TOP STORIES:

ಸೆ.24 ರಂದು ಮಂಗಳೂರಿನ’ಕುಂಜತ್ತಬೈಲಿನಲ್ಲಿ ಬಿಲ್ಲವ ಹಾಸ್ಟೆಲ್’ ಉದ್ಘಾಟನೆ


ಮಂಗಳೂರು: “ಬ್ರಹ್ಮಶ್ರೀ ನಾರಾಯಣಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ,

ಸಂಘಟನೆಯಿಂದ ಬಲಯುತರಾಗಿರಿ ಎಂಬ ಧೈಯೋದ್ದೇಶದೊಂದಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್‌ ನಿಂದ

ಕುಂಜತ್ತಬೈಲಿನಲ್ಲಿ ದಿ.ದಾಮೋದರ ಆರ್. ಸುವರ್ಣ ಸ್ಮಾರಕಬಿಲ್ಲವ ಹಾಸ್ಟೆಲ್ ನಿರ್ಮಿಸಲಾಗಿದ್ದು ಸೆ.24 ರಂದುಲೋಕಾರ್ಪಣೆಗೊಳ್ಳಲಿದೆಎಂದು ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಗರದ ಪುರಭವನದಲ್ಲಿ ಲೋಕಾರ್ಪಣಾ ಸಮಾರಂಭ

ನಡೆಯಲಿದ್ದು ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಮಾಜಿಕೇಂದ್ರ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿಯವರು ನಡೆಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರಡಿ. ಸುವರ್ಣ ವಹಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಬಿಡುಗಡೆಗೊಳಿಸಲಿದ್ದಾರೆ.

ಮುಖ್ಯ ಅಥಿತಿಗಳಾಗಿ ಮಾಜಿ ಸಂಸದ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವಿ. ಸುನೀಲ್ ಕುಮಾರ್, ಉಮಾನಾಥ್ ಕೋಟ್ಯಾನ್, ವೇದವ್ಯಾಸ್‌ ಕಾಮತ್‌, ಡಾ.ವೈ. ಭರತ್ ಶೆಟ್ಟಿ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಮೇಯರ್ ಜಯಾನಂದ ಅಂಚನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಮುಖ್ಯ ಸಚೇತಕ ಕೆ. ವಸಂತ ಬಂಗೇರ, ಮಾಜಿ ಶಾಸಕ ಗೋಪಾಲ ಪೂಜಾರಿ ಉಪಸ್ಥಿತರಿರಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಉದ್ಯಮಿ ಜಯರಾಮ ಬನಾನ್, ಬನಾನ್, ಸಣ್ಣ ಕೈಗಾರಿಕಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಉದಯಚಂದ್ರ ಡಿ. ಸುವರ್ಣ, ಆರ್ಯ ಈಡಿಗ ಸಂಘದ ಅಧ್ಯಕ್ಷ ತಿಮ್ಮೇಗೌಡ ,ಉದ್ಯಮಿ ಜೆ.ಪಿ. ಸುಧಾಕರ್‌, ಬಿಲ್ಲವ ಚೇಂಬರ್ಆಫ್ ಕಾಮರ್ಸ್ ಅಧ್ಯಕ್ಷ ಎನ್.ಟಿ. ಪೂಜಾರಿ, ಮುಂಬಯಿ ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಜೆ. ಅಮೀನ್, ಬೆಂಗಳೂರು ಬಿಲ್ಲವಅಸೋಸಿಯೇಶನ್ ಅಧ್ಯಕ್ಷ ವೇದಕುಮಾರ್, ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ದುಬಾಯಿ ಬಿಲ್ಲವ ಬಳಗಮಹಿಳಾ ವಿಭಾಗದ ಅಧ್ಯಕ್ಷೆ ಗೀತಾ ಸುವರ್ಣ, ಕಾರ್ಪೊರೇಟರ್  ಶರತ್ ಕುಮಾರ್ ಕುಮಾರ್ ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಉದ್ಯಮಿ  ಸುಶೀರ್ ಕುಮಾರ್, ಇಂಜಿನಿಯರ್ ಬಾಬ ಅಲಂಕಾರ್ಅವರನ್ನು ಸನ್ಮಾನಿಸಲಾಗುವುದುಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ, ಅಖಿಲ ಭಾರತ ಬಿಲ್ಲವರಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಸುಖಲಾಕ್ಷಿ ಸುವರ್ಣ, ಕೋಶಾಧಿಕಾರಿ ಕಾಶೀನಾಥ್, ಜೊತೆ ಕಾರ್ಯದರ್ಶಿಯೋಗೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. 5.25 ಕೋಟಿ ರೂ. ವೆಚ್ಚದ ಕಟ್ಟಡ!

ಮಂಗಳೂರು ನಗರದಿ೦ದ 6 ಕಿ.ಮೀ. ದೂರದ ಕುಂಜತ್ತಬೈಲ್‌ನ ಪ್ರಶಾಂತ ವಾತಾವರಣದಲ್ಲಿ ಸುಮಾರು 1 ಎಕರೆ ವ್ಯಾಪ್ತಿಯಲ್ಲಿ 5.25 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಿಸಲಾಗಿದ್ದು ಬಿಲ್ಲವ ಹಾಗೂ ಹಿಂದುಳಿದ ಸಮುದಾಯದಲ್ಲಿ ಉನ್ನತ ವೃತ್ತಿ ಶಿಕ್ಷಣ ಬಯಸುವ ವಿದ್ಯಾರ್ಥಿಗಳ ಅನುಕೂಲತೆಗಾಗಿ ಹಾಸ್ಟೆಲ್ ನಿರ್ಮಿಸಲಾಗಿದೆ. ಸುಮಾರು 5 ಮಹಡಿಯ ಕಟ್ಟಡ ಇದಾಗಿದ್ದು ಒಟ್ಟು 19,500 ಚದರ ಅಡಿ ವಿಸ್ತೀರ್ಣ ಹೊಂದಿದೆ. ನೆಲ ಅಂತಸ್ತಿನಲ್ಲಿ ಆಡಳಿತ ಕಚೇರಿ, ಗ್ರಂಥಾಲಯ ಹಾಗೂ ವಸತಿ

ಕೊಠಡಿಗಳು, 1ನೇ ಹಾಗೂ 3ನೇ ಮಹಡಿಯಲ್ಲಿ ವಸತಿ ಕೊಠಡಿ ಮತ್ತು 2ನೇ ಮಹಡಿಯಲ್ಲಿ ಸಭಾಂಗಣ ಒಳಗೊಂಡಿದೆ. ತಳಮಹಡಿಯಲ್ಲಿ ಅಡುಗೆ ಕೋಣೆ, ಉಗ್ರಾಣ ಕೋಣೆಗಳಿವೆ. ಸುಮಾರು 100 ಮಂದಿ ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾದ ವಸತಿ ಸೌಲಭ್ಯವಿದ್ದು ವೃತ್ತಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆಯಾಗಿದೆ.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »