TOP STORIES:

ಸೋಲನ್ನು ಮೆಟ್ಟಿ ನಿಂತ ಸಾಧಕನ ಸ್ಫೂರ್ತಿಯ ಕಥೆ


ಜೀವನದಲ್ಲಿ ಸೋಲು ಮುಖ್ಯ ಅಲ್ಲ. ಆದರೆ ಸೋಲನ್ನು ಮೆಟ್ಟಿ ನಿಂತು ಸಾಧಿಸುವುದು ಮುಖ್ಯ. ಹೋಂಡಾ ಕಂಪೆನಿ ಅಂದರೆ ಎಲ್ಲರಿಗೂ ಚಿರಪರಿಚಿತ. ಈ ವಿಶ್ವವಿಖ್ಯಾತ ಕಂಪೆನಿಯ ಸ್ಥಾಪಕ ಸೋಯಿಚಿರೋ ಹೋಂಡಾರವರ ಕಲ್ಲು ಮುಳ್ಳಿನ ಹಾದಿಯ ಕಥೆಯೂ ನಮ್ಮೆಲ್ಲರ ಜೀವನಕ್ಕೆ ಸ್ಫೂರ್ತಿದಾಯಕವಾದುದು.

ಬಡ ಕುಟುಂಬದಲ್ಲಿ ಹುಟ್ಟಿದ ಸೋಯಿ ಚಿರೋ ಹೋಂಡಾ ಚಿಕ್ಕಂದಿನಿಂದಲೇ ಏನಾದರೂ ಸಾಧನೆ ಮಾಡಬೇಕು ಎನ್ನುವ ಅದಮ್ಯ ಬಯಕೆ ಇಟ್ಟುಕೊಂಡಿದ್ದರು. ಹಾಗೆಯೇ ಕಾಲೇಜಿನ ವರ್ಕ್‌ ಶಾಪ್‌ನಲ್ಲಿದ್ದಾಗ ಹಠಾತ್ತಾನೆ ಪಿಸ್ಟನ್‌ ತಯಾರಿಸುವ ಐಡಿಯಾ ಹೊಳೆಯಿತು.

ಹಗಲು-ರಾತ್ರಿ ಶ್ರಮಪಟ್ಟು ತಯಾರಿಸಿ ಟೊಯೊಟೊ ಕಂಪೆನಿಗೆ ಮಾರಲು ಹೋದಾಗ, ಗುಣ ಮಟ್ಟದ ಉತ್ಪನ್ನ ಇದಲ್ಲ ಎಂದು ಕಂಪೆನಿ ನಿರಾಕರಿಸಿತು. ಎಲ್ಲರೂ ಗೇಲಿ ಮಾಡಿ ನಕ್ಕರು. ಆದರೆ ಹೋಂಡಾ ಅವರು ಮಂದಹಾಸ ಬೀರಿ ತನ್ನ ಪ್ರಯತ್ನವನ್ನು ಮುಂದುವರಿಸಿದರು. ಮುಂದೊಂದು ದಿನ ತನ್ನ ಸತತ ಪ್ರಯತ್ನದಿಂದ ತನ್ನದೇ ಆದ ಫ್ಯಾಕ್ಟರಿಯನ್ನು ಆರಂಭಿಸಿದರು. ಆದರೆ ಭೂಕಂಪಕ್ಕೀಡಾಗಿ ಧರೆಗುರುಳಿತು.

ಮತ್ತೆ ಕಾರ್ಖಾನೆ ನಿರ್ಮಾಣಕ್ಕೆ ಮುಂದಾದಾಗ 2ನೇ ಮಹಾಯುದ್ಧವು ಪ್ರವೇಶಿಸಿಬಿಟ್ಟಿತ್ತು. ಆ ಹೊತ್ತಿಗೆ ಸಿಮೆಂಟಿನ ಪೂರೈಕೆ ನಿಂತೇ ಹೋಯ್ತು. ಆದರೆ ಇದಕ್ಕೆಲ್ಲ ತಲೆಕೆಡಿಸಿಕೊಳ್ಳದ ಹೋಂಡಾ ಅವರು ತಾನೆೇ ಸಿಮೆಂಟ್‌ ತಯಾರಿಸಿ ಕಾರ್ಖಾನೆಯ ಕೆಲಸ ಪೂರ್ಣಗೊಳಿಸಿದರು. ಹೀಗೆ ಮುಂದಿನ ದಿನಗಳಲ್ಲಿ ಹಲವು ಬಾರಿ ಸೋಲುಗಳನ್ನು ಕಂಡರೂ ಎಲ್ಲವನ್ನೂ ಮೆಟ್ಟಿನಿಂತು ಮುಂದೊಂದು ದಿನ ಹೋಂಡಾ ಕಂಪೆನಿಯನ್ನು ಜಗದ್ವಿಖ್ಯಾತ ಮಾಡಿದರು.

ನಾವು ಸೋಯಿಚಿರೋ ಹೋಂಡಾ ಅವರ ಜಾಗದಲ್ಲಿ ಇದ್ದಿದ್ದರೆ ಏನು ಮಾಡುತ್ತಿದ್ದೆವು? ಎಷ್ಟೇ ಸೋಲು ಕಂಡರೂ ಹೋಂಡಾ ಅವರು ಮಂದ ಹಾಸ ಬೀರಿ ಅದನ್ನೆಲ್ಲ ಜಯಿಸಿ ಮುನ್ನಡೆದು ಇಡೀ ವಿಶ್ವಕ್ಕೆ ಮಾದರಿ ಯಾದರು. ನಮಗೂ ಕೂಡ ಜೀವನದಲ್ಲಿ ಸೋಲುಗಳು ಬರುವುದು ಸಹಜ. ಆದರೆ ಅವನ್ನೆಲ್ಲ ಮೆಟ್ಟಿ ಮಂದಹಾಸ ಬೀರಿ ಜಯಿಸಬೇಕು ಅಷ್ಟೇ… ಎಲ್ಲದಕ್ಕೂ ಸಾಧಿಸುವ ಛಲವಿರಬೇಕು.

– ರಾಜೇಶ್ ಎಸ್ ಬಲ್ಯ


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »