TOP STORIES:

ಹೀಗೆ ಮಾಡಿ, ಒಂದು ತಿಂಗಳು ಬರುವ ಗ್ಯಾಸ್ ಎರಡು ತಿಂಗಳು ಬರುತ್ತೆ!


ಅಡುಗೆ ಅನಿಲದ ಬೆಲೆಯು ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಇದು ಜನಸಾಮಾನ್ಯರ ಮೇಲೆ ತೀವ್ರ ಹೊಡೆತ ಹಾಕಿದೆ. ಹೀಗಾಗಿ ಅಡುಗೆ ಗ್ಯಾಸ್ ಬಳಕೆ ಮಾಡುವ ಜನರು ಅಡುಗೆ ಮನೆಯಲ್ಲಿ ಅಡುಗೆ ಮಾಡುವ ಸಂದರ್ಭ ಆದಷ್ಟು ಗ್ಯಾಸ್ ಉಳಿತಾಯ ಮಾಡಲು ಪ್ರಯತ್ನಿಸಬೇಕು.

ಗ್ಯಾಸ್ ನ್ನು ಉಳಿತಾಯ ಮಾಡಿದರೆ ಅದರಿಂದ ಹಣದ ಉಳಿತಾಯವು ಆಗುವುದು. ಹಾಗಾದರೆ ಗ್ಯಾಸ್ ಉಳಿಸುವುದು ಅಷ್ಟು ಸುಲಭವೇ ಎನ್ನುವ ಪ್ರಶ್ನೆಯು ಬರಬಹುದು. ಗ್ಯಾಸ್ ಉಳಿಸಲು ಏನು ಮಾಡಬೇಕು ಎಂದು ನೀವು ತಿಳಿಯಿರಿ.

​ಬರ್ನರ್ ಶುಚಿಯಾಗಿರಬೇಕು

ಗ್ಯಾಸ್ ನ್ನು ಉಳಿತಾಯ ಮಾಡಲು ನಿಯಮಿತವಾಗಿ ಬರ್ನರ್ ನ್ನು ಶುಚಿ ಮಾಡುತ್ತಲಿರಬೇಕು. ಬೆಂಕಿಯ ಬಣ್ಣವನ್ನು ಗಮನಿಸಿ ಮತ್ತು ಅದು ನೀಲಿ ಇದ್ದರೆ ಆಗ ಸರಿಯಾಗಿದೆ ಎಂದು ಹೇಳಬಹುದು.
ಆದರೆ ಕೆಂಪು, ಹಳದಿ ಅಥವಾ ಕಿತ್ತಳೆ ಬಣ್ಣದಲ್ಲಿದ್ದರೆ, ಆಗ ಅದು ಸರಿಯಾಗಿ ಉರಿಯುತ್ತಿಲ್ಲ ಎಂದರ್ಥ.ಬರ್ನರ್ ನ್ನು ನಿಯಮಿತವಾಗಿ ಶುಚಿ ಮಾಡುತ್ತಲಿದ್ದರೆ, ಅದರಿಂದ ಬೆಂಕಿಯ ಬಣ್ಣವು ನೀಲಿ ಆಗಿರುವುದು. ಇದರಿಂದ ಗ್ಯಾಸ್ ನಷ್ಟವಾಗುವುದು ತಪ್ಪುವುದು.

​ಪಾತ್ರೆಗಳನ್ನು ಒರೆಸಿ

ಕೆಲವರು ಕುಕ್ಕರ್, ಪಾತ್ರೆ ಇತ್ಯಾದಿಗಳನ್ನು ತೊಳೆದು ನೇರವಾಗಿ ಗ್ಯಾಸ್ ಮೇಲೆ ಇಟ್ಟುಬಿಡುವರು. ಆಧರೆ ಇದರಿಂದ ಗ್ಯಾಸ್ ವೆಚ್ಚವಾಗುವುದು.
ಇದಕ್ಕಾಗಿ ಪಾತ್ರೆಯನ್ನು ತೊಳೆದ ಬಳಿಕ ಸ್ವಲ್ಪ ಒರೆಸಿಕೊಳ್ಳಿ. ಇದರಿಂದ ಪಾತ್ರೆ ಬೇಗ ಬಿಸಿ ಆಗುವುದು ಹಾಗೂ ಗ್ಯಾಸ್ ವೆಚ್ಚವಾಗುವುದು ತಪ್ಪುವುದು.
ಮೊದಲೇ ತಯಾರಿಸಿಡಿ

ಅಡುಗೆ ಮಾಡಲು ಬೇಕಾಗಿರುವಂತಹ ಸಾಮಗ್ರಿಗಳನ್ನು ನೀವು ಮೊದಲೇ ತಯಾರು ಮಾಡಿಟ್ಟುಕೊಂಡು ಇದರ ಬಳಿಕ ಗ್ಯಾಸ್ ಉರಿಸಿ. ಗ್ಯಾಸ್ ಉರಿಸಿದ ಬಳಿಕ ತರಕಾರಿ ಕತ್ತರಿಸುವುದು ಸರಿಯಲ್ಲ. ಬೇಕಾಗುವಂತಹ ಸಾಮಗ್ರಿಗಳನ್ನು ಪಕ್ಕದಲ್ಲೇ ಇಟ್ಟುಕೊಂಡು ಅಡುಗೆ ಮಾಡಿ.

​ಪಾತ್ರೆಯ ಮುಚ್ಚಳ ಹಾಕಿಡಿ

ನೀವು ಯಾವುದೇ ಆಡುಗೆ ಮಾಡುತ್ತಲಿದ್ದರೂ ಆಗ ಪಾತ್ರೆಯ ಮುಚ್ಚಳ ಹಾಕಿಟ್ಟರೆ ಅದರಿಂದ ಬೇಗ ಬೇಯುವುದು ಹಾಗೂ ಅದರಿಂದ ಗ್ಯಾಸ್ ಕೂಡ ಉಳಿತಾಯ ಆಗುವುದು. ಪಾತ್ರೆಯ ಮುಚ್ಚಳವನ್ನು ಮುಚ್ಚಿಟ್ಟರೆ ಅದರಿಂದ ಹಬೆಯು ನಿರ್ಮಾಣವಾಗಿ ಆಹಾರ ಬೇಗ ಬೇಯುವುದು.

ಧಾನ್ಯ ಮತ್ತು ಅಕ್ಕಿ ನೆನೆಸಿಡಿ

ಕೆಲವೊಂದು ಧಾನ್ಯಗಳು ಬೇಯಲು ತುಂಬಾ ಸಮಯ ಬೇಕಾಗುವುದು. ಹೀಗಾಗಿ ಧಾನ್ಯಗಳು ಮತ್ತು ಅಕ್ಕಿಯನ್ನು ಕೆಲವು ಗಂಟೆಗಳ ಕಾಲ ನೆನೆಯಲು ಹಾಕಿ. ಇದರಿಂದ ಬೇಗನೆ ಬೇಯಲು ನೆರವಾಗುವುದು ಹಾಗೂ ಗ್ಯಾಸ್ ಉಳಿತಾಯವಾಗುವುದು.

​ಕೆಲವು ನಿಮಿಷ ಬಳಿಕ ಗ್ಯಾಸ್ ಕಡಿಮೆ ಮಾಡಿ

ಒಮ್ಮೆ ಪಾತ್ರೆಯು ಬಿಸಿಯಾದ ಬಳಿಕ ಗ್ಯಾಸ್ ಬೆಂಕಿ ಕಡಿಮೆ ಮಾಡಿ. ಆಹಾರ ಕುದಿಯಲು ಆರಂಭಿಸಿದ ವೇಳೆ ತುಂಬಾ ಕಡಿಮೆ ಮಾಡಿಕೊಳ್ಳಬಹುದು. ಇದರಿಂದ ತರಕಾರಿಗಳಲ್ಲಿ ಪೋಷಕಾಂಶಗಳು ಹಾಗೆ ಉಳಿಯುವುದು ಹಾಗೂ ಗ್ಯಾಸ್ ಬಳಕೆ ಕಡಿಮೆ ಆಗುವುದು.

​ಕುಕ್ಕರ್ ಬಳಸಿ

ಪ್ರೆಶರ್ ಕುಕ್ಕರ್ ನಲ್ಲಿ ಅಡುಗೆ ಬೇಗ ಆಗುವುದು ಎನ್ನುವುದು ಎಲ್ಲರಿಗೂ ತಿಳಿದೇ ಇದೆ. ಹೀಗಾಗಿ ಗ್ಯಾಸ್ ಖರ್ಚು ಕಡಿಮೆ ಮಾಡಲು ಕುಕ್ಕರ್ ನ್ನು ಬಳಸಿ. ಇದು ಸಮಯ ಹಾಗೂ ಗ್ಯಾಸ್ ಎರಡನ್ನು ಉಳಿತಾಯ ಮಾಡುವುದು.

ಅಗಲವಾದ ಪಾತ್ರೆ ಬಳಸಿ

ಕೆಲವರು ತುಂಬಾ ಸಣ್ಣ ಪಾತ್ರೆಗಳನ್ನು ಗ್ಯಾಸ್ ನಲ್ಲಿ ಇಡುವರು. ಇದರಿಂದ ಗ್ಯಾಸ್ ಹೊರಭಾಗಕ್ಕೆ ಬರುವುದು. ಗ್ಯಾಸ್ ನಲ್ಲಿ ಅಗಲವಾದ ಪಾತ್ರೆಗಳನ್ನು ಇಡಬೇಕು. ಇದರಿಂದ ಗ್ಯಾಸ್ ಹೊರಗೆ ಬರುವುದು ತಪ್ಪುವುದು ಹಾಗೂ ಗ್ಯಾಸ್ ನ ಉಳಿತಾಯ ಕೂಡ ಆಗುವುದು.

​ಲೀಕ್ ಇದೆಯಾ ಎಂದು ನೋಡಿ

ಬರ್ನರ್, ಪೈಪ್ ಮತ್ತು ರೆಗ್ಯೂಲೇಟರ್ ನಲ್ಲಿ ಗ್ಯಾಸ್ ಲೀಕ್ ಆಗುತ್ತಿದೆಯಾ ಎಂದು ನೋಡಿ. ಮೂಗಿನ ಮೂಲಕ ಸೋರಿಕೆ ಪತ್ತೆ ಮಾಡಬಹುದು. ಯಾವುದೇ ಲೀಕ್ ಇದ್ದರೆ ಆಗ ನೀವು ಬೇಗನೆ ಇದನ್ನು ಪತ್ತೆ ಮಾಡಿ.
ಗ್ಯಾಸ್ ನ ವಾಸನೆ ಬರುತ್ತಲಿದ್ದರೆ, ಆಗ ಲೀಕ್ ಇದೆ ಎಂದು ಅರ್ಥ ಮಾಡಿಕೊಳ್ಳಿ. ಕೆಲವೊಂದು ಸಲ ಇದು ಅಪಾಯಕಾರಿ ಕೂಡ ಆಗಬಹುದು. ಹೀಗಾಗಿ ಪದೇ ಪದೇ ಇದನ್ನು ಗಮನಿಸುತ್ತಿರಬೇಕು.
ಸೂಕ್ತ ಸರಬರಾಜುದಾರರಿಂದ ಪಡೆಯಿರಿ: ನೀವು ಸೂಕ್ತ ಸರಬರಾಜುದಾರರಿಂದ ಗ್ಯಾಸ್ ಖರೀದಿ ಮಾಡಿ. ಅನಧಿಕೃತ ಗ್ಯಾಸ್ ಬಳಕೆ ಮಾಡಬೇಡಿ. ಇದರ ತೂಕವನ್ನು ಸರಿಯಾಗಿ ಗಮನಿಸಿ ಪಡೆಯಿರಿ.

​ಕೊನೆ ಮಾತು

ನಿಮಗೆ ಈಗ ಗ್ಯಾಸ್ ಉಳಿತಾಯದ ಬಗ್ಗೆ ತಿಳಿದಿದೆ. ಇನ್ನು ನೀವು ಇದನ್ನು ಪಾಲಿಸಿಕೊಂಡು ಹೋಗಿ ನಿಮಗಾಗಿ ಹಾಗೂ ಕುಟುಂಬಕ್ಕಾಗಿ ಗ್ಯಾಸ್ ಉಳಿತಾಯ ಮಾಡಿ.
ಗ್ಯಾಸ್ ಉಳಿತಾಯವು ಪ್ರತಿನಿತ್ಯವೂ ಏನೂ ಬದಲಾವಣೆ ಉಂಟು ಮಾಡದು, ಆದರೆ ಇದು ತಿಂಗಳಲ್ಲಿ ಹಣ ಉಳಿತಾಯ ಮಾಡುವುದು. ಸಣ್ಣ ಸಣ್ಣ ಪ್ರಮಾಣದಲ್ಲಿನ ಉಳಿತಾಯವು ದೊಡ್ಡದಾಗುವುದು.


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »