TOP STORIES:

ಸಿಐಎಸ್‌ಎನಲ್ಲಿ ವಿಶ್ವಕ್ಕೆ ಅಗ್ರಸ್ಥಾನಿ ಗ್ರಾಮೀಣ ಪ್ರತಿಭೆ ಹೆಬ್ರಿ ಸಪ್ನಾ ಪೂಜಾರಿ ಸಾಧನೆ ಯುವ ಸಮುದಾಯಕ್ಕೆ ಮಾದರಿ


ಸಿಐಎಸ್‌ಎನಲ್ಲಿ ವಿಶ್ವಕ್ಕೆ ಅಗ್ರಸ್ಥಾನಿ

ಗ್ರಾಮೀಣ ಪ್ರತಿಭೆ ಹೆಬ್ರಿ ಸಪ್ನಾ ಪೂಜಾರಿ ಸಾಧನೆ | ಯುವ ಸಮುದಾಯಕ್ಕೆ ಮಾದರಿ

ಬದುಕಿನಲ್ಲಿ ಆಶಾವಾದವೇ ಛಲಕ್ಕೆ ಮೂಲ ಕಾರಣ. ಛಲವುಳ್ಳ ಬದುಕು ಸಾಧನೆಯ ಮೊದಲ ಹೆಜ್ಜೆ. ಅಂತಹ ಸಾಧನೆಯನ್ನು ಬೆನ್ನತ್ತಿಯಶಸ್ವಿಯಾದವರು ಹೆಬ್ರಿಯ ಸಪ್ನಾ ಪೂಜಾರಿ.

ಹೆಬ್ರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿನಿಯೊಬ್ಬಳು ಅಂತಾರಾಷ್ಟಿçà ಸಂಸ್ಥೆಯಾದ ಐಸಾಕನಡೆಸಿದ 2022ನೇ ಸಾಲಿನಲ್ಲಿ ಸರ್ಟಿಫೈಡ್ ಇನ್ ಫಾರ್ಮೇಶನ್ ಸಿಸ್ಟಮ್ ಅಡಿಟರ್ (ಸಿಐಎಸ್‌ಎ) ಪರೀಕ್ಷೆಯಲ್ಲಿ ವಿಶ್ವಕ್ಕೆ ಟಾಪರ್ಆಗಿ ಹೊರಹೊಮ್ಮಿದ್ದಾರೆ. ಇಂತಹ ಸಾಧನೆ ಮಾಡಿದ ಪ್ರಥಮ ಭಾರತೀಯ ಮಹಿಳೆ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಅಮೆರಿಕಾದಬೋಸ್ಟನ್‌ನಲ್ಲಿ ಇತ್ತೀಚೆಗೆ ನಡೆದ ಡಿಜಿಟಲ್ ಟ್ರಸ್ಟ್ ವರ್ಲ್ಡ್ ಕಾನ್ಪರೆನ್ಸ್ ನಲ್ಲಿ ಇವರ ಸಾಧನೆಗೆ ಗೌರವ ಸನ್ಮಾನ ಲಭಿಸಿದೆ.

ಉಡುಪಿ ಜಿಲ್ಲೆ ಹೆಬ್ರಿಯ ಲೀಲಾವತಿ ಮತ್ತು ಭೋಜ ಪೂಜಾರಿ ದಂಪತಿಗಳ ಪುತ್ರಿಯಾದ ಸಪ್ನಾ ಅವರ ಹುಟ್ಟೂರು ಪೆರ್ಡೂರಿನಬೆಳ್ಳರ್ಪಾಡಿಯಲ್ಲಿ ಹಾಗೂ ಬೆಳೆದದ್ದು ಹೆಬ್ರಿ ಜರ್ವತ್ತಿನ ಕೂಡು ಕುಟುಂಬದಲ್ಲಿ. ಆರಂಭಿಕ ಪ್ರಾಥಮಿಕ ಶಿಕ್ಷಣವನ್ನು ಊರಿನ ಸರಕಾರಿಶಾಲೆಯಲ್ಲಿ ಪಡೆದರು. ಬಳಿಕ ಮುದ್ರಾಡಿಯ ಎಂಎನ್‌ಡಿಎಸ್‌ಎAನಲ್ಲಿ ಹೈಸ್ಕೂಲ್, ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿಪದವಿಪೂರ್ವ ಶಿಕ್ಷಣ, ಬೆಂಗಳೂರಿನ ಪೆಸಿಟ್‌ನಲ್ಲಿ ಬಿಇ ಶಿಕ್ಷಣ ಮುಗಿಸಿದರು. ಇವರ ಶಿಕ್ಷಣಕ್ಕೆ ಇಡೀ ಕುಟುಂಬ ಸಾಥ್ ನೀಡಿತ್ತು. ಬೆಂಗಳೂರಿಗೆ ತೆರಳಿದ ಸಂದರ್ಭ ಅಮ್ಮ ಕೂಡಾ ಜತೆಯಲ್ಲೇ ವಾಸ್ತವ್ಯ ಹೂಡಿ ಮಗಳ ವಿದ್ಯಾಭ್ಯಾಸಕ್ಕೆ ಬೆನ್ನಲುಬಾಗಿ ನಿಂತಿದ್ದರು. ಸಹೋದರ ಪ್ರಸನ್ನ ಕುಮಾರ್ ಅವರ ಮಾರ್ಗದರ್ಶನದಂತೆ ಶಿಕ್ಷಣದ ಬಳಿಕ ವೃತ್ತಿ ಜೀವನಕ್ಕೆ ಆಯ್ಕೆ ಮಾಡಿಕೊಂಡಿರುವುದು ಐಟಿಕಂಪನಿ.

ಮತ್ತಷ್ಟು ಸಾಧನೆ ತವಕ: ನಾರಾವಿ ತಿರ್ತೊಟ್ಟು ದಿ. ಬಾಬು ಪೂಜಾರಿ ಅವರ ಮೊಮ್ಮಗ ಪ್ರವೀಣ್ ಪೂಜಾರಿ ಅವರನ್ನು ಸಪ್ನಾವಿವಾಹವಾದರು. ಸಾಮಾನ್ಯವಾಗಿ ಉದ್ಯೋಗ ಸಿಕ್ಕ ಬಳಿಕ ಬಹುತೇಕ ಮಂದಿ ನಿರಾಳರಾಗುತ್ತಾರೆ. ಅದರಲ್ಲೂ ಮದುವೆಯಾದಬಳಿಕ ಸಾಕು ಎಂಬ ಭಾವನೆ ಮೂಡುತ್ತದೆ. ಆದರೆ ಸಪ್ನಾ ಅವರಿಗೆ ಮತ್ತಷ್ಟು ಕಲಿಯಬೇಕು, ಹೊಸತನಕ್ಕೆ ತೆರೆದುಕೊಳ್ಳಬೇಕು, ಸಾಧನೆಯ ಮತ್ತೊಂದು ಮಗ್ಗುಲು ಮುಟ್ಟಬೇಕು ಎಂಬ ಕನಸು ಮತ್ತಷ್ಟು ಚಿಗುರೊಡೆಯಿತು. ಇದಕ್ಕೆ ತಂದೆ, ತಾಯಿ, ಗಂಡ, ಅತ್ತೆ, ಮಾವ ಸೇರಿದಂತೆ ಸಂಪೂರ್ಣ ಕುಟುಂಬ ಬೆನ್ನೆಲುಬಾಗಿ ನಿಂತಿತು. ಇದಕ್ಕೆ ಪೂರಕವಾಗಿ ಉದ್ಯೋಗ ಮಾಡುತ್ತಿದ್ದ ಐಟಿ ಅಡಿಟಿಂಗ್ಕ್ಷೇತ್ರದಲ್ಲೇ ಮತ್ತಷ್ಟು ಅಧ್ಯಯನಕ್ಕೆ ಅವಕಾಶ ಸಿಕ್ಕಿತು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಸಪ್ನಾ, ಅಧ್ಯಯನದಲ್ಲಿತೊಡಗಿಸಿಕೊಂಡರು. ಸರ್ಟಿಫೈಡ್ ಇನ್ ಫಾರ್ಮೇಶನ್ ಸಿಸ್ಟಮ್ ಅಡಿಟರ್ (ಸಿಐಎಸ್‌ಎ) ಪರೀಕ್ಷೆಗೆ ಸಿದ್ಧತೆ ನಡೆಸಿದರು. ಪರೀಕ್ಷೆಯು ಕಠಿಣ ಹಾಗೂ ಕ್ಲಿಷ್ಟಕರವಾಗಿರುವುದರಿಂದ ವಿಶ್ವದಲ್ಲಿ ಕೆಲವೇ ಕೆಲವು ಮಂದಿ ಬರೆಯುತ್ತಾರೆ. ಪರೀಕ್ಷೆಯಲ್ಲಿ ಸಪ್ನಾಅವರು ವಿಶ್ವಕ್ಕೆ ಟಾಪರ್ ಆಗಿ ಸಾಧನೆ ಮಾಡಿದ ಪ್ರಥಮ ಭಾರತೀಯ ಮಹಿಳೆ. 2022ರಲ್ಲಿ ಇವರ ಜತೆ ಜರ್ಮನಿಯ ಯುವಕನೊಬ್ಬಟಾಪರ್ ಸ್ಥಾನ ಹಂಚಿಕೊAಡಿದ್ದಾರೆ.

ಯುವ ಸಮುದಾಯಕ್ಕೆ ಮಾದರಿ: ಸಪ್ನಾ ಅವರು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಪರೀಕ್ಷೆಯ ಬಗ್ಗೆ ಮಾಹಿತಿಕಲೆಹಾಕಿ, ಬಿಡುವಿನ ಸಮಯದಲ್ಲಿ ತಜ್ಞರಿಂದ ಮಾರ್ಗದರ್ಶನ ಪಡೆದರು. ಒಂದೆಡೆ ಗಂಡ, ಮಕ್ಕಳನ್ನೊಳಗೊಂಡ ಕುಟುಂಬ, ಇನ್ನೊಂದೆಡೆ ಉದ್ಯೋಗ. ಇವೆರಡರ ಮಧ್ಯೆ ಉನ್ನತ ಶಿಕ್ಷಣವನ್ನು ಮುಂದುವರಿಸಿ ಯಶಸ್ಸು ಕಂಡ ಅವರ ಸಾಧನೆ ಯುವ ಸಮಾಜಕ್ಕೆಮಾದರಿಯಾಗಿದೆ.

ನನಗೆ ಬಾಲ್ಯದಿಂದಲೂ ಒಳ್ಳೆಯದಾಗಿ ಕಲಿತು ಸಾಧನೆ ಮಾಡಬೇಕೆಂಬ ಹಂಬಲ ಇತ್ತು. ಅದಕ್ಕೆ ಸರಿಯಾಗಿ ಪ್ರಾಥಮಿಕ ಮತ್ತುಪ್ರೌಢಶಿಕ್ಷಣ ಭದ್ರ ಅಡಿಪಾಯ ಒದಗಿಸಿತು. ಐಟಿ ಕ್ಷೇತ್ರಕ್ಕೆ ಹೋದ ಬಳಿಕ ಸಿಐಎಸ್‌ಎ ಪರೀಕ್ಷೆ ಬಗ್ಗೆ ಆಸಕ್ತಿ ಹುಟ್ಟಿತು. ಕುಟುಂಬ, ಮನೆಯವರ ಪ್ರೋತ್ಸಾಹದಿಂದ ಸಾಧನೆ ಸಾಧ್ಯವಾಗಿದೆ. ಇಂದಿನ ಯುವ ಸಮಾಜಕ್ಕೂ ನನ್ನ ಸಲಹೆ ಅವಕಾಶಗಳನ್ನುಬಳಸಿಕೊಂಡು ಸಾಧನೆ ಮಾಡೋಣ. ಸಾಮಾಜಿಕ ಜಾಲತಾಣದಲ್ಲಿ ಸಮಯ ವ್ಯರ್ಥ ಮಾಡುವ ಬದಲು ಅದರಲ್ಲಿ ಒಳ್ಳೆಯ ಅಂಶಸ್ವೀಕರಿಸಿದಾಗ ಯಾವುದೇ ಕ್ಷೇತ್ರದಲ್ಲಿ ಮುನ್ನಡೆದಾಗ ಯಶಸ್ಸು ನಿಶ್ಚಿತ.

ಸಪ್ನಾ ಪೂಜಾರಿ ಹೆಬ್ರಿ, ಸಿಐಎಸ್‌ಎ ಟಾಪರ್


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »