TOP STORIES:

ಸೋಲನ್ನು ಮೆಟ್ಟಿ ನಿಂತ ಸಾಧಕನ ಸ್ಫೂರ್ತಿಯ ಕಥೆ


ಜೀವನದಲ್ಲಿ ಸೋಲು ಮುಖ್ಯ ಅಲ್ಲ. ಆದರೆ ಸೋಲನ್ನು ಮೆಟ್ಟಿ ನಿಂತು ಸಾಧಿಸುವುದು ಮುಖ್ಯ. ಹೋಂಡಾ ಕಂಪೆನಿ ಅಂದರೆ ಎಲ್ಲರಿಗೂ ಚಿರಪರಿಚಿತ. ಈ ವಿಶ್ವವಿಖ್ಯಾತ ಕಂಪೆನಿಯ ಸ್ಥಾಪಕ ಸೋಯಿಚಿರೋ ಹೋಂಡಾರವರ ಕಲ್ಲು ಮುಳ್ಳಿನ ಹಾದಿಯ ಕಥೆಯೂ ನಮ್ಮೆಲ್ಲರ ಜೀವನಕ್ಕೆ ಸ್ಫೂರ್ತಿದಾಯಕವಾದುದು.

ಬಡ ಕುಟುಂಬದಲ್ಲಿ ಹುಟ್ಟಿದ ಸೋಯಿ ಚಿರೋ ಹೋಂಡಾ ಚಿಕ್ಕಂದಿನಿಂದಲೇ ಏನಾದರೂ ಸಾಧನೆ ಮಾಡಬೇಕು ಎನ್ನುವ ಅದಮ್ಯ ಬಯಕೆ ಇಟ್ಟುಕೊಂಡಿದ್ದರು. ಹಾಗೆಯೇ ಕಾಲೇಜಿನ ವರ್ಕ್‌ ಶಾಪ್‌ನಲ್ಲಿದ್ದಾಗ ಹಠಾತ್ತಾನೆ ಪಿಸ್ಟನ್‌ ತಯಾರಿಸುವ ಐಡಿಯಾ ಹೊಳೆಯಿತು.

ಹಗಲು-ರಾತ್ರಿ ಶ್ರಮಪಟ್ಟು ತಯಾರಿಸಿ ಟೊಯೊಟೊ ಕಂಪೆನಿಗೆ ಮಾರಲು ಹೋದಾಗ, ಗುಣ ಮಟ್ಟದ ಉತ್ಪನ್ನ ಇದಲ್ಲ ಎಂದು ಕಂಪೆನಿ ನಿರಾಕರಿಸಿತು. ಎಲ್ಲರೂ ಗೇಲಿ ಮಾಡಿ ನಕ್ಕರು. ಆದರೆ ಹೋಂಡಾ ಅವರು ಮಂದಹಾಸ ಬೀರಿ ತನ್ನ ಪ್ರಯತ್ನವನ್ನು ಮುಂದುವರಿಸಿದರು. ಮುಂದೊಂದು ದಿನ ತನ್ನ ಸತತ ಪ್ರಯತ್ನದಿಂದ ತನ್ನದೇ ಆದ ಫ್ಯಾಕ್ಟರಿಯನ್ನು ಆರಂಭಿಸಿದರು. ಆದರೆ ಭೂಕಂಪಕ್ಕೀಡಾಗಿ ಧರೆಗುರುಳಿತು.

ಮತ್ತೆ ಕಾರ್ಖಾನೆ ನಿರ್ಮಾಣಕ್ಕೆ ಮುಂದಾದಾಗ 2ನೇ ಮಹಾಯುದ್ಧವು ಪ್ರವೇಶಿಸಿಬಿಟ್ಟಿತ್ತು. ಆ ಹೊತ್ತಿಗೆ ಸಿಮೆಂಟಿನ ಪೂರೈಕೆ ನಿಂತೇ ಹೋಯ್ತು. ಆದರೆ ಇದಕ್ಕೆಲ್ಲ ತಲೆಕೆಡಿಸಿಕೊಳ್ಳದ ಹೋಂಡಾ ಅವರು ತಾನೆೇ ಸಿಮೆಂಟ್‌ ತಯಾರಿಸಿ ಕಾರ್ಖಾನೆಯ ಕೆಲಸ ಪೂರ್ಣಗೊಳಿಸಿದರು. ಹೀಗೆ ಮುಂದಿನ ದಿನಗಳಲ್ಲಿ ಹಲವು ಬಾರಿ ಸೋಲುಗಳನ್ನು ಕಂಡರೂ ಎಲ್ಲವನ್ನೂ ಮೆಟ್ಟಿನಿಂತು ಮುಂದೊಂದು ದಿನ ಹೋಂಡಾ ಕಂಪೆನಿಯನ್ನು ಜಗದ್ವಿಖ್ಯಾತ ಮಾಡಿದರು.

ನಾವು ಸೋಯಿಚಿರೋ ಹೋಂಡಾ ಅವರ ಜಾಗದಲ್ಲಿ ಇದ್ದಿದ್ದರೆ ಏನು ಮಾಡುತ್ತಿದ್ದೆವು? ಎಷ್ಟೇ ಸೋಲು ಕಂಡರೂ ಹೋಂಡಾ ಅವರು ಮಂದ ಹಾಸ ಬೀರಿ ಅದನ್ನೆಲ್ಲ ಜಯಿಸಿ ಮುನ್ನಡೆದು ಇಡೀ ವಿಶ್ವಕ್ಕೆ ಮಾದರಿ ಯಾದರು. ನಮಗೂ ಕೂಡ ಜೀವನದಲ್ಲಿ ಸೋಲುಗಳು ಬರುವುದು ಸಹಜ. ಆದರೆ ಅವನ್ನೆಲ್ಲ ಮೆಟ್ಟಿ ಮಂದಹಾಸ ಬೀರಿ ಜಯಿಸಬೇಕು ಅಷ್ಟೇ… ಎಲ್ಲದಕ್ಕೂ ಸಾಧಿಸುವ ಛಲವಿರಬೇಕು.

– ರಾಜೇಶ್ ಎಸ್ ಬಲ್ಯ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »