TOP STORIES:

ಹೆಣ್ಣು ಕೂಡ ಒಂದು ಜೀವಿ ಎಂಬುವುದನ್ನು ಇಂದಿನ ಸಮಾಜ ಮರೆತಿದೆಯೇ ?


ಹೆಣ್ಣು
“ಯತ್ರ ನಾರ್ಯಸ್ತು ಪೂಜೆಯಂತೇ ತತ್ರ ದೇವತಾ”: ಅಂದರೆ “ಎಲ್ಲಿ ಹೆಣ್ಣನ್ನು ಪೂಜೆಸುತ್ತಾರೋ ಅಲ್ಲಿ ಸಕಲ ದೇವತೆಗಳು ನೆಲೆಸುತ್ತಾರೆ” ಆದರೆ ಬೇಸರದ ಸಂಗತಿಯೆಂದರೆ ಈ ೨೧ನೆಯ ಶತಮಾನದಲ್ಲಿ ಈ ಅರ್ಥ ಅಕ್ಷರಶ: ಸುಳ್ಳುಯೆನಿಸುತ್ತಿದೆ.

ಹೆಣ್ಣನ್ನು ಪೂಜೆಮಾಡುವುದು ಬೇಡ ಕನಿಷ್ಟ ಪಕ್ಷ ಅವಳು ಒಂದು ಜೀವಿ ,ಅವಳಿಗೂ ಈ ಭೂಮಿಯಲ್ಲಿ ಅವಳ ಇಚ್ಛೆಯಂತೇ ಬದುಕಲು ಬಿಟ್ಟರೆ ಸಾಕು..

‘ಹೆಣ್ಣು ‘ಒಬ್ಬಳು ಗಂಡಿನಂತೆ ಒಂದು ಜೀವಿ ,ಅವಳಿಗೂ ಮನಸ್ಸು ,ಭಾವನೆಗಳಿವೆ,ಅವಳು ಕೇವಲ ಉಸಿರಾಡುವ ಬೊಂಬೆಯಲ್ಲ ,ಅವಳಿಗೂ ಗಂಡಿನಂತೆ ಜೀವವಿದೆ . ಇದೆನ್ನೆಲ್ಲ ಮರೆತಂತಿದೆ ಗಂಡುಕುಲ . ‘ಹೆಣ್ಣು ‘ಅಂದರೆ ಕೇವಲ ನಿಮ್ಮ ಕಾಮದ ಬಯಕೆಗಳನ್ನ ತೀರಿಸುವ ಒಂದು ಯಂತ್ರವಾಗಿ ಕಾಣುತ್ತಾಳ ? ಮತ್ತೇಕೆ..ಅವಳ ಮೇಲಿನ ದೌರ್ಜನ್ಯ ,ಅತ್ಯಾಚಾರ, ಹಿಂಸೆ ಇನ್ನು ನಿಂತಿಲ್ಲ ..ಹೆಣ್ಣನ್ನು ಅಪಹರಿಸಿದಕ್ಕೆ ,ಹೆಣ್ಣಿನ ಮಾನಭಂಗ ಮಾಡಿದ್ದಕ್ಕೆ ರಾಮಾಯಣ ,ಮಹಾಭಾರತ ಎನ್ನುವ ಮಹಾಸಂಗ್ರಾಮವೇ ನಡೆದುಹೋಯಿತು. ಆದರೆ ಇಂದು ಹೆಣ್ಣಿನ ಮೇಲೆ ಅದೆಷ್ಟೋ ದೌರ್ಜನ್ಯ, ಅತ್ಯಾಚಾರಗಳು ನಡಿದಿದೆ ನಡೆಯುತ್ತಿದೆ . ಯಾಕಂದ್ರೆ ಅವಳು ‘ಹೆಣ್ಣು’ ಎನ್ನುವ ಕಾರಣವೆ??

   (Copyrights owned by: billavaswarriors.com )

ಒಂದೇ ರಾತ್ರಿಯಲ್ಲಿ ನೋಟ್ ಬ್ಯಾನ್ ಆಗುತ್ತೆ , ಒಂದೇ ರಾತ್ರಿಯಲ್ಲಿ ಸರಕಾರ ಬದಲಾಗುತ್ತೆ ,ಒಂದೇ ದಿನದಲ್ಲಿ ಎಲ್ಲ ಚೈನೀಸ್ ಆಪ್ ಟಿವಿ ಚಾನೆಲ್ ಬ್ಯಾನ್ ಆಗುತ್ತೆ ,ಆದರೆ ಯಾಕೆ ??ವ್ಯಾಘ್ರ ಕಾಮುಕರಿಗೆ ಶಿಕ್ಷೆ ಆಗುದಿಲ್ಲ. ಯಾಕಂದ್ರೆ ಒಂದೇ ಉತ್ತರ ಅವಳು ‘ಹೆಣ್ಣು’ ಅಲ್ಲವೇ.?

ಇಂದು ಮನುಷ್ಯ ಕಾಲಿಡದ ಕ್ಷೇತ್ರವಿಲ್ಲ . ಭೂಮಿಯಲ್ಲಿ ಮಾತ್ರವಲ್ಲದೆ ಹೊಸಜಗತ್ತನ್ನು ಹುಡುಕುತ್ತ ಆಕಾಶಕ್ಕೆ ಹಾರಿದ್ದಾನೆ . ಹಲವಾರು ಅಮೋಘ ಸಾಧನೆ ಮಾಡಿದ್ದಾನೆ. ಆದರೆ ಹೆಣ್ಣಿನ ಮೇಲಿನ ಅತ್ಯಾಚಾರಗಳು ನಡೆಯುತ್ತಲೇ ಇದೆ ಕಾರಣ ಅವಳು ‘ಹೆಣ್ಣು’…

ಗಂಡುಜಾತಿಯ ರಣಹೇಡಿಗಳೇ, ವ್ಯಾಘ್ರಕಾಮುಕರೇ ..ಯಾಕೆ ನಿಮಗೆ ಇನ್ನು ಅರ್ಥವಾಗುತ್ತಿಲ್ಲ ನಿಮಗೆ ಪ್ರೀತಿ ಕೊಟ್ಟು ನಿಮ್ಮನ್ನು ಒಂಭತ್ತು ತಿಂಗಳು ಸಾಕಿ ಸಲುಹಿದ ಆ ನಿಮ್ಮ ತಾಯಿಯು ಒಬ್ಬಳು ಹೆಣ್ಣಲ್ಲವೇ . ಅವಳು (ಹೆಣ್ಣು ) ಹುಟ್ಟುವಾಗ ಅಣ್ಣ- ತಮ್ಮ ಎನ್ನುವ ಪಟ್ಟಕಟ್ಟಿ ನಿಮಗೆ ಪ್ರೀತಿ ,ಸಂತೋಷ ನೀಡುವ ಅಕ್ಕ -ತಂಗಿ ಸ್ವರೂಪವಲ್ಲವೇ ಹೆಣ್ಣು ..

ಕೊನೆ ಪಕ್ಷ ನಿಮಗೆ ಹೆಣ್ಣಿಗೆ ತಾಯಿ ,ಅಕ್ಕ ,ತಂಗಿ ಸ್ಥಾನ ನೀಡಲು ಕಷ್ಟವಾದರೇ ಬಿಡಿ..ಕನಿಷ್ಟ ಪಕ್ಷ ಅವಳು ನಿಮ್ಮಂತೆಹೇ ಮನುಷ್ಯಳು ಅವಳಿಗೂ ಒಂದು ಜೀವವಿದೆ, ಜೀವನವಿದೆ..ಸಾವಿರಾರು ಬಣ್ಣ- ಬಣ್ಣದ ಕನಸುಗಳಿವೆ ,ಆ ಕನಸುಗಳಿಗೆ ಬಣ್ಣ ಹಚ್ಚುವ ಕೆಲಸಮಾಡದಿದ್ದರು ಪರವಾಗಿಲ್ಲ ಅವಳ ರೆಕ್ಕೆ ಕತ್ತರಿಸುವ ಕೆಲಸಮಾಡದಿರು ಮನುಜ…

ಒಮ್ಮೆ ಮನುಜನಾಗು ..ಹೆಣ್ಣನ್ನು ಕೆಟ್ಟ ದ್ರಷ್ಟಿಯಿಂದ ನೋಡುವುದನ್ನು ನಿಲ್ಲಿಸು ..ಈ ಮನುಷ್ಯ ಜನುಮದಲ್ಲಿ ಮಾನವನಾಗಿ ಬಾಳು .

“ನಮ್ಮ ರಾಷ್ಟ್ರಪಿತ ಮಹಾತ್ಮಾ ಗಾಂಧಿ “ಈ ರೀತಿ ಹೇಳಿದ್ದಾರೆ “ಮಧ್ಯರಾತ್ರಿ ೧೨ಗಂಟೆಗೆ ಹೆಣ್ಣು ಹೊರಗಡೆ ಹೋಗಿ ಮನೆಗೆ ಸುರಕ್ಷಿತವಾಗಿ ಹಿಂತಿರುಗಿ ಬಂದರೆ ಆ ದಿನ ನಮಗೆ ಸ್ವಾತಂತ್ರಾ ಸಿಕ್ಕಿದೆ ಎಂದರ್ಥ”.ಒಮ್ಮೆ ಈ ಪ್ರಶ್ನೆಯನ್ನು ಮನದಲ್ಲಿ ಕೇಳಿ ನೋಡಿ ಉತ್ತರ ಪ್ರಶ್ನೆಯಾಗಿಯೇ ಉಳಿದುಬಿಡುತ್ತೆ
ಅಲ್ಲವೇ.. ಸಾಧ್ಯವಾದರೆ ಮಾತ್ರ ಮಾತ್ರ .. ಹೆಣ್ಣಿಗೆ ನಿಮ್ಮ ಬೆಂಬಲ ಸಹಾಯ ನೀಡಿ ಅದು ಬಿಟ್ಟು ಅವಳ ಮಾನಹರಣ ಮಾಡದಿರಿ ಅವಳ ಮೇಲಿನ ಅತ್ಯಾಚಾರ ನಿಲ್ಲುವ ನಿಟ್ಟಿಗೆ ಒಂದು ಪ್ರಯತ್ನ ಮಾಡಿ..ಅದು ಬಿಟ್ಟು ಅವಳ ದೌರ್ಜನ್ಯ ಮಾಡದಿರು, ಇಲ್ಲದಿದ್ದರೆ ಕೇಳು ಮನುಜ ಕಾಲ ಪಾಠ ಕಲಿಸಲು ಒಂದೊಂದು ಹೆಜ್ಜೆ ಮುಂದೆ ಇಟ್ಟಿದೆ ಪ್ರವಾಹ ,ಕರೋನ ಭೂಕಂಪ, ಪ್ರಕೃತಿ ವಿಕೋಪಗಳಿಂದ ಪಾಠ ಕಲಿಯದೇ ನೀ ಗೆದ್ದೇ ಎಂದು ಬೀಗಬೇಡ
ಮನುಜ…ಬೀಗಬೇಡ..ಕಾಲದಯೆದುರು ನೀ ತೃಣ ಸಮಾನವೆಂದು ನೆನಪಿಟ್ಟುಕೋ. ಇನ್ನಾದರೂ ಎಚ್ಚೆತ್ತಿಕೊ ಇಲ್ಲವಾದ್ರೆ ಕಾಲದ ಉಗ್ರರೂಪವ ಸಹಿಸುವ ಶಕ್ತಿ ನಿನ್ನಲ್ಲಿ ಇನ್ನು ಉಳಿದಿಲ್ಲ ಮನುಜ …ನೀ ಬದಲಾಗು ..ನೀ ಮನುಷ್ಯನಾಗಿ ಬದಲಾಗು..ಇನ್ನು ಬದಲಾಗದಿದ್ದರೆ ಕಾಲದ ಎದುರು ಸುಟ್ಟು ಭಸ್ಮವಾಗಿಬಿಡುತ್ತೀಯ.ಕಾಲ ತನ್ನ ಉಗ್ರರೂಪ ತೋರಿಸುವ ಸಮಯ ಬಹಳ ಹತ್ತಿರದಲ್ಲಿದೆ .

ರಮ್ಯಾ ಸಾಲಿಯಾನ್
ಬೋರುಗುಡ್ಡೆ, ಮೂಡಬಿದ್ರೆ

   (Copyrights owned by: billavaswarriors.com )


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »