TOP STORIES:

ಸಮಾಜದ ಸಮಸ್ಯೆಗಳ ಧ್ವನಿಯಾಗುವ ಪೊಲೀಸ್ ಅಧಿಕಾರಿ ಶ್ರೀಮತಿ ರೀನಾ ಸುವರ್ಣ ACP


ನೊಂದವರ ಕಣ್ಣೀರು ಒರೆಸಿ, ಸ್ನೇಹಭಾವದ ಬೀಜವನ್ನು ಬಿತ್ತಿ, ಹಿಂಸಾಚಾರ ತಡೆಯುವಲ್ಲಿ ರಕ್ಷಾಕವಚವಾಗಿ, ನ್ಯಾಯ ನೀತಿ ಧರ್ಮವನ್ನು ಪೋಷಿಸಿ, ಅನ್ಯಾಯವನ್ನು ಮೆಟ್ಟಿ, ಸಮಸ್ಯೆಗಳನ್ನು ಸಹನೆ ತಾಳ್ಮೆಯಿಂದ ಸ್ವೀಕರಿಸಿ ಜನರ ಸೇವೆಗೈವ ನಿಷ್ಠಾವಂತ ಪೊಲೀಸ್ ಅಧಿಕಾರಿಣಿ ಯೇ ನಮ್ಮ “ಶ್ರೀಮತಿ ರೀನಾ ಸುವರ್ಣ. ಎನ್. ”

ವಿಶ್ವ ಕಂಡ ಮಹಾನ್ ಸಾಹಿತಿ ಲಿಯೋ ಟಾಲಸ್ಟಾಯ್ ಹೇಳುತ್ತಾರೆ. “ಜೀವನದಲ್ಲಿ ಅತ್ಯಂತ ಶ್ರೇಯಸ್ಕರವಾದುದು ಎಂದರೆ ಮನುಕುಲದ ಒಳಿತಿಗಾಗಿ ಶ್ರಮಿಸುವುದು. “ಎಂದು. ಜನರ ಸೇವೆಯ ಜೊತೆಗೆ ಸಮಾಜದ ಕೆಲವು ಸಮಸ್ಯೆಗಳಿಗೆ ಧ್ವನಿಯಾಗಿ ಪರಿಹರಿಸಲು “ಅಧಿಕಾರ ” ಮತ್ತು “ಜವಾಬ್ದಾರಿ ” ಇರಲೇಬೇಕು. ಎಂಬ ನಿಲುವಲ್ಲಿ ಇವರು ಪೊಲೀಸ್ ಅಧಿಕಾರಿಯಾಗಿದ್ದು ಹೆಮ್ಮೆಯ ವಿಚಾರ.

ಶ್ರೀಮತಿ. ರೀನಾ ಸುವರ್ಣ.ಎನ್. ಡಿವೈ ಎಸ್ ಪಿ, ಸಿಐಡಿ ಬೆಂಗಳೂರು, ಕರ್ನಾಟಕ ರಾಜ್ಯ ಪೊಲೀಸ್ ಸೇವೆ. ಇವರು ವಿದ್ಯಾರ್ಥಿ ಜೀವನದಲ್ಲಿಯೇ ಪ್ರತಿಭಾನ್ವಿತೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಎಮ್. ಎ. ಪದವಿಯಲ್ಲಿ, “ಚಿನ್ನದ ಪದಕ” ಗಳಿಸಿದ ಇವರು, ಮೌಂಟ್ ಕಾರ್ಮೆಟ್ ಕಾಲೇಜಿನಲ್ಲಿ ಬಿ.ಎ ಯಲ್ಲಿ “ಕಾಲೇಜಿನ ಅತ್ಯುತ್ತಮ ಹೊರಹೋಗುವ ವಿದ್ಯಾರ್ಥಿನಿ “ಎಂಬ ಪ್ರಶಸ್ತಿಗೆ ಭಾಜನರು.

ಬಾಲ್ಯದಿಂದಲೂ ಪುಸ್ತಕಗಳಲ್ಲಿದ್ದ ಅಪಾರ ಪ್ರೇಮ, ಓದುವ ಛಲವೇ ಇವರನ್ನು ಇಂದು ಅತ್ಯಂತ ಶ್ರೇಷ್ಠ ಸಾಧಕರ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದು ಎಂದರೆ ತಪ್ಪಲ್ಲ..

“ಹಗಲೆನ್ನದೆ ಇರುಳೆನ್ನದೆ, ಉಪಚಾರಗಳ ಹಂಗಿಲ್ಲದೆ ಜನರಿಗಾಗಿ ದುಡಿವ ಮಹಿಳಾ ಪೊಲೀಸ್ ಅಧಿಕಾರಿ ಎಲ್ಲರಿಗೂ ಸ್ಪೂರ್ತಿಯ ಸೆಲೆ. “ಇವರ ಕಾರ್ಯವೈಖರಿ ಅದ್ಭುತವೇ ಸರಿ.

2014 ರಲ್ಲಿ ಡಿವೈಎಸ್ಸ್ಪಿ ಯಾಗಿ ಕರ್ತವ್ಯಕ್ಕೆ ಸೇರಿದ ಇವರು ” ಬೆಂಗಳೂರು ಗ್ರಾಮೀಣ ಪ್ರೊಬೆಷನರಿ ಐಜಿ ದಕ್ಷಿಣ ಶ್ರೇಣಿ “ಯಿಂದ ಮೂರು ಮೆಚ್ಚುಗೆ ಪತ್ರಗಳನ್ನು ಗಳಿಸಿರುತ್ತಾರೆ.

ಹೊಸಕೋಟೆ ಪೊಲೀಸ್ ಠಾಣೆಯ ಉಸ್ತುವಾರಿ ವಹಿಸಿಕೊಂಡ ಸಮಯದಲ್ಲಿ ಕೇವಲ ಎರಡೇ ತಿಂಗಳಲ್ಲಿ 11 ಕಾಣೆಯಾದ ಪ್ರಕರಣಗಳನ್ನು ಪತ್ತೆ ಮಾಡಿರುತ್ತಾರೆ. ಅನೇಕಲ್ ಅಟ್ಟಿಬೆಲೆಯಲ್ಲಿ 280 ಕಿ.ಗ್ರಾ ಗಾಂಜಾವನ್ನು ವಶಪಡಿಸಿಕೊಂಡಿದ್ದೂ ನಮ್ಮ ಮಹಿಳಾ ಸಾಧಕಿ “ಶ್ರೀಮತಿ.ರೀನಾ ಸುವರ್ಣ” ರವರೆ. ತಾನು ಉರಿದು ಸೇವೆಯೇ ಸರ್ವಸ್ವವೆಂದು ಕರ್ತವ್ಯ ನಿರ್ವಹಿಸುವ ಇವರು ಸಮಾಜಘಾತುಕ ಶಕ್ತಿಗಳನ್ನು ಹಿಮ್ಮೆಟ್ಟಿಸುವಲ್ಲಿ ಬಹಳ ಶ್ರಮ ಪಟ್ಟಿರುತ್ತಾರೆ..

ಜಿಗಾನಿಯಲ್ಲಿ ಅರ್ಧ ದಿನದಲ್ಲಿ ಗುರುತಿಸಲೂ ಆಗದ ಮೃತದೇಹವನ್ನು ಯಶಸ್ವಿಯಾಗಿ ಪತ್ತೆಹಚ್ಚಿ ಅಂದಿನ ಉಡುಪಿ ಎಸ್.ಪಿ ಲಕ್ಷ್ಮಣ ನಿಂಬರ್ಗಿ ಯವರಿಂದ ಮೆಚ್ಚುಗೆ ಪಡೆದವರು ನಮ್ಮ ಶ್ರೀಮತಿ. ರೀನಾ ಸುವರ್ಣ ರವರು.

ಇದಲ್ಲದೆ ಹೊಸ್ಕೊಟ್ ನಲ್ಲಿ 6 ಗಂಟೆಯ ಒಳಗೆ “ಪೊಕ್ಸೋ ” ಪ್ರಕರಣವನ್ನು ಪತ್ತೆಹಚ್ಚಿದ ಅದ್ಭುತ ಪತ್ತೇದಾರಿ ಪೊಲೀಸ್ ಇವರು.
“ಆರಕ್ಷಕರಿಲ್ಲದ ಸಮಾಜವನ್ನು ಊಹಿಸಲು ಸಾಧ್ಯವೇ ಹೇಳಿ???. ಸೇವೆಯುದ್ದಕ್ಕೂ ಸವಾಲುಗಳೇ, ಸಾವಿನಂಚಿಗೂ ತಲುಪುವ ಕ್ಲಿಷ್ಟ ಕಠಿಣ ಪ್ರಕರಣಗಳೇ, ದುರ್ವಿಧಿಯ ಸನ್ನಿವೇಶಗಳೇ.. ”

ಹೆಣ್ಣು ಬಲಹೀನ, ದುರ್ಬಲಳು, ಅವಲಂಬಕಿ ಎನ್ನುವ ಈ ಸಮಾಜಕ್ಕೆ ತಕ್ಕ ಪ್ರತಿ ಉತ್ತರವೇ ಡಿವೈ ಎಸ್ ಪಿ,ಶ್ರೀಮತಿ ರೀನಾ ಸುವರ್ಣ, ಎನ್.

ನಗರಸಭೆಯ ಬೆಂಬಲದೊಂದಿಗೆ ಹೊಸ್ಕೊಟ್ ನ ಪ್ರಮುಖ ಜಂಕ್ಷನ್ ಗಳಲ್ಲಿ ಸಿ.ಸಿ. ಟಿ. ವಿ. ಯನ್ನು ಅಳವಡಿಸಿ ಅನ್ಯಾಯಕ್ಕೆ ಪ್ರತಿಧ್ವನಿಯಾದವರು ಇವರು. ಅದಷ್ಟೇ ಅಲ್ಲದೇ, ಡ್ರಗ್ಸ್ ಮಾಫಿಯಾ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಮತ್ತು ಮಾನವ ಕಳ್ಳ ಸಾಗಣೆ ವಿರುದ್ಧ ಛಲಬಿಡದೆ ಹೋರಾಡುವ ಧೀಮಂತ ಪೊಲೀಸ್ ನಮ್ಮ ರೀನಾ ಸುವರ್ಣ.

ಒತ್ತಡಗಳನ್ನು, ಸವಾಲುಗಳನ್ನು ತನಗಿರುವ ಅವಕಾಶಗಳೆಂದು ಸ್ವೀಕರಿಸಿ ದುಡಿಯುವ ಇವರು ಪ್ರಸ್ತುತ ಎಸಿಪಿ ಯಾಗಿ ಜೆಸಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

“ಆಡಿಕೊಳ್ಳುವವರ ಮುಂದೆ ಜಾರಿ ಬೀಳದೆ ತಲೆಯೆತ್ತಿ ನಡೆದು ಕೆಚ್ಚೆದೆಯಿಂದ ನಡೆಯುತ, ಜೀವನದಲ್ಲಿ ಮಹತ್ತರವಾದುದನ್ನು ಸಾಧಿಸಿ ಬದುಕಿಗೊಂದು ಸಾರ್ಥಕತೆ ಒದಗಿಸಿಕೊಡಬೇಕು. ಆಗಲೇ ಬದುಕಿಗೊಂದು ಬೆಲೆಯೂ, ನೆಲೆಯೂ… ”

“ಪೊಲೀಸ್ ಸ್ವಸ್ಥ ಸಮಾಜದ ಭದ್ರತೆ ವಹಿಸಿ ಹಗಲಲ್ಲಿ ಸೂರ್ಯನಂತೆ, ರಾತ್ರಿ ಚಂದ್ರನಂತೆ ಸಮಾಜಕ್ಕಾಗಿ ದುಡಿಯುವ ಏಕೈಕ ಸರ್ಕಾರಿ ನೌಕರ.. ”
.
ಎಲ್ಲಾ ನಿಷ್ಠಾವಂತ ಪೊಲೀಸ್ ರಿಗೆ, ಮುಂದೆ “ಪೊಲೀಸ್ ಅಧಿಕಾರಿಣಿ ” ಯಾಗುವ ಛಲತೊಟ್ಟ ಹುಡುಗಿಯಿಂದ ಈ ಬರಹ ಅರ್ಪಣೆ..

Credits: ಚೈತ್ರ ಕಬ್ಬಿನಾಲೆ

Email us: billavaswarriors@gmail.com

www.billavaswarriors.com


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »