TOP STORIES:

FOLLOW US

10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ ಪದ್ಮರಾಜ್ ಆರ್


10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನುಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ

ಸಮಾಜ ಸುಧಾರಕ ಸಂತರೆನಿಸಿಕೊಂಡ ಇವರಿಬ್ಬರ ಸಂದೇಶಗಳಿರುವ ಪಠ್ಯ ಭಾಗವನ್ನು, ಪಠ್ಯಪುಸ್ತಕ ಪರಿಷ್ಕರಣೆಯ ವೇಳೆಪರಿಗಣಿಸದೆ ನಿರ್ಲಕ್ಷಿಸಿರುವುದು,

ಜಾತಿಧರ್ಮಗಳ ಕಲಹದ ಬೇಗೆಯಲ್ಲಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುವ ಪಕ್ಷಗಳ ದುರುದ್ದೇಶಪೂರಿತ ನಡೆಯಾಗಿ ಕಂಡರೂ, ಪಠ್ಯ ಪರಿಷ್ಕರಣ ಸಮಿತಿ, ಇಲಾಖೆ ಅಥವಾ ಸರಕಾರ ಕುರಿತು ಯಾವುದೇ ಸ್ಪಷ್ಟೀಕರಣ ನೀಡದೆ, ಸಂತರ ತತ್ವಸಿದ್ಧಾಂತಗಳನ್ನು ಅನುಸರಿಸುತ್ತಿರುವ ಅವರ ಅನುಯಾಯಿಗಳಿಗೆ ಮಾಡಿದ ಬಹಿರಂಗ ಅವಮಾನ ಎಂಬುದು ಸತ್ಯ.

ಜಾತಿಪದ್ಧತಿಯ ಕಪಿ ಮುಷ್ಟಿಯಲ್ಲಿ ನಲುಗಿ, ಅಸ್ಪೃಶ್ಯತೆಯ ಪರಾಕಾಷ್ಠೆ ತಲುಪಿ, ಮತಾಂತರದ ಸುಳಿಗೆ ಸಿಲುಕಿದ್ದ ಸನಾತನಹಿಂದೂಧರ್ಮದ ಬಹುಸಂಖ್ಯಾತ ಹಿಂದುಳಿದ ವರ್ಗದ ಜನರ ಧ್ವನಿಯಾಗಿ, ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕಪರಿವರ್ತನೆಯ ಹರಿಕಾರರೆನಿಸಿದ ನಾರಾಯಣ ಗುರುಗಳ ತತ್ವ ಸಂದೇಶ, ಪ್ರಸ್ತುತ ಸನ್ನಿವೇಶದಲ್ಲಿ ಇಂದಿನ ಯುವ ಪೀಳಿಗೆಗೆ ಅತ್ಯಂತಮಹತ್ವಪೂರ್ಣದ್ದಾಗಿದೆ.

ಅಸಹಿಷ್ಣುತೆ, ಅಸ್ಪೃಶ್ಯತೆ, ಕೋಮುಭಾವನೆ ಕೆರಳಿಸುವ ಘಟನೆಗಳು ಸೇರಿದಂತೆ ಪ್ರಪಂಚದಾದ್ಯಂತ  ಆಂತರಿಕ ಕಲಹಗಳುನಡೆಯುತ್ತಿರುವ ಸಂದರ್ಭದಲ್ಲಿ, ಮುಂದಿನ ಪೀಳಿಗೆ ಶಾಂತಿ ಸೌಹಾರ್ದತೆಯಿಂದ ಬಾಳಿ ಬದುಕಲು ಇಂತಹ ತತ್ವಜ್ಞಾನಿಗಳ, ಸಾಮಾಜಿಕ ಪರಿವರ್ತಕರ ಜೀವನ ಸಂದೇಶ ಅತೀ ಅವಶ್ಯಕವಾದುದು.

ಆದ್ದರಿಂದ ಸರಕಾರ ಕುರಿತು ಮರುಚಿಂತನೆ ನಡೆಸಬೇಕಾಗಿ ಆಗ್ರಹಿಸುತ್ತಿದ್ದೇವೆ.

Lಪದ್ಮರಾಜ್ ಆರ್.

ಕೋಶಾಧಿಕಾರಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಸಂಸ್ಥಾಪಕರು ಗುರು ಬೆಳದಿಂಗಳು (ರಿ) ಕುದ್ರೋಳಿ 


Share:

More Posts

Category

Send Us A Message

Related Posts

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ


Share       ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ


Read More »

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ


Share       ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು


Read More »