TOP STORIES:

ಹಸಿದವರಿಗೆ ಅನ್ನ ನೀಡುವ ವಾರಿಯರ್‍ಸ್ ಇವರು! ಸದ್ದಿಲ್ಲದೆ ಸಾಗಿದೆ ಮಾನವೀಯ ಸೇವೆ


ಮಂಗಳೂರು: ಕೊರೋನಾ ಯಾರನ್ನು ಬಿಟ್ಟಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಕಣ್ಣಿಗೆ ಕಾಣದ ಪುಟ್ಟ ವೈರಸ್ ಎಲ್ಲರನ್ನೂ ಕಾಡಿದೆ. ಕೊರೋನಾ ದಾಳಿಯಿಂದ ಲಕ್ಷಾಂತರ ಮಂದಿಯ ಬದುಕು ಧೂಳೀಪಟವಾಗಿರುವುದು ಅಷ್ಟೇ ಸತ್ಯ.

(Copyrights owned by: billavaswarriors.com )

ಕೊರೋನಾ ಮೊದಲ ಅಲೆ ಮುಗಿಯಿತು ಎನ್ನವಾಗಲೇ ಎರಡನೆಯ ಧಾಂಗುಡಿಯಿಟ್ಟಿತ್ತು. ಇದರ ದಾಳಿಗೆ ಸಿಲುಕಿದವರು ಅದೆಷ್ಟೋ ಮಂದಿ. ಈ ನಡುವೆ ಕರ್ಫ್ಯೂ, ಲಾಕ್‌ಡೌನ್‌ನಿಂದಾಗಿ ಬದುಕು ಕಳೆದುಕೊಂಡವರಿಗೆ ಲೆಕ್ಕವಿಲ್ಲ.

ಕಾಡಿದ ಕೊರೋನಾದಿಂದಾಗಿ ದಿನಗೂಲಿ ಕಾರ್ಮಿಕರಿಗೆ ಕೆಲಸವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದೊದಗಿದೆ. ನಿರ್ಗತಿಕರು, ಭಿಕ್ಷೆ ಬೇಡಿಕೊಂಡು ದಿನ ಕಳೆಯುತ್ತಿದ್ದವರ ಸ್ಥಿತಿಯಂತೂ ಮತ್ತಷ್ಟು ಶೋಚನೀಯವಾಗಿದೆ. ಆದರೆ ಮಂಗಳೂರಿನಲ್ಲಿ ಯುವಕರ ತಂಡವೊಂದು ಇವರ ನೆರವಿಗೆ ನಿಂತಿದೆ. ಸದ್ದಿಲ್ಲದೆ ಅನ್ನದಾನದ ಕೈಂಕರ್ಯದಲ್ಲಿ ತೊಡಗಿಕೊಂಡಿರುವ ಇವರು ಕೊರೋನಾ ವಾರಿಯರ್‍ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರು ನಿಜವಾಗಿಯೂ ಹಸಿದವರ ಪಾಲಿನ ವಾರಿಯರ್‍ಸ್!

ಸಮಾನ ಮನಸ್ಕ ಯುವಕರ ತಂಡ

ಮಂಗಳೂರಿನ ಉರ್ವದಲ್ಲಿ ಪುಟ್ಟ ಹೋಟೆಲ್ ನಡೆಸುತ್ತಿರುವ ರಕ್ಷಿತ್ ಸಾಲಿಯಾನ್ ನೇತೃತ್ವದ ತಂಡವೇ ಕೊರೋನಾ ಅವಯಲ್ಲಿ ಹಸಿದವರ ಪಾಲಿಗೆ ಸಂಜೀವಿನಿಯಾದ ತಂಡ. ಕೊರೋನಾ ಲಾಕ್‌ಡೌನ್‌ನಿಂದಾಗಿ ಯಾರೂ ಕೂಡ ಮನೆಯಿಂದ ಹೊರಬರಲಾಗದ ಸ್ಥಿತಿಯಿದೆ. ಮನೆ ಇದ್ದವರು ಮನೆಯಲ್ಲಿ ತುತ್ತು ಅನ್ನವನ್ನಾದರೂ ತಿಂದು ದಿನ ಕಳೆಯಬಹುದು. ಆದರೆ ನಿರ್ಗತಿಕರು, ಅಂಗವಿಕಲರು, ಡೇರೆ ಹಾಕಿಕೊಂಡು ಬದುಕು ಕಟ್ಟಿಕೊಂಡವರ ಪಾಡೇನು? ಇವರ ಬಗ್ಗೆ ಯೋಚನೆ ಬಂದದ್ದೇ ತಡ ರಕ್ಷಿತ್ ಸಾಲಿಯಾನ್ ನೇತೃತ್ವದ ಸಮಾನ ಮನಸ್ಕ ಯುವಕರು ಒಂದು ತಂಡ ಕಟ್ಟಿದ್ದರು. ಈ ತಂಡದ ಶ್ರಮದಿಂದಾಗಿ ನಿತ್ಯ ಹಸಿವಿನಿಂದ ಬಳಲುತ್ತಿರುವವರ ಹಸಿವು ನೀಗುತ್ತಿದೆ.

ಯಾವುದೇ ಪ್ರಚಾರ ಬಯಸದೆ ನಿರಂತರ ನೂರಾರು ಮಂದಿಗೆ ಅನ್ನದಾನ ಮಾಡುತ್ತಿದ್ದಾರೆ. ಇವರ ಈ ರೀತಿಯ ಸೇವೆಗೆ ವ್ಯಾಪಕ ಶ್ಲಾಘನೆಯೂ ವಕ್ತವಾಗುತ್ತಿದೆ. ಸಮಾಜದಲ್ಲಿ ಯಾರೂ ಹಸಿದಿರಬಾರದು, ನಮ್ಮಿಂದಾದ ನೆರವು ನೀಡಬೇಕು ಎಂಬ ಮಾನವೀಯ ನೆಲಯಲ್ಲಿ ಯುವಕರ ತಂಡ ಕೆಲಸ ಮಾಡುತ್ತಿದೆ.

ವರುಷದಿಂದ ನಿರಂತರ ಸೇವೆ

ಕಳೆದ ವರ್ಷ ಕೊರೋನಾ ಮೊದಲ ಅಲೆಯ ಲಾಕ್‌ಡೌನ್‌ನ ಮೊದಲ ದಿನದಿಂದ ಯುವಕರ ತಂಡ ಈ ಕಾರ್ಯವನ್ನು ಪ್ರಾರಂಭಿಸಿದೆ. ಅಲ್ಲಿಂದ ಶುರುವಾದ ಈ ಕಾಯಕ ಈ ವರ್ಷ ಕೋವಿಡ್ ಎರಡನೆಯ ಅಲೆಯ ಸಂದರ್ಭದಲ್ಲಿಯೂ ಮುಂದುವರಿದಿದೆ.

(Copyrights owned by: billavaswarriors.com )

ಲಾಕ್‌ಡೌನ್‌ನಿಂದಾಗಿ ಯಾರೂ ಕೂಡ ಹಸಿವಿನಿಂದ ಕಂಗೆಡಬಾರದು. ಅದಕ್ಕಾಗಿ ನಮ್ಮಿಂದಾದ ಪ್ರಯತ್ನ ಮಾಡುತ್ತಿದ್ದೇವೆ. ಹಸಿದವರಿಗೆ ಅನ್ನ ನೀಡುವುದರಲ್ಲಿ ನಮಗೆ ಖುಷಿ ಇದೆ ಎನ್ನುತ್ತಾರೆ ತಂಡದ ಸದಸ್ಯರಲ್ಲಿ ಒಬ್ಬರಾಗಿರುವ ರಕ್ಷಿತ್ ಸಾಲಿಯಾನ್.

ಕಳೆದ ವರ್ಷ ೧೫ ಸಾವಿರಕ್ಕೂ ಅಕ ಮಂದಿಗೆ ಊಟ

ಕಳೆದ ವರ್ಷ ಲಾಕ್‌ಡೌನ್ ಅವಯಲ್ಲಿ ೧೫,೦೦೦ಕ್ಕೂ ಹೆಚ್ಚು ಆಹಾರದ ಪೊಟ್ಟಣದ ಜೊತೆಗೆ ನೀರಿನ ಬಾಟಲಿಗಳು, ೨೫೦ಕ್ಕಿಂತಲೂ ಅಕ ರೇಷನ್ ಕಿಟ್‌ಗಳನ್ನು ಹಂಚಲಾಗಿದ್ದು ಈ ಬಾರಿಯೂ ಅದೇ ರೀತಿ ಕಾರ್ಯಕ್ರಮ ರೂಪಿಸಲಾಗಿದೆ. ಪ್ರತಿದಿನ ೩೦೦ರಷ್ಟು ಮಂದಿಗೆ ಆಹಾರ ಒದಗಿಸುತ್ತಿದ್ದೇವೆ. ಆಹಾರ ಪೂರೈಕೆಯಲ್ಲೂ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಬುಧವಾರ ನೂರಾರು ಮಂದಿಗೆ ಗುಣಮಟ್ಟದ ಮಾಸ್ಕ್‌ನ್ನು ಕೂಡ ಹಂಚಿದ್ದೇವೆ. ಸ್ಟೇಟ್ ಬ್ಯಾಂಕ್ ಪರಿಸದಲ್ಲಿ ಹಲವು ಮಂದಿಗೆ ಸೊಳ್ಳೆ ಪರದೆ ವಿತರಿಸುವ ಕೆಲಸವೂ ಆಗಿದೆ ಎನ್ನತ್ತಾರೆ ರಕ್ಷಿತ್ ಸಾಲಿಯಾನ್.

ತಂಡದ ವಾರಿಯರ್‍ಸ್ ಇವರು

ನಿರ್ಗತಿಕರ ನೆರವಿಗೆ ನಿಂತಿರುವ ಸಮಾನ ಮನಸ್ಕ ಯುವಕರ ತಂಡದಲ್ಲಿ ೧೦ ಮಂದಿಯಿದ್ದು, ಪ್ರತಿಯೊಬ್ಬರೂ ಆಹಾರ ವಿತರಣೆಯ ಕಾರ್ಯದಲ್ಲಿ ಕೈ ಜೋಡಿಸುತ್ತಾರೆ. ಜೋಶುವಾ ಡಿಸೋಜಾ, ಸಂಜಯ್ ಕಾಮತ್, ಚೈತನ್ಯ, ಹರಿಪ್ರಸಾದ್, ರಾಹುಲ್ ಪೈ, ಮಹೇಶ್, ನಿತಿನ್ ಮಾಡ, ಅರುಣ್ ಪೈ, ಅಜಿತ್ ಕಾಮತ್, ಸಂದೇಶ್, ಆಯುಷ್ಮಾನ್ ಅಮೀನ್, ಪುಣಿಕ್ ಶೆಟ್ಟಿ ಮುಂತಾದವರು ತಂಡದಲ್ಲಿ ವಾರಿಯರ್‍ಸ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ.

ದಿನಕ್ಕೆ ಸುಮಾರು ೩೦೦ ಮಂದಿಗೆ ಆಹಾರ

ನಗರದ ಉರ್ವ, ಮಣ್ಣಗುಡ್ಡೆ, ಪಿವಿಎಸ್ ಸ್ಟೇಟ್‌ಬ್ಯಾಂಕ್, ಹಂಪನಕಟ್ಟೆ, ಅಳಕೆ ಹೀಗೆ ನಗರದ ವಿವಿಧೆಡೆ ಇರುವ ನಿರ್ಗತಿಕರಿಗೆ ಆಹಾರ ವಿತರಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಕೆಲವರು ಮನೆಯಲ್ಲಿ ಯಾವ ಆಹಾರ ಪದಾರ್ಥವೂ ಇಲ್ಲ ಎಂದು ಕರೆ ಮಾಡುತ್ತಾರೆ. ಅವರಿಗೂ ಅಗತ್ಯ ದಿನಸಿಗಳನ್ನು ಒದಗಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮಿಂದ ಎಷ್ಟು ಸಾಧ್ಯವೋ ಅಷ್ಟನ್ನು ನಿತ್ಯ ಮಾಡುತ್ತಿದ್ದೇವೆ. ಈ ರೀತಿ ಕೆಲಸ ಮಾಡುವುದರಲ್ಲೂ ಒಂದು ರೀತಿಯ ಖುಷಿಯಿದೆ.

ಬರಹ – ರಕ್ಷಿತ್ ಸಾಲಿಯಾನ್.

(Copyrights owned by: billavaswarriors.com )


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »