TOP STORIES:

” ಹಿಂದು ಮತ್ತು ಕ್ರೈಸ್ತರ ಸಾಮರಸ್ಯದ ಸಂಕೇತ ಶ್ರಿ ಮಂಗ್ಲಿಮಾರ್ ಅಣ್ಣಪ್ಪಪಂಜುರ್ಲಿ ದೈವಸ್ಥಾನ “


ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಶ್ರಿ ಅಣ್ಣಪ್ಪಪಂಜುರ್ಲಿ ದೈವಸ್ತಾನ ಹಿಂದು ಮತ್ತೂ ಕ್ರೈಸ್ತರ ನಡುವಿನ ಸಾಮರಸ್ಯದ ಕೊಂಡಿ ಯಾಗಿದೆ. ಹೌದು ಅಮ್ಟಾಡಿ ಗ್ರಾಮದ ಗ್ರಾಮ ದೈವ ಅಣ್ಣಪ್ಪ ಪಂಜುರ್ಲಿಯ ಗುಡಿ (ಸಾನ) ಕಟ್ಟಿಸಿದವರು ಅಗತ್ತಿಮಾರು ಸಾಲ್ವದೊರ್ ಕಾಮತ್ (ಸಾಲು ಕಂಬತ್ತಿ)ಮೂಲತಃ ಕ್ರೈಸ್ತಧರ್ಮದವರಾದ ಇವರು ಅಣ್ಣಪ್ಪ ಪಂಜುರ್ಲಿ ದೈವದ ಪರಮಭಕ್ತರು,ಇವರು ಆ ಕಾಲದಲ್ಲಿ ಆಗರ್ಭ ಶ್ರಿಮಂತರಗಿದ್ದರು, ವರ್ಷದಲ್ಲಿ 12 ಪೂಜೆಗಳನ್ನು ಇಗರ್ಜಿಯಲ್ಲಿ ಸಲ್ಲಿಸಿದರೆ ಅದಕ್ಕೂ ಮಿಗಿಲಾಗಿ 13 ನೇಮಗಳನ್ನು ಅಣ್ಣಪ್ಪನಿಗೆ ನೀಡುತಿದ್ದರು. ಇವರಿಗೆ ತುಳುನಾಡಿನ ಸತ್ಯ ದೈವವಾದ ಅಣ್ಣಪ್ಪ ಪಂಜುರ್ಲಿಯ ಮೇಲೆ ಈ ರೀತಿಯಾದ ನಂಬಿಕೆ, ಭಕ್ತಿ ಬರಲು ಒಂದು ಕಾರಣವಿದೆ.


ಬಹಳ ವರ್ಷಗಳ ಹಿಂದೆ ಇದೆ ಸಾಲು ಕಂಬತ್ತಿ ತನ್ನ ಗೆಳೆಯರೊಂದಿಗೆ ನಲ್ಕೆಮಾರ್ ಗೆ ಬಂದು ಸಾರಾಯಿ ಸೇವಿಸಿ,ಅಮಲೆರಿಸಿಕೊಂಡು ದೈವಸ್ತಾನದ ಕಡೆ ಬರುವುದು ವಾಡಿಕೆಯಾಗಿತ್ತು, ಅಪ್ಪಟ ಕ್ರೈಸ್ತನಾಗಿದ್ದ ಇವನಿಗೆ ಸ್ವಲ್ಪ ಸ್ವಧರ್ಮದ ಮೇಲೆ ಪ್ರೀತಿ, ಊರಿನಲ್ಲಿ ಶ್ರಿಮಂತನೆಂಬ ಅಹಂಕಾರ ಹಾಗೂ ಮದಿರೆಯ ಅಮಲಿನಲ್ಲಿ ದೈವಸ್ತಾನವನ್ನು ಅದರ ಸುತ್ತಮುತ್ತಲಿನ ಪ್ರದೇಶವನ್ನು ಅಶೌಚಗೊಳಿಸುತಿದ್ದನು, ಇದರಿಂದ ಬೇಸರಗೊಂಡ ಗ್ರಾಮಸ್ತರು ವರ್ಷದ ನೇಮದ ಸಮಯದಲ್ಲಿ ನೇರವಾಗಿ ಅಣ್ಣಪ್ಪನ ಬಳಿ ದೂರು ಕೊಟ್ಟರು ಅದಕ್ಕೆ ದೈವವು “ನಾನು ನಿಮಗೊಂದು ಉಪಾಯ ಹೇಳುತ್ತೇನೆ ಮುಂದಿನ ಅಮಾವಾಸ್ಯೆಯ ದಿನ ರಾತ್ರಿ ನೀವೆಲ್ಲರೂ ಒಟ್ಟು ಸೇರಿ ದೈವಸ್ತಾನ ಪ್ರಾಂಗಣದ ತುಂಬಾ ನೆಲ್ಲಿಕಾಯಿಯನ್ನು ಹರಡಿಬಿಡಿ ಮುಂದಿನದ್ದು ನಾನು ನೋಡಿಕೊಳ್ಳುತ್ತೆನೆ “ಎಂದು ಅಭಯದ ನುಡಿಯನ್ನು ಕೊಟ್ಟಿತು.

@beautyoftulunad
ಹಾಗೆ ಗ್ರಾಮಸ್ತರು ದೈವ ಹೇಳಿದಂತೆಯೆ ನಡೆದುಕೊಂಡರು, ಆ ಅಮಾವಾಸ್ಯೆಯ ದಿನ ಸಾಲು ಕಂಬತ್ತಿ ಸಾರಾಯಿಯ ನಶೆಯಲ್ಲಿ ದೈವಸ್ತಾನದ ಪ್ರಾಂಗಣಕ್ಕೆ ಬಂದಾಗ ಚೆಲ್ಲಿದ್ದ ನೆಲ್ಲಿಕಾಯಿಯ ಅರಿವಿಲ್ಲದೆ ಅದರ ಮೇಲೆ ಕಾಲಿಟ್ಟು ಜಾರಿ ಬಿಳುತ್ತಾನೆ, ಅವನು ನೆಲಕ್ಕೆ ಬಿಳುತಿದ್ದಂತೆಯೆ ಅಣ್ಣಪ್ಪ ಪಂಜುರ್ಲಿಯು ಆತನ ಕೊರಳನ್ನು ಅಮುಕಿ ಹಿಡಿಯುತ್ತದೆ ಇದನ್ನು ನೋಡಿದ ಆತನ ಹಿಂಬಾಲಕರು ಹೆದರಿ ಓಡಿ ಹೋಗುತ್ತಾರೆ, ಆಗ ಸಾಲು ಕಂಬತ್ತಿಯು “ಯಾರು ನೀನು ಎಂದು ಕೇಳುತ್ತಾನೆ, ನನಗೆ ಏನೂ ಮಾಡಬೇಡ, ನನ್ನನ್ನೂ ಬಿಟ್ಟುಬಿಡು ಎಂದು ಕೇಳಿಕೊಳ್ಳು ತ್ತಾನೆ ಆಗ ದೈವವು “ನಾನು ಅಣ್ಣಪ್ಪ ದೈವ, ನೀನು ನನ್ನ ಸನ್ನಿಧಾನವನ್ನು ಹಾಳುಮಾಡುತಿದ್ದಿ ಎಂದು ಕೋಪದಿಂದ ನುಡಿಯಿತು ಆಗ ಭಯಗೊಂಡ ಸಾಲು ಕಂಬತ್ತಿ “ನನ್ನನ್ನೂ ಬಿಟ್ಟುಬಿಡು, ನಿನಗೆ ಏನು ಬೇಕೆಂದು ಕೇಳು ನಾನು ಕೊಡುತ್ತೇನೆ, ನನ್ನ ಜೀವನ ಪರಿಯಂತ ನಿನ್ನ ಆರಾಧನೆಯನ್ನು ಮಾಡಿಕೊಂಡು ಬರುತ್ತೇನೆ, ನನ್ನನ್ನು ನಂಬು” ಎಂದು ಕೇಳಿಕೊಂಡ ನಂತರ ಆತನನ್ನು ಬಿಟ್ಟು ಮಾಯವಾಗಿ ಹೋಯಿತು.

@beautyoftulunad
ನಂತರ ಸಾಲು ಕಂಬತ್ತಿಯು ಚರ್ಚಿನ ಸ್ತಳದಲ್ಲಿ ಅಣ್ಣಪ್ಪನಿಗೆ ಗುಡಿಯನ್ನು ಕಟ್ಟಿ, ವರ್ಷಂಪ್ರತಿ ಅದ್ದೂರಿಯಿಂದ ನೇಮೊತ್ಸವವನ್ನು ಮಾಡಿ ಅಣ್ಣಪ್ಪನನ್ನು ಭಕ್ತಿಪೂರ್ವಕವಾಗಿ
ಆರಾಧಿಸಿಕೊಂಡು ಬಂದ, ಇದ್ದಕ್ಕೆಯೆ “ಭಯವೆ ಭಕ್ತಿಯ ಮೂಲವೆಂದು ಹಿರಿಯರು ಹೇಳಿರಬೇಕು. ಈ ವಿಷಯವು ಮೊಡಂಕಾಪು ಇಗರ್ಜಿಯವರಿಗೆ ತಲುಪಿತು, ಆದರೆ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಇದ್ದರು, ಒಂದು ದಿನ ವಂದನಿಯ ಧರ್ಮ ಗುರುಗಳಾದ ಬಲ್ತಾಜಾರ್ ಅರಾನ್ಹಾ ಅವರು ಸಾಲು ಕಂಬತ್ತಿಯನ್ನು ಕರೆದು ದೇವರ ಸಮ್ಮುಖದಲ್ಲಿ ತಪ್ಪಿತಸ್ಥ, ಧರ್ಮ ಬಾಹಿರ ಕೆಲಸ ಮಾಡಿದವನು ಎಂದು ಹೇಳಿ ಒಂದು ಮಾತನ್ನು ಹೇಳಿದರು “ನೀನು ಸತ್ತರೆ ನರಕಕ್ಕೆ ಹೋಗುತ್ತಿ, ನಿನಗೆ ಸ್ವರ್ಗ ಸಿಗುವುದಿಲ್ಲ ಎಂದು ಹೇಳುತ್ತಾರೆ ಆಗ ಸಾಲು ಕಂಬತಿ ನಾನು ದೈವವನ್ನು ನಂಬುತ್ತೆನೆ, ಏಸುಸ್ವಾಮಿಯನ್ನು ನಂಬುತ್ತೆನೆ ನನ್ನ ಭಕ್ತಿ ಅಚಲ ಹಾಗಾಗಿ ನಾನು ಸತ್ತರೆ ಖಂಡಿತವಾಗಿ ಸ್ವರ್ಗಕ್ಕೆಹೋಗುತ್ತೇನೆ, ಇದರ ಗುರುತಾಗಿ ನಾನು ಸತ್ತದಿನ ಇಗರ್ಜಿಯ ಮುಖ್ಯದ್ವಾರದಲ್ಲಿ ನನ್ನ ಕೈಯ ಪಡಿಯಚ್ಚು ಮೂಡುತ್ತದೆ ಎಂದು ಹೇಳಿ ಹೋಗುತ್ತಾರೆ. @beautyoftulunad

“ಹಾಗೆಯೆ ಸಾಲು ಕಂಬತ್ತಿ ಸತ್ತ ದಿನ ಆತನ ಕೈಯ ಪಡಿಯಚ್ಚು ಮುಖ್ಯದ್ವಾರದಲ್ಲಿ ಇದ್ದದನ್ನು ಕಂಡ ಗುರುಗಳು ಅಚ್ಛರಿಗೊಂಡು ಸಾಲುಕಂಬತ್ತಿಗಾಗಿ ವಿಶೇಷ ಪೂಜೆ ಮಾಡಿದರು ಕೆಲವು ವರ್ಷಗಳ ಹಿಂದೆ ಆತನ ಕೈಯ ಗುರುತು ಮುಖ್ಯದ್ವಾರದಲ್ಲಿ ಕಾಣಸಿಗುತ್ತಿತ್ತು, ಇಗರ್ಜಿಯ ಪುನರ್ ನವೀಕರಣದ ನಂತರ ಈ ದ್ವಾರವನ್ನು ತೆರವುಗೊಳಿಸಿದ್ದಾರೆ. ಹಾಗಾಗಿ ಸಾಲು ಕಂಬತ್ತಿಯನ್ನು ಈಗಲೂ ದೈವ ವಲಸರಿ ನೇಮದ ಸಂಧರ್ಬ “ಸಾಲ್ ಕಂಬತ್ತಿ ಮಲ್ತಿನ ಕಟ್ಟ್ ಯನ್ನ “ಎಂದು ಆತನ ಭಕ್ತಿಯನ್ನು ಸ್ಮರಿಸುತ್ತದೆ. ಆಧಾರ ಗ್ರಂಥ: ” ಮಂಗ್ಲಿಮಾರ್ ಶ್ರಿ ಅಣ್ಣಪ್ಪ ಸ್ವಾಮಿ, ಜುಮಾದಿ ಬಂಟ ಪರಿವಾರ ದೈವಗಳು ನಡೆದು ಬಂದ ದಾರಿ ” ಬರಹ : ಫನಿಷ್ ಅಮ್ಟಾಡಿ

inputs: beauty of tulunad


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »