TOP STORIES:

FOLLOW US

ಸೋಲನ್ನು ಮೆಟ್ಟಿ ನಿಂತ ಸಾಧಕನ ಸ್ಫೂರ್ತಿಯ ಕಥೆ


ಜೀವನದಲ್ಲಿ ಸೋಲು ಮುಖ್ಯ ಅಲ್ಲ. ಆದರೆ ಸೋಲನ್ನು ಮೆಟ್ಟಿ ನಿಂತು ಸಾಧಿಸುವುದು ಮುಖ್ಯ. ಹೋಂಡಾ ಕಂಪೆನಿ ಅಂದರೆ ಎಲ್ಲರಿಗೂ ಚಿರಪರಿಚಿತ. ಈ ವಿಶ್ವವಿಖ್ಯಾತ ಕಂಪೆನಿಯ ಸ್ಥಾಪಕ ಸೋಯಿಚಿರೋ ಹೋಂಡಾರವರ ಕಲ್ಲು ಮುಳ್ಳಿನ ಹಾದಿಯ ಕಥೆಯೂ ನಮ್ಮೆಲ್ಲರ ಜೀವನಕ್ಕೆ ಸ್ಫೂರ್ತಿದಾಯಕವಾದುದು.

ಬಡ ಕುಟುಂಬದಲ್ಲಿ ಹುಟ್ಟಿದ ಸೋಯಿ ಚಿರೋ ಹೋಂಡಾ ಚಿಕ್ಕಂದಿನಿಂದಲೇ ಏನಾದರೂ ಸಾಧನೆ ಮಾಡಬೇಕು ಎನ್ನುವ ಅದಮ್ಯ ಬಯಕೆ ಇಟ್ಟುಕೊಂಡಿದ್ದರು. ಹಾಗೆಯೇ ಕಾಲೇಜಿನ ವರ್ಕ್‌ ಶಾಪ್‌ನಲ್ಲಿದ್ದಾಗ ಹಠಾತ್ತಾನೆ ಪಿಸ್ಟನ್‌ ತಯಾರಿಸುವ ಐಡಿಯಾ ಹೊಳೆಯಿತು.

ಹಗಲು-ರಾತ್ರಿ ಶ್ರಮಪಟ್ಟು ತಯಾರಿಸಿ ಟೊಯೊಟೊ ಕಂಪೆನಿಗೆ ಮಾರಲು ಹೋದಾಗ, ಗುಣ ಮಟ್ಟದ ಉತ್ಪನ್ನ ಇದಲ್ಲ ಎಂದು ಕಂಪೆನಿ ನಿರಾಕರಿಸಿತು. ಎಲ್ಲರೂ ಗೇಲಿ ಮಾಡಿ ನಕ್ಕರು. ಆದರೆ ಹೋಂಡಾ ಅವರು ಮಂದಹಾಸ ಬೀರಿ ತನ್ನ ಪ್ರಯತ್ನವನ್ನು ಮುಂದುವರಿಸಿದರು. ಮುಂದೊಂದು ದಿನ ತನ್ನ ಸತತ ಪ್ರಯತ್ನದಿಂದ ತನ್ನದೇ ಆದ ಫ್ಯಾಕ್ಟರಿಯನ್ನು ಆರಂಭಿಸಿದರು. ಆದರೆ ಭೂಕಂಪಕ್ಕೀಡಾಗಿ ಧರೆಗುರುಳಿತು.

ಮತ್ತೆ ಕಾರ್ಖಾನೆ ನಿರ್ಮಾಣಕ್ಕೆ ಮುಂದಾದಾಗ 2ನೇ ಮಹಾಯುದ್ಧವು ಪ್ರವೇಶಿಸಿಬಿಟ್ಟಿತ್ತು. ಆ ಹೊತ್ತಿಗೆ ಸಿಮೆಂಟಿನ ಪೂರೈಕೆ ನಿಂತೇ ಹೋಯ್ತು. ಆದರೆ ಇದಕ್ಕೆಲ್ಲ ತಲೆಕೆಡಿಸಿಕೊಳ್ಳದ ಹೋಂಡಾ ಅವರು ತಾನೆೇ ಸಿಮೆಂಟ್‌ ತಯಾರಿಸಿ ಕಾರ್ಖಾನೆಯ ಕೆಲಸ ಪೂರ್ಣಗೊಳಿಸಿದರು. ಹೀಗೆ ಮುಂದಿನ ದಿನಗಳಲ್ಲಿ ಹಲವು ಬಾರಿ ಸೋಲುಗಳನ್ನು ಕಂಡರೂ ಎಲ್ಲವನ್ನೂ ಮೆಟ್ಟಿನಿಂತು ಮುಂದೊಂದು ದಿನ ಹೋಂಡಾ ಕಂಪೆನಿಯನ್ನು ಜಗದ್ವಿಖ್ಯಾತ ಮಾಡಿದರು.

ನಾವು ಸೋಯಿಚಿರೋ ಹೋಂಡಾ ಅವರ ಜಾಗದಲ್ಲಿ ಇದ್ದಿದ್ದರೆ ಏನು ಮಾಡುತ್ತಿದ್ದೆವು? ಎಷ್ಟೇ ಸೋಲು ಕಂಡರೂ ಹೋಂಡಾ ಅವರು ಮಂದ ಹಾಸ ಬೀರಿ ಅದನ್ನೆಲ್ಲ ಜಯಿಸಿ ಮುನ್ನಡೆದು ಇಡೀ ವಿಶ್ವಕ್ಕೆ ಮಾದರಿ ಯಾದರು. ನಮಗೂ ಕೂಡ ಜೀವನದಲ್ಲಿ ಸೋಲುಗಳು ಬರುವುದು ಸಹಜ. ಆದರೆ ಅವನ್ನೆಲ್ಲ ಮೆಟ್ಟಿ ಮಂದಹಾಸ ಬೀರಿ ಜಯಿಸಬೇಕು ಅಷ್ಟೇ… ಎಲ್ಲದಕ್ಕೂ ಸಾಧಿಸುವ ಛಲವಿರಬೇಕು.

– ರಾಜೇಶ್ ಎಸ್ ಬಲ್ಯ


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »