TOP STORIES:

ಹೀಗೆ ಮಾಡಿ, ಒಂದು ತಿಂಗಳು ಬರುವ ಗ್ಯಾಸ್ ಎರಡು ತಿಂಗಳು ಬರುತ್ತೆ!


ಅಡುಗೆ ಅನಿಲದ ಬೆಲೆಯು ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಇದು ಜನಸಾಮಾನ್ಯರ ಮೇಲೆ ತೀವ್ರ ಹೊಡೆತ ಹಾಕಿದೆ. ಹೀಗಾಗಿ ಅಡುಗೆ ಗ್ಯಾಸ್ ಬಳಕೆ ಮಾಡುವ ಜನರು ಅಡುಗೆ ಮನೆಯಲ್ಲಿ ಅಡುಗೆ ಮಾಡುವ ಸಂದರ್ಭ ಆದಷ್ಟು ಗ್ಯಾಸ್ ಉಳಿತಾಯ ಮಾಡಲು ಪ್ರಯತ್ನಿಸಬೇಕು.

ಗ್ಯಾಸ್ ನ್ನು ಉಳಿತಾಯ ಮಾಡಿದರೆ ಅದರಿಂದ ಹಣದ ಉಳಿತಾಯವು ಆಗುವುದು. ಹಾಗಾದರೆ ಗ್ಯಾಸ್ ಉಳಿಸುವುದು ಅಷ್ಟು ಸುಲಭವೇ ಎನ್ನುವ ಪ್ರಶ್ನೆಯು ಬರಬಹುದು. ಗ್ಯಾಸ್ ಉಳಿಸಲು ಏನು ಮಾಡಬೇಕು ಎಂದು ನೀವು ತಿಳಿಯಿರಿ.

​ಬರ್ನರ್ ಶುಚಿಯಾಗಿರಬೇಕು

ಗ್ಯಾಸ್ ನ್ನು ಉಳಿತಾಯ ಮಾಡಲು ನಿಯಮಿತವಾಗಿ ಬರ್ನರ್ ನ್ನು ಶುಚಿ ಮಾಡುತ್ತಲಿರಬೇಕು. ಬೆಂಕಿಯ ಬಣ್ಣವನ್ನು ಗಮನಿಸಿ ಮತ್ತು ಅದು ನೀಲಿ ಇದ್ದರೆ ಆಗ ಸರಿಯಾಗಿದೆ ಎಂದು ಹೇಳಬಹುದು.
ಆದರೆ ಕೆಂಪು, ಹಳದಿ ಅಥವಾ ಕಿತ್ತಳೆ ಬಣ್ಣದಲ್ಲಿದ್ದರೆ, ಆಗ ಅದು ಸರಿಯಾಗಿ ಉರಿಯುತ್ತಿಲ್ಲ ಎಂದರ್ಥ.ಬರ್ನರ್ ನ್ನು ನಿಯಮಿತವಾಗಿ ಶುಚಿ ಮಾಡುತ್ತಲಿದ್ದರೆ, ಅದರಿಂದ ಬೆಂಕಿಯ ಬಣ್ಣವು ನೀಲಿ ಆಗಿರುವುದು. ಇದರಿಂದ ಗ್ಯಾಸ್ ನಷ್ಟವಾಗುವುದು ತಪ್ಪುವುದು.

​ಪಾತ್ರೆಗಳನ್ನು ಒರೆಸಿ

ಕೆಲವರು ಕುಕ್ಕರ್, ಪಾತ್ರೆ ಇತ್ಯಾದಿಗಳನ್ನು ತೊಳೆದು ನೇರವಾಗಿ ಗ್ಯಾಸ್ ಮೇಲೆ ಇಟ್ಟುಬಿಡುವರು. ಆಧರೆ ಇದರಿಂದ ಗ್ಯಾಸ್ ವೆಚ್ಚವಾಗುವುದು.
ಇದಕ್ಕಾಗಿ ಪಾತ್ರೆಯನ್ನು ತೊಳೆದ ಬಳಿಕ ಸ್ವಲ್ಪ ಒರೆಸಿಕೊಳ್ಳಿ. ಇದರಿಂದ ಪಾತ್ರೆ ಬೇಗ ಬಿಸಿ ಆಗುವುದು ಹಾಗೂ ಗ್ಯಾಸ್ ವೆಚ್ಚವಾಗುವುದು ತಪ್ಪುವುದು.
ಮೊದಲೇ ತಯಾರಿಸಿಡಿ

ಅಡುಗೆ ಮಾಡಲು ಬೇಕಾಗಿರುವಂತಹ ಸಾಮಗ್ರಿಗಳನ್ನು ನೀವು ಮೊದಲೇ ತಯಾರು ಮಾಡಿಟ್ಟುಕೊಂಡು ಇದರ ಬಳಿಕ ಗ್ಯಾಸ್ ಉರಿಸಿ. ಗ್ಯಾಸ್ ಉರಿಸಿದ ಬಳಿಕ ತರಕಾರಿ ಕತ್ತರಿಸುವುದು ಸರಿಯಲ್ಲ. ಬೇಕಾಗುವಂತಹ ಸಾಮಗ್ರಿಗಳನ್ನು ಪಕ್ಕದಲ್ಲೇ ಇಟ್ಟುಕೊಂಡು ಅಡುಗೆ ಮಾಡಿ.

​ಪಾತ್ರೆಯ ಮುಚ್ಚಳ ಹಾಕಿಡಿ

ನೀವು ಯಾವುದೇ ಆಡುಗೆ ಮಾಡುತ್ತಲಿದ್ದರೂ ಆಗ ಪಾತ್ರೆಯ ಮುಚ್ಚಳ ಹಾಕಿಟ್ಟರೆ ಅದರಿಂದ ಬೇಗ ಬೇಯುವುದು ಹಾಗೂ ಅದರಿಂದ ಗ್ಯಾಸ್ ಕೂಡ ಉಳಿತಾಯ ಆಗುವುದು. ಪಾತ್ರೆಯ ಮುಚ್ಚಳವನ್ನು ಮುಚ್ಚಿಟ್ಟರೆ ಅದರಿಂದ ಹಬೆಯು ನಿರ್ಮಾಣವಾಗಿ ಆಹಾರ ಬೇಗ ಬೇಯುವುದು.

ಧಾನ್ಯ ಮತ್ತು ಅಕ್ಕಿ ನೆನೆಸಿಡಿ

ಕೆಲವೊಂದು ಧಾನ್ಯಗಳು ಬೇಯಲು ತುಂಬಾ ಸಮಯ ಬೇಕಾಗುವುದು. ಹೀಗಾಗಿ ಧಾನ್ಯಗಳು ಮತ್ತು ಅಕ್ಕಿಯನ್ನು ಕೆಲವು ಗಂಟೆಗಳ ಕಾಲ ನೆನೆಯಲು ಹಾಕಿ. ಇದರಿಂದ ಬೇಗನೆ ಬೇಯಲು ನೆರವಾಗುವುದು ಹಾಗೂ ಗ್ಯಾಸ್ ಉಳಿತಾಯವಾಗುವುದು.

​ಕೆಲವು ನಿಮಿಷ ಬಳಿಕ ಗ್ಯಾಸ್ ಕಡಿಮೆ ಮಾಡಿ

ಒಮ್ಮೆ ಪಾತ್ರೆಯು ಬಿಸಿಯಾದ ಬಳಿಕ ಗ್ಯಾಸ್ ಬೆಂಕಿ ಕಡಿಮೆ ಮಾಡಿ. ಆಹಾರ ಕುದಿಯಲು ಆರಂಭಿಸಿದ ವೇಳೆ ತುಂಬಾ ಕಡಿಮೆ ಮಾಡಿಕೊಳ್ಳಬಹುದು. ಇದರಿಂದ ತರಕಾರಿಗಳಲ್ಲಿ ಪೋಷಕಾಂಶಗಳು ಹಾಗೆ ಉಳಿಯುವುದು ಹಾಗೂ ಗ್ಯಾಸ್ ಬಳಕೆ ಕಡಿಮೆ ಆಗುವುದು.

​ಕುಕ್ಕರ್ ಬಳಸಿ

ಪ್ರೆಶರ್ ಕುಕ್ಕರ್ ನಲ್ಲಿ ಅಡುಗೆ ಬೇಗ ಆಗುವುದು ಎನ್ನುವುದು ಎಲ್ಲರಿಗೂ ತಿಳಿದೇ ಇದೆ. ಹೀಗಾಗಿ ಗ್ಯಾಸ್ ಖರ್ಚು ಕಡಿಮೆ ಮಾಡಲು ಕುಕ್ಕರ್ ನ್ನು ಬಳಸಿ. ಇದು ಸಮಯ ಹಾಗೂ ಗ್ಯಾಸ್ ಎರಡನ್ನು ಉಳಿತಾಯ ಮಾಡುವುದು.

ಅಗಲವಾದ ಪಾತ್ರೆ ಬಳಸಿ

ಕೆಲವರು ತುಂಬಾ ಸಣ್ಣ ಪಾತ್ರೆಗಳನ್ನು ಗ್ಯಾಸ್ ನಲ್ಲಿ ಇಡುವರು. ಇದರಿಂದ ಗ್ಯಾಸ್ ಹೊರಭಾಗಕ್ಕೆ ಬರುವುದು. ಗ್ಯಾಸ್ ನಲ್ಲಿ ಅಗಲವಾದ ಪಾತ್ರೆಗಳನ್ನು ಇಡಬೇಕು. ಇದರಿಂದ ಗ್ಯಾಸ್ ಹೊರಗೆ ಬರುವುದು ತಪ್ಪುವುದು ಹಾಗೂ ಗ್ಯಾಸ್ ನ ಉಳಿತಾಯ ಕೂಡ ಆಗುವುದು.

​ಲೀಕ್ ಇದೆಯಾ ಎಂದು ನೋಡಿ

ಬರ್ನರ್, ಪೈಪ್ ಮತ್ತು ರೆಗ್ಯೂಲೇಟರ್ ನಲ್ಲಿ ಗ್ಯಾಸ್ ಲೀಕ್ ಆಗುತ್ತಿದೆಯಾ ಎಂದು ನೋಡಿ. ಮೂಗಿನ ಮೂಲಕ ಸೋರಿಕೆ ಪತ್ತೆ ಮಾಡಬಹುದು. ಯಾವುದೇ ಲೀಕ್ ಇದ್ದರೆ ಆಗ ನೀವು ಬೇಗನೆ ಇದನ್ನು ಪತ್ತೆ ಮಾಡಿ.
ಗ್ಯಾಸ್ ನ ವಾಸನೆ ಬರುತ್ತಲಿದ್ದರೆ, ಆಗ ಲೀಕ್ ಇದೆ ಎಂದು ಅರ್ಥ ಮಾಡಿಕೊಳ್ಳಿ. ಕೆಲವೊಂದು ಸಲ ಇದು ಅಪಾಯಕಾರಿ ಕೂಡ ಆಗಬಹುದು. ಹೀಗಾಗಿ ಪದೇ ಪದೇ ಇದನ್ನು ಗಮನಿಸುತ್ತಿರಬೇಕು.
ಸೂಕ್ತ ಸರಬರಾಜುದಾರರಿಂದ ಪಡೆಯಿರಿ: ನೀವು ಸೂಕ್ತ ಸರಬರಾಜುದಾರರಿಂದ ಗ್ಯಾಸ್ ಖರೀದಿ ಮಾಡಿ. ಅನಧಿಕೃತ ಗ್ಯಾಸ್ ಬಳಕೆ ಮಾಡಬೇಡಿ. ಇದರ ತೂಕವನ್ನು ಸರಿಯಾಗಿ ಗಮನಿಸಿ ಪಡೆಯಿರಿ.

​ಕೊನೆ ಮಾತು

ನಿಮಗೆ ಈಗ ಗ್ಯಾಸ್ ಉಳಿತಾಯದ ಬಗ್ಗೆ ತಿಳಿದಿದೆ. ಇನ್ನು ನೀವು ಇದನ್ನು ಪಾಲಿಸಿಕೊಂಡು ಹೋಗಿ ನಿಮಗಾಗಿ ಹಾಗೂ ಕುಟುಂಬಕ್ಕಾಗಿ ಗ್ಯಾಸ್ ಉಳಿತಾಯ ಮಾಡಿ.
ಗ್ಯಾಸ್ ಉಳಿತಾಯವು ಪ್ರತಿನಿತ್ಯವೂ ಏನೂ ಬದಲಾವಣೆ ಉಂಟು ಮಾಡದು, ಆದರೆ ಇದು ತಿಂಗಳಲ್ಲಿ ಹಣ ಉಳಿತಾಯ ಮಾಡುವುದು. ಸಣ್ಣ ಸಣ್ಣ ಪ್ರಮಾಣದಲ್ಲಿನ ಉಳಿತಾಯವು ದೊಡ್ಡದಾಗುವುದು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »