಡದಲ್ಲಿ ಇಪ್ಪೆ ಮರ ಎಂದು, ತಮಿಳಿನಲ್ಲಿ ಇಲ್ಲಿಪ್ಪೆ, ತೆಲುಗಿನಲ್ಲಿ ಇಪ್ಪಿ ಎಂದು, ಹಿಂದಿಯಲ್ಲಿ ಮೊಹ್ವ, ಸಂಸ್ಕ್ರತದಲ್ಲಿ ಮಧೂಕ, ಮಂಗಳೂರು ಮತ್ತು ಉಡುಪಿ ಆಸುಪಾಸಿನಲ್ಲಿ ‘ನಾನಿಲ್ ಮರ’ ಎಂದೂ ಕರೆಯುತ್ತಾರೆ. ಮೋಹ, ಮಹಲ, ಇಲುಪ, ಪೂನಮ, ಮಹುವಾ ಎಂದೂ ನಾನಾ ಭಾಷೆಗಳಲ್ಲಿ ಕರೆಯುವುದುಂಟು. ಇದರ ವೈಜ್ಙಾನಿಕ ಹೆಸರು ‘ಬ್ಯಾಸ್ಸಿಯ ಲ್ಯಾಟಿಫೂಲಿಯಾ’. ಇದು ‘ಸಪೋಟೇಸಿ’ ಕುಟುಂಬ ವರ್ಗಕ್ಕೆ ಸೇರಿದೆ.

ಇದು ಎಲೆ ಉದುರುವ ಮರದ ಜಾತಿಗೆ ಸೇರಿದೆ. ಸುಮಾರು 12 ರಿಂದ 20 ಮೀ ಎತ್ತರ ಬೆಳೆಯುವ ಇಪ್ಪೆ ಮರ, ಒಣ ಹವೆ ಮತ್ತು ತೇವ ಹವೆಯ ಕಾಡುಗಳಲ್ಲಿ ಬಿಡಿ ಬಿಡಿಯಾಗಿ ಬೆಳೆಯುತ್ತದೆ. ಕರ್ನಾಟಕದಲ್ಲಿ ಪಶ್ಚಮ ಘಟ್ಟದ ಕಾಡು ಹೊಳೆಯ ಸಮೀಪದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ತೊಗಟೆ ತಿಳಿ ಕಪ್ಪು ಅಥವಾ ಬೂದು ಬಣ್ಣದಿಂದ ಕೂಡಿದ್ದು, ಗೆಲ್ಲುಗಳು ಚದುರಿ ಚದುರಿದಂತೆ ಇದ್ದು ನೋಡಲು ತುಂಬಾ ಆಕರ್ಷಕವಾಗಿರುತ್ತದೆ.

ಚಳಿಗಾಲ ಬಂತೆಂದರೆ ಈ ಮರ ವಿಶಿಷ್ಟವಾದ ಕಟು ಮಧುರ ಹೂವಿನ ಪರಿಮಳವನ್ನು ಸೂಸುತ್ತದೆ. ನೇರವಾದ ಕಾಂಡದ ಮೇಲೆ ಕೊಂಬೆಗಳು ಮತ್ತು ತುದಿ ಚೂಪಾಗಿರುವ ಎಲೆಗಳು – ಛತ್ರಿಗಳು ಬಿಡಿಸಿಟ್ಟಂತೆ ಹರಡಿಕೊಂಡಿರುತ್ತದೆ. ವರ್ಷಕ್ಕೊಮ್ಮೆ ಎಲೆ ಉದಿರುವ ಈ ಮರ, ಹೊಸ ಚಿಗುರು ಬಂದಾಗ ತಾಮ್ರಗೆಂಪು ಬಣ್ಣದಿಂದ ನಳನಳಿಸುತ್ತದೆ.  ಈ ಸಮಯದಲ್ಲಿ ಬಸ್ತಾರ್ ನ ಆದಿವಾಸಿಗಳು ಮತ್ತು ಮಧ್ಯಪ್ರದೇಶದ ಗೊಂಡ ಆದಿಮಾಸಿಗಳು ಆ ಮರವನ್ನು ಪೂಜಿಸುತ್ತಾರೆ.

ಹೊಸ ಚಿಗುರು ಮಾಗಿ ಎಲೆ ದಪ್ಪಗಾದ ಕೂಡಲೇ ಮರ ಹೂ ಬಿಡಲು ಆರಂಭಿಸುತ್ತದೆ. ಈ ಹೂಗಳು ಮಾಸಲು ಬಣ್ಣವನ್ನು ಹೊಂದಿದ್ದು, ಕೊಂಬೆಯ ತುದಿಯಲ್ಲಿ ಜೋತು ಬಿದ್ದಿರುತ್ತದೆ. ಈ ಹೂವಿನ ಪುಷ್ಪಪಾತ್ರೆಯ ಭಾಗ ಹಣ್ಣಾಗಿ ತಿನ್ನಲು ರುಚಿಯಾಗಿರುತ್ತದೆ. ಹಕ್ಕಿಗಳು ಮತ್ತು ಕಾಡು ಪ್ರಾಣಿಗಳಿಗೂ ಈ ಹಣ್ಣು ಬಹಳ ಪ್ರಿಯ. ಇಪ್ಪೆ ಹಣ್ಣಿನಿಂದ ಆದಿವಾಸಿಗಳು ಹೆಂಡವನ್ನು ತಯಾರಿಸುತ್ತಾರೆ. ಇದರ ಬೀಜದಿಂದ ಎಣ್ಣೆ ತೆಗೆದು ಅಡುಗೆಗೆ ಉಪಯೋಗಿಸುತ್ತಾರೆ.  ಕಾಡಿನಲ್ಲಿ ಆಹಾರಕ್ಷಾಮ ಉಂಟಾದಾಗ ಆದಿವಾಸಿಗಳಿಗೆ ಈ ಮರದ ಹೂವು ಹಣ್ಣುಗಳೇ ಆಹಾರ. ಗೊಂಡ ಆದಿವಾಸಿಗಳಲ್ಲಿ ಚಳಿಗಾಲದಲ್ಲಿ ಮಗು ಜನಿಸಿದರೆ, ತಾಯ ಹಾಲಿಗೂ ಮೊದಲು ಇಪ್ಪೆ ಹಣ್ಣಿನ ರಸವನ್ನು ನೆಕ್ಕಿಸುತ್ತಾರೆ. ಯಾಕೆಂದರೆ ಅದು ಆದಿವಾಸಿಗಳ ಪಾಲಿನ ಪವಿತ್ರ ಮತ್ತು ಆರಾಧನೀಯ ಮರ.

(ಸಂಗ್ರಹ)

PC: Dinesh bangera irvattur


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »