TOP STORIES:

ಹೊಟ್ಟೆ ಬೊಜ್ಜಿನ ಚಿಂತೇನಾ ? ಅಡುಗೆ ಮನೆಯಲ್ಲಿಯೇ ಇದೆ ಮದ್ದು


ಬೊಜ್ಜಿಲ್ಲದ ವ್ಯಕ್ತಿಗಳಿಲ್ಲ ಎನ್ನುವ ಸ್ಥಿತಿ ಈಗಿದೆ. ಎಲ್ಲರ ಹೊಟ್ಟೆ ಮುಂದೆ ಬಂದಿರೋದನ್ನು ನಾವು ನೋಡ್ಬಹುದು. ಏನೇ ಮಾಡಿದ್ರೂ ಈ ಕೊಬ್ಬು ಇಳಿಯಲ್ಲ ಎನ್ನುವವರು ಅಡುಗೆ ಮನೆಯಲ್ಲಿರೋ ಈ ಮನೆಮದ್ದನ್ನು ಒಮ್ಮೆ ಟ್ರೈ ಮಾಡಿ.

 

ನಿಮ್ಮ ಹೊಟ್ಟೆ ಬೊಜ್ಜು ಇಳಿಸುತ್ತೆ ಈ ಪಾನೀಯ : ಅಡುಗೆ ಮನೆಯಲ್ಲಿರುವ ಜೇನುತುಪ್ಪ ಹಾಗೂ ದಾಲ್ಚಿನಿಯನ್ನು ಬಳಸಿ ನೀವು ಬೊಜ್ಜನ್ನು ಕಡಿಮೆ ಮಾಡ್ಕೊಳ್ಳಬಹುದು. ಜೇನುತುಪ್ಪ ಮತ್ತು ದಾಲ್ಚಿನಿ ವಿವಿಧ ಪೋಷಕಾಂಶ (Nutrient) ಗಳನ್ನು ಹೊಂದಿದೆ. ಅದು ಆರೋಗ್ಯ (Health) ಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಆದ್ರೆ ಅವುಗಳನ್ನು ಸೇವಿಸುವ ಸರಿಯಾದ ಸಮಯ ಮತ್ತು ಸರಿಯಾದ ಮಾರ್ಗ ತಿಳಿದಿರಬೇಕು.

ದಾಲ್ಚಿನಿ (Cinnamon) ಹಾಗೂ ಜೇನುತುಪ್ಪ (Honey) ದ ಪಾನೀಯ ತಯಾರಿಸುವ ವಿಧಾನ : ಒಂದು ಪಾತ್ರೆಗೆ ಒಂದು ಕಪ್ ನೀರನ್ನು ಹಾಕಿ, ಅದನ್ನು ಕುದಿಸಿ. ನೀರು ಕುದಿಯುತ್ತಿರುವ ವೇಳೆ ಅದಕ್ಕೆ ಒಂದು ದಾಲ್ಚಿನಿ ಕಡ್ಡಿಯನ್ನು ಹಾಕಿ. ನೀವು ದಾಲ್ಚಿನಿ ಪುಡಿಯನ್ನು ಕೂಡ ಹಾಕ್ಬಹುದು. ಈ ನೀರನ್ನು 5 -7 ನಿಮಿಷ ಚೆನ್ನಾಗಿ ಕುದಿಸಿ. ನಂತ್ರ ಗ್ಯಾಸ್ ಬಂದ್ ಮಾಡಿ ಇದು ಸ್ವಲ್ಪ ತಣ್ಣಗಾದ್ಮೇಲೆ ಒಂದು ಚಮಚ ಜೇನುತುಪ್ಪ ಬೆರೆಸಿ ಸೇವನೆ ಮಾಡಿ. ಇದಕ್ಕೆ ನೀವು ನಿಂಬೆ ರಸವನ್ನು ಕೂಡ ಬೆರೆಸಿಕೊಂಡು ಕುಡಿಯಬಹುದು. ವರ್ಕ್ ಔಟ್ ಗೆ ಹೋಗುವ ಮುನ್ನ, ಹಸಿವಾದಾಗ ಅಥವಾ ರಾತ್ರಿ ಮಲಗಲು ಹೋಗುವ ಮೊದಲು ನೀವು ಈ ನೀರನ್ನು ಅವಶ್ಯವಾಗಿ ಸೇವನೆ ಮಾಡಿ.

ಈ ಪಾನೀಯದಿಂದಾಗುವ ಲಾಭಗಳು : ಜೇನುತುಪ್ಪದಲ್ಲಿ ಅನೇಕ ಪೋಷಕಾಂಶಗಳಿವೆ. ಅದು ತೂಕ ಇಳಿಕೆಗೆ ಸಹಕಾರಿಯಾಗಿದೆ. ಜೇನುತುಪ್ಪದಲ್ಲಿ ಅನೇಕ ಪ್ರಮುಖ ಜೀವಸತ್ವಗಳು ಮತ್ತು ಖನಿಜಗಳಿವೆ. ಈ ಎಲ್ಲಾ ಪೋಷಕಾಂಶಗಳು ಅದರಲ್ಲಿರುವ ಸಕ್ಕರೆಯ ಪರಿಣಾಮವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಜೇನುತುಪ್ಪದಲ್ಲಿರುವ ಫ್ರಕ್ಟೋಸ್ ಹೊಟ್ಟೆಯ ಕೊಬ್ಬನ್ನು ಸುಡುತ್ತದೆ. ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ದೀರ್ಘ ಸಮಯ ದೈಹಿಕವಾಗಿ ಸಕ್ರಿಯವಾಗಿರಲು ಇದು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಗೂ ಜೇನುತುಪ್ಪ ಒಳ್ಳೆಯದು. ಸರಿಯಾದ ಪ್ರಮಾಣದಲ್ಲಿ ಜೇನುತುಪ್ಪ ಸೇವನೆ ಮಾಡಿದ್ರೆ ಜೀರ್ಣಕ್ರಿಯೆ ಸರಿಯಾಗಿ ಆಗುತ್ತದೆ.

 

ಇನ್ನು ದಾಲ್ಚನಿಯಲ್ಲಿ ಸಾಕಷ್ಟು ಪೋಷಕಾಂಶವಿದೆ. ತೂಕ ಇಳಿಕೆ ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಇದು ಸಹಕಾರಿ. ದಾಲ್ಚಿನಿ ನೀರಿನ ಸೇವನೆ ಮಾಡೋದ್ರಿಂದ ಚಯಾಪಚಯ ಸುಗಮವಾಗುತ್ತದೆ. ಹೊಟ್ಟೆಯಲ್ಲಿ ಸಂಗ್ರಹವಾಗಿರುವ ಕೊಬ್ಹು ಕರಗುತ್ತದೆ. ದಾಲ್ಚಿನಿ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ದೇಹದಲ್ಲಿ ಹೆಚ್ಚುತ್ತಿರುವ ಸಕ್ಕರೆಯ ಮಟ್ಟವು ಹೊಟ್ಟೆಯ ಮೇಲೆ ಹೆಚ್ಚುವರಿ ಕೊಬ್ಬಿನ ಶೇಖರಣೆಗೆ ಕಾರಣವಾಗಬಹುದು. ಈ ಸಂದರ್ಭದಲ್ಲಿ ಜೇನುತುಪ್ಪ ನೈಸರ್ಗಿಕವಾಗಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹಸಿವನ್ನು ನಿಯಂತ್ರಿಸುತ್ತದೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »