TOP STORIES:

FOLLOW US

ಸೈಬರ್ ಅಟ್ಯಾಕ್‌ಗಳನ್ನು ಕಡಿಮೆ ಮಾಡಲು ಆಪಲ್ ತರುತ್ತಿದೆ ಹೊಸ ಲಾಕ್‌ಡೌನ್ ಮೋಡ್


ವಾಷಿಂಗ್ಟನ್: ಆಪಲ್ ಕಂಪನಿ ತನ್ನ ಐಫೋನ್, ಪ್ಯಾಡ್, ಹಾಗೂ ಮ್ಯಾಕ್ ಸಾಧನಗಳಿಗಾಗಿ ಹೊಸ ಭದ್ರತಾ ಫೀಚರ್‌ಅನ್ನುಹೊರತರುತ್ತಿದೆ. ಇದು ಮುಖ್ಯವಾಗಿ ಉನ್ನತ ಪ್ರೊಫೈಲ್ ಬಳಕೆದಾರರ ಮೇಲಿನ ಉದ್ದೇಶಿತ ಸೈಬರ್ ಅಟ್ಯಾಕ್‌ಗಳನ್ನು ತಡೆಯಲುವಿನ್ಯಾಸಗೊಳಿಸಲಾಗಿದೆ.

ಲಾಕ್‌ಡೌನ್ ಮೋಡ್ ಹೆಸರಿನ ಹೊಸ ಐಚ್ಛಿಕ(ಆಪ್ಶನಲ್) ಫೀಚರ್, ಕೆಲವು ಉನ್ನತ ವ್ಯಕ್ತಿಗಳು ತಮ್ಮ ಆಪಲ್ ಡಿವೈಸ್‌ಗಳಲ್ಲಿಬಳಸಬಹುದಾಗಿದ್ದು, ಇದು ಸೈಬರ್ ಅಟ್ಯಾಕ್‌ಗಳಿಂದ ರಕ್ಷಣೆ ನೀಡುತ್ತದೆ ಎಂದು ಕಂಪನಿ ತಿಳಿಸಿದೆ. ಇದು ಬಳಕೆದಾರರಸಾಧನಗಳನ್ನು ಹ್ಯಾಕ್ ಮಾಡುವುದನ್ನು ಕಡಿಮೆಗೊಳಿಸುತ್ತದೆ ಎಂದು ಹೇಳಿದೆ.

ಕಳೆದ ಹಲವು ವರ್ಷಗಳಿಂದ ಉನ್ನತ ವ್ಯಕ್ತಿಗಳ ಡಿವೈಸ್‌ಗಳನ್ನು ಹ್ಯಾಕ್ ಮಾಡಿರುವಂತಹ ಹಲವು ಪ್ರಕರಣಗಳು ವರದಿಯಾಗಿವೆ. ಮುಖ್ಯವಾಗಿ ಕಂಪನಿ ಸ್ಪೈವೇರ್ ನಂತಹ ದಾಳಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ಫೀಚರ್ ಅನ್ನು ಹೊರತಂದಿದೆಎಂದು ತಿಳಿಸಿದೆ.

ಪ್ರಪಂಚದಾದ್ಯಂತ ಸುಮಾರು 150 ದೇಶಗಳಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳನ್ನು ಗುರಿಪಡಿಸಿಕೊಂಡು ಸೈಬರ್ ದಾಳಿಗಳುನಡೆಯುತ್ತವೆ. ಇದಕ್ಕಾಗಿ ಲಾಕ್‌ಡೌನ್ ಮೋಡ್ ಫೀಚರ್ ಅನ್ನು ತರಲಾಗಿದ್ದು, ಇದನ್ನು ಬಳಕೆದಾರರಿಗೆ ತಿಳಿಸುವ ವ್ಯವಸ್ಥೆಯನ್ನುಮಾಡಲಾಗುತ್ತಿದೆ ಎಂದು ಹೇಳಿದೆ.

ವಿಡಿಯೋ ಸಿಸಿ ಟಿ

ವರದಿಗಳ ಪ್ರಕಾರ ಲಾಕ್‌ಡೌನ್ ಮೋಡ್, ಆಪಲ್ ಡಿವೈಸ್‌ಗಳಲ್ಲಿ ಮೆಸೇಜಿಂಗ್ ಆಪ್‌ಗಳ ಅಟ್ಯಾಚ್‌ಮೆಂಟ್‌ಗಳನ್ನು ಬ್ಲಾಕ್ಮಾಡುತ್ತದೆ. ಇವು ಹ್ಯಾಕರ್‌ಗಳಿಗೆ ಡಿವೈಸ್‌ಗಳನ್ನು ಹ್ಯಾಕ್‌ಮಾಡಲು ಲಭ್ಯವಿರುವ ಸುಲಭದ ಹಾಗೂ ಮುಖ್ಯವಾದ ವಿಧಾನವಾಗಿದೆ.

ಆಪಲ್ ಮುಂಬರುವ ಐಒಎಸ್ 16, ಐಪ್ಯಾಡ್ ಐಎಸ್ 16 ಹಾಗೂ ಮ್ಯಾಕ್ ಒಎಸ್‌ಗಳಲ್ಲಿ ನವೀಕರಣದ ಭಾಗವಾಗಿ ಲಾಕ್‌ಡೌನ್ಮೋಡ್‌ಅನ್ನು ಬಿಡುಗಡೆ ಮಾಡಲು ಯೋಜಿಸಿದೆ. ಫೀಚರ್ ಸದ್ಯ ಬೀಟಾ ಆವೃತ್ತಿಯಲ್ಲಿ ಪರೀಕ್ಷೆ ನಡೆಯುತ್ತಿದೆ.


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »