TOP STORIES:

10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ ಪದ್ಮರಾಜ್ ಆರ್


10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನುಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ

ಸಮಾಜ ಸುಧಾರಕ ಸಂತರೆನಿಸಿಕೊಂಡ ಇವರಿಬ್ಬರ ಸಂದೇಶಗಳಿರುವ ಪಠ್ಯ ಭಾಗವನ್ನು, ಪಠ್ಯಪುಸ್ತಕ ಪರಿಷ್ಕರಣೆಯ ವೇಳೆಪರಿಗಣಿಸದೆ ನಿರ್ಲಕ್ಷಿಸಿರುವುದು,

ಜಾತಿಧರ್ಮಗಳ ಕಲಹದ ಬೇಗೆಯಲ್ಲಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುವ ಪಕ್ಷಗಳ ದುರುದ್ದೇಶಪೂರಿತ ನಡೆಯಾಗಿ ಕಂಡರೂ, ಪಠ್ಯ ಪರಿಷ್ಕರಣ ಸಮಿತಿ, ಇಲಾಖೆ ಅಥವಾ ಸರಕಾರ ಕುರಿತು ಯಾವುದೇ ಸ್ಪಷ್ಟೀಕರಣ ನೀಡದೆ, ಸಂತರ ತತ್ವಸಿದ್ಧಾಂತಗಳನ್ನು ಅನುಸರಿಸುತ್ತಿರುವ ಅವರ ಅನುಯಾಯಿಗಳಿಗೆ ಮಾಡಿದ ಬಹಿರಂಗ ಅವಮಾನ ಎಂಬುದು ಸತ್ಯ.

ಜಾತಿಪದ್ಧತಿಯ ಕಪಿ ಮುಷ್ಟಿಯಲ್ಲಿ ನಲುಗಿ, ಅಸ್ಪೃಶ್ಯತೆಯ ಪರಾಕಾಷ್ಠೆ ತಲುಪಿ, ಮತಾಂತರದ ಸುಳಿಗೆ ಸಿಲುಕಿದ್ದ ಸನಾತನಹಿಂದೂಧರ್ಮದ ಬಹುಸಂಖ್ಯಾತ ಹಿಂದುಳಿದ ವರ್ಗದ ಜನರ ಧ್ವನಿಯಾಗಿ, ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕಪರಿವರ್ತನೆಯ ಹರಿಕಾರರೆನಿಸಿದ ನಾರಾಯಣ ಗುರುಗಳ ತತ್ವ ಸಂದೇಶ, ಪ್ರಸ್ತುತ ಸನ್ನಿವೇಶದಲ್ಲಿ ಇಂದಿನ ಯುವ ಪೀಳಿಗೆಗೆ ಅತ್ಯಂತಮಹತ್ವಪೂರ್ಣದ್ದಾಗಿದೆ.

ಅಸಹಿಷ್ಣುತೆ, ಅಸ್ಪೃಶ್ಯತೆ, ಕೋಮುಭಾವನೆ ಕೆರಳಿಸುವ ಘಟನೆಗಳು ಸೇರಿದಂತೆ ಪ್ರಪಂಚದಾದ್ಯಂತ  ಆಂತರಿಕ ಕಲಹಗಳುನಡೆಯುತ್ತಿರುವ ಸಂದರ್ಭದಲ್ಲಿ, ಮುಂದಿನ ಪೀಳಿಗೆ ಶಾಂತಿ ಸೌಹಾರ್ದತೆಯಿಂದ ಬಾಳಿ ಬದುಕಲು ಇಂತಹ ತತ್ವಜ್ಞಾನಿಗಳ, ಸಾಮಾಜಿಕ ಪರಿವರ್ತಕರ ಜೀವನ ಸಂದೇಶ ಅತೀ ಅವಶ್ಯಕವಾದುದು.

ಆದ್ದರಿಂದ ಸರಕಾರ ಕುರಿತು ಮರುಚಿಂತನೆ ನಡೆಸಬೇಕಾಗಿ ಆಗ್ರಹಿಸುತ್ತಿದ್ದೇವೆ.

Lಪದ್ಮರಾಜ್ ಆರ್.

ಕೋಶಾಧಿಕಾರಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಸಂಸ್ಥಾಪಕರು ಗುರು ಬೆಳದಿಂಗಳು (ರಿ) ಕುದ್ರೋಳಿ 


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »