TOP STORIES:

ಹೀಗೆ ಮಾಡಿ, ಒಂದು ತಿಂಗಳು ಬರುವ ಗ್ಯಾಸ್ ಎರಡು ತಿಂಗಳು ಬರುತ್ತೆ!


ಅಡುಗೆ ಅನಿಲದ ಬೆಲೆಯು ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಇದು ಜನಸಾಮಾನ್ಯರ ಮೇಲೆ ತೀವ್ರ ಹೊಡೆತ ಹಾಕಿದೆ. ಹೀಗಾಗಿ ಅಡುಗೆ ಗ್ಯಾಸ್ ಬಳಕೆ ಮಾಡುವ ಜನರು ಅಡುಗೆ ಮನೆಯಲ್ಲಿ ಅಡುಗೆ ಮಾಡುವ ಸಂದರ್ಭ ಆದಷ್ಟು ಗ್ಯಾಸ್ ಉಳಿತಾಯ ಮಾಡಲು ಪ್ರಯತ್ನಿಸಬೇಕು.

ಗ್ಯಾಸ್ ನ್ನು ಉಳಿತಾಯ ಮಾಡಿದರೆ ಅದರಿಂದ ಹಣದ ಉಳಿತಾಯವು ಆಗುವುದು. ಹಾಗಾದರೆ ಗ್ಯಾಸ್ ಉಳಿಸುವುದು ಅಷ್ಟು ಸುಲಭವೇ ಎನ್ನುವ ಪ್ರಶ್ನೆಯು ಬರಬಹುದು. ಗ್ಯಾಸ್ ಉಳಿಸಲು ಏನು ಮಾಡಬೇಕು ಎಂದು ನೀವು ತಿಳಿಯಿರಿ.

​ಬರ್ನರ್ ಶುಚಿಯಾಗಿರಬೇಕು

ಗ್ಯಾಸ್ ನ್ನು ಉಳಿತಾಯ ಮಾಡಲು ನಿಯಮಿತವಾಗಿ ಬರ್ನರ್ ನ್ನು ಶುಚಿ ಮಾಡುತ್ತಲಿರಬೇಕು. ಬೆಂಕಿಯ ಬಣ್ಣವನ್ನು ಗಮನಿಸಿ ಮತ್ತು ಅದು ನೀಲಿ ಇದ್ದರೆ ಆಗ ಸರಿಯಾಗಿದೆ ಎಂದು ಹೇಳಬಹುದು.
ಆದರೆ ಕೆಂಪು, ಹಳದಿ ಅಥವಾ ಕಿತ್ತಳೆ ಬಣ್ಣದಲ್ಲಿದ್ದರೆ, ಆಗ ಅದು ಸರಿಯಾಗಿ ಉರಿಯುತ್ತಿಲ್ಲ ಎಂದರ್ಥ.ಬರ್ನರ್ ನ್ನು ನಿಯಮಿತವಾಗಿ ಶುಚಿ ಮಾಡುತ್ತಲಿದ್ದರೆ, ಅದರಿಂದ ಬೆಂಕಿಯ ಬಣ್ಣವು ನೀಲಿ ಆಗಿರುವುದು. ಇದರಿಂದ ಗ್ಯಾಸ್ ನಷ್ಟವಾಗುವುದು ತಪ್ಪುವುದು.

​ಪಾತ್ರೆಗಳನ್ನು ಒರೆಸಿ

ಕೆಲವರು ಕುಕ್ಕರ್, ಪಾತ್ರೆ ಇತ್ಯಾದಿಗಳನ್ನು ತೊಳೆದು ನೇರವಾಗಿ ಗ್ಯಾಸ್ ಮೇಲೆ ಇಟ್ಟುಬಿಡುವರು. ಆಧರೆ ಇದರಿಂದ ಗ್ಯಾಸ್ ವೆಚ್ಚವಾಗುವುದು.
ಇದಕ್ಕಾಗಿ ಪಾತ್ರೆಯನ್ನು ತೊಳೆದ ಬಳಿಕ ಸ್ವಲ್ಪ ಒರೆಸಿಕೊಳ್ಳಿ. ಇದರಿಂದ ಪಾತ್ರೆ ಬೇಗ ಬಿಸಿ ಆಗುವುದು ಹಾಗೂ ಗ್ಯಾಸ್ ವೆಚ್ಚವಾಗುವುದು ತಪ್ಪುವುದು.
ಮೊದಲೇ ತಯಾರಿಸಿಡಿ

ಅಡುಗೆ ಮಾಡಲು ಬೇಕಾಗಿರುವಂತಹ ಸಾಮಗ್ರಿಗಳನ್ನು ನೀವು ಮೊದಲೇ ತಯಾರು ಮಾಡಿಟ್ಟುಕೊಂಡು ಇದರ ಬಳಿಕ ಗ್ಯಾಸ್ ಉರಿಸಿ. ಗ್ಯಾಸ್ ಉರಿಸಿದ ಬಳಿಕ ತರಕಾರಿ ಕತ್ತರಿಸುವುದು ಸರಿಯಲ್ಲ. ಬೇಕಾಗುವಂತಹ ಸಾಮಗ್ರಿಗಳನ್ನು ಪಕ್ಕದಲ್ಲೇ ಇಟ್ಟುಕೊಂಡು ಅಡುಗೆ ಮಾಡಿ.

​ಪಾತ್ರೆಯ ಮುಚ್ಚಳ ಹಾಕಿಡಿ

ನೀವು ಯಾವುದೇ ಆಡುಗೆ ಮಾಡುತ್ತಲಿದ್ದರೂ ಆಗ ಪಾತ್ರೆಯ ಮುಚ್ಚಳ ಹಾಕಿಟ್ಟರೆ ಅದರಿಂದ ಬೇಗ ಬೇಯುವುದು ಹಾಗೂ ಅದರಿಂದ ಗ್ಯಾಸ್ ಕೂಡ ಉಳಿತಾಯ ಆಗುವುದು. ಪಾತ್ರೆಯ ಮುಚ್ಚಳವನ್ನು ಮುಚ್ಚಿಟ್ಟರೆ ಅದರಿಂದ ಹಬೆಯು ನಿರ್ಮಾಣವಾಗಿ ಆಹಾರ ಬೇಗ ಬೇಯುವುದು.

ಧಾನ್ಯ ಮತ್ತು ಅಕ್ಕಿ ನೆನೆಸಿಡಿ

ಕೆಲವೊಂದು ಧಾನ್ಯಗಳು ಬೇಯಲು ತುಂಬಾ ಸಮಯ ಬೇಕಾಗುವುದು. ಹೀಗಾಗಿ ಧಾನ್ಯಗಳು ಮತ್ತು ಅಕ್ಕಿಯನ್ನು ಕೆಲವು ಗಂಟೆಗಳ ಕಾಲ ನೆನೆಯಲು ಹಾಕಿ. ಇದರಿಂದ ಬೇಗನೆ ಬೇಯಲು ನೆರವಾಗುವುದು ಹಾಗೂ ಗ್ಯಾಸ್ ಉಳಿತಾಯವಾಗುವುದು.

​ಕೆಲವು ನಿಮಿಷ ಬಳಿಕ ಗ್ಯಾಸ್ ಕಡಿಮೆ ಮಾಡಿ

ಒಮ್ಮೆ ಪಾತ್ರೆಯು ಬಿಸಿಯಾದ ಬಳಿಕ ಗ್ಯಾಸ್ ಬೆಂಕಿ ಕಡಿಮೆ ಮಾಡಿ. ಆಹಾರ ಕುದಿಯಲು ಆರಂಭಿಸಿದ ವೇಳೆ ತುಂಬಾ ಕಡಿಮೆ ಮಾಡಿಕೊಳ್ಳಬಹುದು. ಇದರಿಂದ ತರಕಾರಿಗಳಲ್ಲಿ ಪೋಷಕಾಂಶಗಳು ಹಾಗೆ ಉಳಿಯುವುದು ಹಾಗೂ ಗ್ಯಾಸ್ ಬಳಕೆ ಕಡಿಮೆ ಆಗುವುದು.

​ಕುಕ್ಕರ್ ಬಳಸಿ

ಪ್ರೆಶರ್ ಕುಕ್ಕರ್ ನಲ್ಲಿ ಅಡುಗೆ ಬೇಗ ಆಗುವುದು ಎನ್ನುವುದು ಎಲ್ಲರಿಗೂ ತಿಳಿದೇ ಇದೆ. ಹೀಗಾಗಿ ಗ್ಯಾಸ್ ಖರ್ಚು ಕಡಿಮೆ ಮಾಡಲು ಕುಕ್ಕರ್ ನ್ನು ಬಳಸಿ. ಇದು ಸಮಯ ಹಾಗೂ ಗ್ಯಾಸ್ ಎರಡನ್ನು ಉಳಿತಾಯ ಮಾಡುವುದು.

ಅಗಲವಾದ ಪಾತ್ರೆ ಬಳಸಿ

ಕೆಲವರು ತುಂಬಾ ಸಣ್ಣ ಪಾತ್ರೆಗಳನ್ನು ಗ್ಯಾಸ್ ನಲ್ಲಿ ಇಡುವರು. ಇದರಿಂದ ಗ್ಯಾಸ್ ಹೊರಭಾಗಕ್ಕೆ ಬರುವುದು. ಗ್ಯಾಸ್ ನಲ್ಲಿ ಅಗಲವಾದ ಪಾತ್ರೆಗಳನ್ನು ಇಡಬೇಕು. ಇದರಿಂದ ಗ್ಯಾಸ್ ಹೊರಗೆ ಬರುವುದು ತಪ್ಪುವುದು ಹಾಗೂ ಗ್ಯಾಸ್ ನ ಉಳಿತಾಯ ಕೂಡ ಆಗುವುದು.

​ಲೀಕ್ ಇದೆಯಾ ಎಂದು ನೋಡಿ

ಬರ್ನರ್, ಪೈಪ್ ಮತ್ತು ರೆಗ್ಯೂಲೇಟರ್ ನಲ್ಲಿ ಗ್ಯಾಸ್ ಲೀಕ್ ಆಗುತ್ತಿದೆಯಾ ಎಂದು ನೋಡಿ. ಮೂಗಿನ ಮೂಲಕ ಸೋರಿಕೆ ಪತ್ತೆ ಮಾಡಬಹುದು. ಯಾವುದೇ ಲೀಕ್ ಇದ್ದರೆ ಆಗ ನೀವು ಬೇಗನೆ ಇದನ್ನು ಪತ್ತೆ ಮಾಡಿ.
ಗ್ಯಾಸ್ ನ ವಾಸನೆ ಬರುತ್ತಲಿದ್ದರೆ, ಆಗ ಲೀಕ್ ಇದೆ ಎಂದು ಅರ್ಥ ಮಾಡಿಕೊಳ್ಳಿ. ಕೆಲವೊಂದು ಸಲ ಇದು ಅಪಾಯಕಾರಿ ಕೂಡ ಆಗಬಹುದು. ಹೀಗಾಗಿ ಪದೇ ಪದೇ ಇದನ್ನು ಗಮನಿಸುತ್ತಿರಬೇಕು.
ಸೂಕ್ತ ಸರಬರಾಜುದಾರರಿಂದ ಪಡೆಯಿರಿ: ನೀವು ಸೂಕ್ತ ಸರಬರಾಜುದಾರರಿಂದ ಗ್ಯಾಸ್ ಖರೀದಿ ಮಾಡಿ. ಅನಧಿಕೃತ ಗ್ಯಾಸ್ ಬಳಕೆ ಮಾಡಬೇಡಿ. ಇದರ ತೂಕವನ್ನು ಸರಿಯಾಗಿ ಗಮನಿಸಿ ಪಡೆಯಿರಿ.

​ಕೊನೆ ಮಾತು

ನಿಮಗೆ ಈಗ ಗ್ಯಾಸ್ ಉಳಿತಾಯದ ಬಗ್ಗೆ ತಿಳಿದಿದೆ. ಇನ್ನು ನೀವು ಇದನ್ನು ಪಾಲಿಸಿಕೊಂಡು ಹೋಗಿ ನಿಮಗಾಗಿ ಹಾಗೂ ಕುಟುಂಬಕ್ಕಾಗಿ ಗ್ಯಾಸ್ ಉಳಿತಾಯ ಮಾಡಿ.
ಗ್ಯಾಸ್ ಉಳಿತಾಯವು ಪ್ರತಿನಿತ್ಯವೂ ಏನೂ ಬದಲಾವಣೆ ಉಂಟು ಮಾಡದು, ಆದರೆ ಇದು ತಿಂಗಳಲ್ಲಿ ಹಣ ಉಳಿತಾಯ ಮಾಡುವುದು. ಸಣ್ಣ ಸಣ್ಣ ಪ್ರಮಾಣದಲ್ಲಿನ ಉಳಿತಾಯವು ದೊಡ್ಡದಾಗುವುದು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »